Friday, January 30, 2026

ಮಳೆಗಾಲ ಪ್ರಾರಂಭ ಮುಂಚೆ ಬಂಟ್ವಾಳ ಕ್ಷೇತ್ರದ ಅಣೆಕಟ್ಟುಗಳ ಬಹುತೇಕ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಶಾಸಕ ರಾಜೇಶ್ ನಾಯ್ಕ್ ಸೂಚನೆ

ಬಂಟ್ವಾಳ : ಪಲ್ಘುಣಿ ನದಿಗೆ ಅಡ್ದಲಾಗಿ ಪಶ್ಚಿಮ ವಾಹಿಣಿ ಯೋಜನೆ ಯಡಿಯಲ್ಲಿ ಬಂಟ್ವಾಳ -ಮಂಗಳೂರು ಸಂಪರ್ಕ ಸೇರಿದಂತೆ ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ದೋಟ ಎಂಬಲ್ಲಿನ ರೂ.48 ಕೋಟಿ ” ಅನುದಾನ ವೆಚ್ಚದ ಅಣೆಕಟ್ಟು ಸಹಿತ ಸೇತುವೆ ಕಾಮಗಾರಿಯನ್ನು ಮಳೆಗಾಲ ಪ್ರಾರಂಭ ಮುಂಚೆಯೇ ಬಹುತೇಕ ಪೂರ್ಣಗೋಳಿಸಲು ಸಣ್ಣ ನೀರಾವರಿಯ ಇಂಜಿನಿಯರ್ ಗಳಿಗೆ ಮತ್ತು ಸಂಬಂಧಿಸಿದ ವರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಸೂಚನೆ ನೀಡಿದರು.

ಕೊರೊನಾ ಹತೋಟಿ ಬಗ್ಗೆ ಸಂಗಬೆಟ್ಟು ಗ್ರಾಮಪಂಚಾಯತ್ ಭೇಟಿ ನೀಡಿ ಪಂಚಾಯತ್ ಮಟ್ಟದ ಟಾಸ್ಕ್ ಪೊರ್ಸ್ ಸಮಿತಿಯು ಕೈಗೊಂಡ ಅಗತ್ಯಕ್ರಮಗಳ ಪರಿಶೀಲನೆ ಸಂದರ್ಭದಲ್ಲಿ ಗ್ರಾಮಸ್ಥರ ಬೇಡಿಕೆಯಂತೆ ಅಣೆಕಟ್ಟು ಕಾಮಗಾರಿ ವಿಳಂಬ ಹಾಗೂ ಕೂಲಿಕಾರ್ಮಿಕರ ಸ್ಥಿತಿಯನ್ನು ಅವಲೋಕಿಸಲು ಶಾಸಕರು ದಿಡೀರನೆ ಅಣೆಕಟ್ಟು ಕಾಮಗಾರಿ ಇಂದು ವಿಕ್ಷಿಸಿ ಅಧಿಕಾರಿ ಗಳಿಗೆ ಸಲಹೆ ಸೂಚನೆ ನೀಡಿದರು.

ಕಾಮಗಾರಿಗೆ ಈ ಹಿಂದೆ ಮಂಜೂರು ಗೊಂಡ 16 ಕೋಟಿ ಅನುದಾನವನ್ನು ಊರವರ ಬೇಡಿಕೆಯ ಹಿನ್ನೆಲೆಯಲ್ಲಿ 32 ಕೋಟಿಗೆ ಹೆಚ್ಚಿಸ್ಸಿ ಸೇತುವೆ ಅಗಲೀಕರಣ ಮತ್ತು ಘನವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಬಂಟ್ವಾಳ ಮತ್ತು ಮಂಗಳೂರು ತಾಲೂಕಿನ ಅಣೆಕಟ್ಟು ಇಕ್ಕೆಲಗಳಲ್ಲಿನ ರೈತರ ಬೇಡಿಕೆ ಮೇರೆಗೆ ಎರಡು ಬದಿಗಳೆಲ್ಲಿ ಸುಮಾರು 20 ಕೀ.ಮೀ ಉದ್ದಕ್ಕೆ ಕೃಷಿ ಭೂಮಿಗೆ ನೀರು ಹಾದು ಹೋಗಲು 12 ಕೋಟಿ ಅನುದಾನ ಮತ್ತೆ ಮಂಜೂರು ಗೋಳಿಸಲಾಗಿದ್ದು ಒಟ್ಟು 42 ಕೋಟಿ ವೆಚ್ಚದ ಈ ಕಾಮಗಾರಿ ತುರ್ತು ಮುಗಿಸುವ ದೃಷ್ಟಿಯಿಂದ ಅಳಮಟ್ಟಿ ಅಣೆಕಟ್ಟು ನಿರ್ಮಾಣ ತಜ್ಞರುನ್ನು ತರಿಸಲು ಸರ್ಕಾರದ ವತಿಯಿಂದ ಕ್ರಮಕೈಗೊಳ್ಳುವುದಾಗಿ ಶಾಸಕ ರಾಜೇಶ್ ನಾಯ್ಕ್,ಈ ಸಂದರ್ಭದಲ್ಲಿ ತಿಳಿಸಿದರು.
.
ಈ ಕಾಮಗಾರಿ ಪೂರ್ಣಗೊಂಡ ನಂತರ ಈ ಭಾಗದಲ್ಲಿ ನೀರಿನ ಸಮಸ್ಯೆ ಕೊಂಚ ಸುದಾರಿಸಲಿದ್ದು, ಬೆಳ್ತಂಗಡಿ ತಾಲೂಕಿನ ವೇಣೂರು, ಕಡೆಯಿಂದ ಬಂಟ್ವಾಳದ ವಾಮದಪದವು ಸಿದ್ದಕಟ್ಟೆ ಮುಂತಾದ ಪ್ರದೇಶದ ಜನರಿಗೆ ಮಂಗಳೂರು ಸಂಪರ್ಕ.ಸುಗಮವಾಗಲಿದ್ದು,
ಮಂಗಳೂರು ತಾಲೂಕಿನ ಕುಪ್ಪೆಪದವು, ಎಡಪದವು ಸೇರಿದಂತೆ ಬಹುತೇಕ ಜನರಿಗೆ ಈ ರಸ್ತೆಯ ಮೂಲಕ ಬಂಟ್ವಾಳ ಹಾಗೂ ಧರ್ಮಸ್ಥಳ ಉಜಿರೆ ತುಂಬಾ ಹತ್ತೀರವಾಗಲಿದೆ. ಅದರಲ್ಲೂ ಮಂಗಳೂರು ವಿಮಾನ ನಿಲ್ದಾಣವು ಬಹಳ ಹತ್ತಿರವಾಗಲಿದೆ ಎಂದರು.

ಕೊರೊನಾ ಹಿನ್ನೆಲೆಯಲ್ಲಿ ಸ್ವಲ್ಪ ಕಾಮಗಾರಿ  ವಿಳಂಬವಾಗಿದ್ದು, ಇನ್ನೂ ಮುಂದೆ ಹೊರಗಿನ ಹೊಸ ಕಾರ್ಮಿಕರನ್ನು ಸೇರಿಸದೆ ಕಾರ್ಮಿಕರನ್ನು ಹೊರಗೆ ಹೊಗದಂತೆ ನೋಡಿ ಕೊಂಡು ಸಾಮಾಜಿಕ ಅಂತರ ಕಾಯ್ದುಕೊಂಡು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಮಳೆಗಾಲ ಮುಂಚೆಯೀ ಕಾಮಗಾರಿ ಮುಕ್ತಾಯ ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡಲು ಜಿಲ್ಲಾಧಿಕಾರಿ ಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ರಾಜೇಶ್ ನಾಯ್ಕ್ ತಿಳಿಸಿದರು.

ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೃಷ್ಣ ಕುಮಾರ್,  ಸಹಾಯಕ ಇಂಜಿನಿಯರ್ ಪ್ರಸನ್ನ, ಸ್ಥಳೀಯ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು, ಗುತ್ತಿಗೆದಾರರ ಇಂಜಿನಿಯರ್ ಪ್ರೀನ್ಸ್,ಸೈಟ್, ಮೆನೆಜರ್ ಮಂಜುನಾಥ್, ಪ್ರಮುಖರಾದ ಗಣೀಶ್ ರೈ ಮಾಣಿ, ಶಾಸಕರ ಅಪ್ತ ಸಹಾಯಕರಾದ ದಿನೇಶ್, ಪವನ್ ಕುಮಾರ್,  ಗ್ರಾಮದ ಪ್ರಮುಖರಾದ ತೇಜಾಸ್ ಮರ್ದೊಟ್ಟು, ನವೀನ ಪೂಜಾರಿ ಹೊಸಹೊಕ್ಲು ಇನ್ನೀತರರು ಉಪಸ್ಥಿತರಿದ್ದರು.

More from the blog

ಜ.31ರಂದು ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮವು ಜ.31ರಂದು ಪ್ರಾಂತೀಯ ಅಧ್ಯಕ್ಷ ಉದ್ಯಮಿ ಬಾಲಕೃಷ್ಣ ಶೆಟ್ಟಿ ಪಿ. ಇವರ ಅಧ್ಯಕ್ಷತೆಯಲ್ಲಿ ಜ.31ರಂದು ಬಜಾರ್ ಆಡಿಟೋರಿಯಂ ಕಂದೂರು ಸಜಿಪಮೂಡದಲ್ಲಿ ನಡೆಯಲಿದೆ ಎಂದು ಸಮ್ಮೇಳನ...

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...