ವಿಟ್ಲ: ಇಲ್ಲಿನ ಕರೋಪಾಡಿ ಗ್ರಾಮದ ಪಳ್ಳದಕೋಡಿ-ಪದ್ಯಾಣದ ರೂ 2.25 ಕೋಟಿ ಅನುದಾನದ ಕಾಂಕ್ರಿಟೀಕೃತ ರಸ್ತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟಿಸಿದರು.


ಬಳಿಕ ಮಾತನಾಡಿದ ಅವರು, ಪಳ್ಳದಕೋಡಿ-ಪದ್ಯಾಣ ಭಾಗದ ಜನತೆಗಾಗಿ ಸರ್ವಋತು ರಸ್ತೆಯನ್ನು ನಿರ್ಮಾಣಗೊಳಿಸಿ ನೀಡಿದ ಭರವಸೆಯನ್ನು ಈಡೇರಿಸಿದ ತೃಪ್ತಿ ತನಗಿದೆ ಎಂದರು.

ಈ ಸಂದರ್ಭದಲ್ಲಿ ಬೂಡಾ ಅದ್ಯಕ್ಷ ದೇವದಾಸ ಶೆಟ್ಟಿ, ಬಿಜೆಪಿ ಪ್ರ.ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಈಶ್ವರ ಶಾಸ್ತ್ರಿ, ವಿಘ್ನೇಶ್ವರ ಭಟ್ ಅನೆಯಾಲಕೋಡಿ, ರಘುನಾಥ ಶೆಟ್ಟಿ ಪಟ್ಲಗುತ್ತು, ಬೇತ ಗೋಪಾಲಕೃಷ್ಣ ಭಟ್, ಸುನಿಲ್ ಪದ್ಯಾಣ, ರಮಾನಾಥ ರಾಯಿ, ಗಣೇಶ್ ರೈ ಮಾಣಿ, ವಿನೋದ್ ಪಟ್ಲ, ಪದ್ಮನಾಭ ಮುಗುಳಿ, ಕೊಳ್ನಾಡು ಮಹಾಶಕ್ತಿಕೇಂದ್ರ ಬಿಜೆಪಿ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.












