Friday, January 30, 2026

ದೇವಸ್ಥಾನಗಳ ಸಂಪರ್ಕ ರಸ್ತೆಗಳ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ದೇವಸ್ಥಾನಗಳ ಸಂಪರ್ಕ ರಸ್ತೆಗಳ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಅವರು ಶಾಸಕರ ವಿಶೇಷ ಅನುದಾನ 20 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣವಾದ ತಾಲೂಕಿನ ಕುಡಂಬೆಟ್ಟು ಗ್ರಾಮದ ಶ್ರೀ ಮುಖ್ಯಪ್ರಾಣ ದೇವಸ್ಥಾನ ಉರುಡಾಯಿ ರಸ್ತೆ ಉದ್ಘಾಟಿಸಿ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಅನೇಕ ಧಾರ್ಮಿಕ ಕೇಂದ್ರಗಳ ರಸ್ತೆಯ ಜೊತೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದವು, ಎಲ್ಲಾ ಕ್ಷೇತ್ರಗಳನ್ನು ಮುಂದಿನ ದಿನಗಳಲ್ಲಿ ಹಂತಹಂತವಾಗಿ ಆಭಿವೃದ್ದಿಗೆ ಸರಕಾರದ ಮಟ್ಟದ ಅನುದಾನವನ್ನು ನೀಡುವ ಭರವಸೆ ನೀಡಿದರು.

ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಮಾತನಾಡಿ, ಅಭಿವೃದ್ಧಿಯ ಚಿಂತನೆಯಿಂದ ಕೆಲಸದ ಜೊತೆ ರಾಜಕೀಯವನ್ನು ಶಾಸಕರು ಮಾಡುತ್ತಿದ್ದಾರೆ. ಪಕ್ಷ ಸಂಘಟನೆಯ ಮೂಲಕ ಹಾಗೂ ಶಾಸಕರು ಅಭಿವೃದ್ಧಿ ಯ ಮೂಲಕ ವಿರೋಧ ಪಕ್ಷಗಳಿಗೆ ಉತ್ತರ ನೀಡುತ್ತಿದ್ದಾರೆ ಎಂದು ಅವರು ಹೇಳಿದರು. ಮುಂದಿನ ದಿನಗಳಲ್ಲಿ ಗ್ರಾಮದ ಅಭಿವೃದ್ಧಿ ಗಾಗಿ ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ಗಳಲ್ಲಿ ಬಿಜೆಪಿ ಪಕ್ಷದ ಸದಸ್ಯ ರ ಆಯ್ಕೆ ಮಾಡಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಜಿ.ಪಂ. ಸದಸ್ಯ ತುಂಗಪ್ಪ ಬಂಗೇರ ಮಾತನಾಡಿ, ಶಾಸಕರ ಅವಧಿಯಲ್ಲಿ ಗ್ರಾಮೀಣ ಭಾಗದ ಮೂಲೆಮೂಲೆಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ. ಓರ್ವ ಕೃಷಿಕನಾಗಿ ಗ್ರಾಮದ ಅಭಿವೃದ್ಧಿ ಹೇಗೆ ಎಂಬುದರ ಚಿಂತನೆಯಿಂದ ಕೆಲಸ ಮಾಡಿ ಗ್ರಾಮದ ಜನರ ಮನಸ್ಸು ಗೆದ್ದಿದ್ದಾರೆ.

ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ ಮಾತನಾಡಿ, ರಾಜೇಶ್ ನಾಯ್ಕ್ ಅವರು ಶಾಸಕರಾದ ಬಳಿಕ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಪೂರಕವಾದ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕೆಲಸ ಆಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್, ದೇವಸ್ಥಾನದ ಆಡಳಿತ ಮೋಕ್ತೇಸರ ಜಯರಾಮ ಕುಲಾಲ್, ಅರ್ಚಕ ನಾರಾಯಣ ಶಿಬಿರಾಯ ಮತ್ತಿತರು ಉಪಸ್ಥಿತರಿದ್ದರು.

ಸುರೇಶ್ ನಾಯಕ್ ಸ್ವಾಗತಿಸಿ, ಮಹಾಬಲ ಕುಲಾಲ್ ವಂದಿಸಿದರು.

More from the blog

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...