Wednesday, January 28, 2026

ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂದು ಕೊರತೆಗಳನ್ನು ನಿವಾರಿಸಲು ಶಕ್ತಿಮೀರಿ ಪ್ರಯತ್ನ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಪ್ರತಿಯೊಂದು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂದುಕೊರತೆಗಳನ್ನು ನಿವಾರಿಸಲು ಶಾಸಕನಾಗಿ ನನ್ನ ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಅವರು ಸುಮಾರು 71 ಲಕ್ಷ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಈ ಭಾಗದಲ್ಲಿ ಜನರ ಅನೇಕ ಬೇಡಿಕೆಗಳಿದ್ದು, ಬಹಳಷ್ಟು ಕೆಲಸಗಳು ಬಾಕಿ ಇವೆ ಎಲ್ಲಾ ಕಾಮಗಾರಿಗಳನ್ನು ಹಂತಹಂತವಾಗಿ ಮಾಡುವುದಾಗಿ ಭರವಸೆ ನೀಡಿದರು. ಬಹಳಷ್ಟು ಅಗತ್ಯವಿರುವ ರಸ್ತೆಗಳ ಸಹಿತ ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಒದಗಿಸುವ ಕೆಲಸ ಮಾಡುತ್ತೇನೆ ಎಂದು ಗ್ರಾಮದ ಜನರಿಗೆ ಭರವಸೆ ನೀಡಿದರು.

ಕಾಮಗಾರಿಗಳ ವಿವರ: 
ನರಿಕೊಂಬು ಗ್ರಾ.ಪಂ.ವ್ಯಾಪ್ತಿಯ ಶಂಭೂರು ಗ್ರಾಮದ 20 ಲಕ್ಷ ವೆಚ್ಚದಲ್ಲಿ ಶಂಭೂರು ಕೂಡಿಬೆಟ್ಟು ರಸ್ತೆ, 5 ಲಕ್ಷ ವೆಚ್ಚದಲ್ಲಿ ಮಂಜನಕೋಡಿ ರಸ್ತೆ, 10 ಲಕ್ಷ ವೆಚ್ಚದಲ್ಲಿ ಕುಂದಾಯಗೋಳಿ ಮಂಜಿಪಾಲ್ ಜೋಗಿಬೆಟ್ಟು ರಸ್ತೆ , 20 ಲಕ್ಷ ವೆಚ್ಚದಲ್ಲಿ ಬೈಪಾಡಿ ಶಿರ್ಡಿ ರಸ್ತೆ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು.
16 ಲಕ್ಷ ವೆಚ್ಚದಲ್ಲಿ ಶಂಭೂರು ಶೇಡಿ ಗುರಿ ನೂತನ ಅಂಗನವಾಡಿ ಕಟ್ಟಡ ಕ್ಕೆ ಶಿಲಾನ್ಯಾಸ ನೆರವೇರಿಸಿದರು.
ಶಂಭೂರು ಇರಂತಬೆಟ್ಟು ಸುಧೆಕಾರ್ ರಸ್ತೆ ಹಾಗೂ ಶಂಭೂರು ಬರ್ಕೆ ಕಕ್ಕೆಮಜಲು ಮೂಲಕ ಕಲ್ಲಡ್ಕ ಸಂಪರ್ಕದ ರಸ್ತೆಯನ್ನು ವೀಕ್ಷಿಸಿದ ಶಾಸಕರು ಈಗಾಗಲೇ ಈ ರಸ್ತೆಯ ಪ್ರಸ್ತಾವನೆ ಸರಕಾರಕ್ಕೆ ಸಲ್ಲಿಸಲಾಗಿದ್ದು ಶೀಘ್ರವಾಗಿ ಮಂಜೂರಾತಿ ಮಾಡುವ ಭರವಸೆ ನೀಡಿದರು. ಇದೇ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮನವಿ ನೀಡಿದರು.
ಕಾಮಗಾರಿ ಉದ್ಘಾಟನೆ ಸಂದರ್ಭದಲ್ಲಿ ಶಂಭೂರಿನ ಬೈಪಾಡಿ ದಕ್ಷಿಣ ಶಿರ್ಡಿ ಮಂದಿರದಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ, ಬಂಟ್ವಾಳ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ, ಕಾರ್ಯದರ್ಶಿಗಳಾದ ರಮಾನಾಥ ರಾಯಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಹಿಂದುಳಿದ ಮೋರ್ಚಾದ ಅಧ್ಯಕ್ಷ ಆನಂದ ಶಂಭೂರು, ಗ್ರಾ‌.ಪಂ.ಮಾಜಿ ಅಧ್ಯಕ್ಷ ಯಶೋಧರ ಕರ್ಬೆಟ್ಟು,ಶಂಭೂರು ಬೂತ್ ಸಮಿತಿ ಅಧ್ಯಕ್ಷರುಗಳಾದ ಯೋಗೀಶ್ , ಸಂತೋಷ್, ಕಾರ್ಯದರ್ಶಿಗಳಾದ ಕೇಶವ, ಪ್ರಕಾಶ್, ಕ್ಷೇತ್ರ ಸಮಿತಿ ಸದಸ್ಯ ಜಿನರಾಜ್ ಕೋಟ್ಯಾನ್, ಪ್ರಮುಖರಾದ ದಿವಾಕರ ಶಂಭೂರು, ಉದಯರಾಜ, ಜಯರಾಜ, ಬೋಜರಾಜ್, ಜಿನ್ನಪ್ಪ, ಶಿರ್ಡಿ ಸಾಯಿ ಮಂದಿರದ ಅಧ್ಯಕ್ಷ ಸೂರಜ್ ಕುಮಾರ್ ಬೋಳಾರ ಮತ್ತಿತರ ರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಬಳಿಕ ಶಂಭೂರು ಹಳ್ಳಿ ಮನೆ ಉಪ್ಪಿನಕಾಯಿ ಉತ್ಪಾದನಾ ಕೇಂದ್ರಕ್ಕೆ ಭೇಟಿ ನೀಡಿದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...