Tuesday, July 1, 2025

ಬಾಯ್ತೆರೆದು ನಿಂತಿದೆ ಮೊಡಂಕಾಪುವಿನಲ್ಲಿ ರಸ್ತೆ

ಬಂಟ್ವಾಳ: ಪುರಸಭೆಯ
ಕುಡಿಯುವ ನೀರಿನ ಪೈಪ್ ಕಾಮಗಾರಿಯಿಂದ ರಸ್ತೆಯೊಂದು ಕುಸಿಯುವ ಬೀತಿಯಲ್ಲಿದೆ.

ಮೊಡಂಕಾಪು ಎಂಬಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಹಾದುಹೋಗಿರುವ ಭಾಗದಲ್ಲಿ ಕುಸಿತ ಕಂಡು ಬಂದಿದ್ದು ಇಲ್ಲಿನ ನಿವಾಸಿಗಳು ಭಯಬೀತರಾಗಿದ್ದಾರೆ.
ಪೈಪ್ ಅಳವಡಿಕೆ ಕಾಮಗಾರಿಯಿಂದಾಗಿ ಅ ಜಾಗದಲ್ಲಿ ಮಣ್ಣು ಒಳಕ್ಕೆ ಕುಸಿದಿದ್ದು ಜೊತೆಗೆ ರಸ್ತೆ ಕೂಡಾ ಕುಸಿಯುತ್ತಿದೆ.
ಮೊಡಂಕಾಪು ಚರ್ಚ್ , ಚರ್ಚ್ ಸ್ಕೂಲ್ ಸಹಿತ ಮೂರು ವಿದ್ಯಾಕೇಂದ್ರಗಳಿವೆ, ಒಂದು ದೇವಸ್ಥಾನ ಇದೆ, ಇಲ್ಲಿ ಬರುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ರಿಗೆ ಈ ಗುಂಡಿ ಉಂಟಾದ್ದರಿಂದ ಸಾಕಷ್ಟು ತೊಂದರೆಗಳು ಅಗುತ್ತಿವೆ.
ಒಬ್ಬ ಮನುಷ್ಯ ನ ಎತ್ತರಕ್ಕೆ ಈ ಗುಂಡಿಯಿದ್ದು, ರಾತ್ರಿ ಹೊತ್ತಿನಲ್ಲಿ ಅಪರೂಪವಾಗಿ ಬರುವ ದ್ಚಿಚಕ್ರ ವಾಹನ ಸವಾರರು ಮತ್ತು ಪಾದಚಾರಿ ಗಳು ಆಯ ತಪ್ಪಿ ಗುಂಡಿಯೊಳಗೆ ಬಿದ್ದರೆ ಸಾವು ನಿಶ್ಚಿತ.
ಇಂತಹ ಸಾವು ನೋವುಗಳು ಸಂಭವಿಸುವ ಮೊದಲು ಸರಿ ಮಾಡಿಕೊಡುವಂತೆ ಪುರಸಭೆಗೆ ಸ್ಥಳೀಯ ನಿವಾಸಿಗಳು ಮನವಿ ಮಾಡಿದ್ದಾರೆ. ಆದರೆ ಈ ವರೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂಬ ಆರೋಪ ಇವರದ್ದು.

ಈ ಸಮಸ್ಯೆ ಯನ್ನು ಬಗೆಹರಿಸದಿದ್ದರೆ,
ರಸ್ತೆ ಕುಸಿತ ದಿಂದಾಗಿ ಬಿಸಿರೋಡು ಕೈಕಂಬದಿಂದ ಮೊಡಂಕಾಪು ಮೂಲಕ ಪೊಳಲಿ ಕೈಕಂಬಕ್ಕೆ ತೆರಳುವ ಬಸ್ ಸಂಚಾರಕ್ಕೆ ಅಡಚಣೆಯಾಗುವ ಸಂದರ್ಭಗಳು ಕೂಡ ಬರಬಹುದು ಎಂದು ಇಲ್ಲಿನ ನಿವಾಸಿಗಳು ತಿಳಿಸುತ್ತಾರೆ.
ಪುರಸಭೆಯ ವ್ಯಾಪ್ತಿಯಲ್ಲಿ ಈ ಮಲ್ಟಿಪರ್ಪಸ್ ಕುಡಿಯುವ ನೀರಿನ ಸರಬರಾಜು ಮಾಡುವ ಯೋಜನೆ ನಿಜವಾಗಿಯೂ ಉತ್ತಮ ವಾಗಿದೆ. ಆದರೆ ಸಮರ್ಪಕವಾಗಿ ಕೆಲಸ ನಿರ್ವಹಿಸದೆ ಪದೇ ಪದೇ ಸಮಸ್ಯೆ ಗಳು ಉದ್ಬವಿಸುತ್ತಿದ್ದು ಸಾರ್ವಜನಿಕ ವಲಯದಲ್ಲಿ ಆರೋಪ ಗಳಿಗರ ಈ ಯೋಜನೆ ಗುರಿಯಾಗಿದೆ.
ಹಾಗಾಗಿ ಸಂಭಂದಿಸಿದ ಇಲಾಖಾ ಅಧಿಕಾರಿಗಳು ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳಲು ಇಲ್ಲಿನ ನಿವಾಸಿಗಳು ಮನವಿ ಮಾಡಿದ್ದಾರೆ.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...