Saturday, January 31, 2026

ಬಾಯ್ತೆರೆದು ನಿಂತಿದೆ ಮೊಡಂಕಾಪುವಿನಲ್ಲಿ ರಸ್ತೆ

ಬಂಟ್ವಾಳ: ಪುರಸಭೆಯ
ಕುಡಿಯುವ ನೀರಿನ ಪೈಪ್ ಕಾಮಗಾರಿಯಿಂದ ರಸ್ತೆಯೊಂದು ಕುಸಿಯುವ ಬೀತಿಯಲ್ಲಿದೆ.

ಮೊಡಂಕಾಪು ಎಂಬಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಹಾದುಹೋಗಿರುವ ಭಾಗದಲ್ಲಿ ಕುಸಿತ ಕಂಡು ಬಂದಿದ್ದು ಇಲ್ಲಿನ ನಿವಾಸಿಗಳು ಭಯಬೀತರಾಗಿದ್ದಾರೆ.
ಪೈಪ್ ಅಳವಡಿಕೆ ಕಾಮಗಾರಿಯಿಂದಾಗಿ ಅ ಜಾಗದಲ್ಲಿ ಮಣ್ಣು ಒಳಕ್ಕೆ ಕುಸಿದಿದ್ದು ಜೊತೆಗೆ ರಸ್ತೆ ಕೂಡಾ ಕುಸಿಯುತ್ತಿದೆ.
ಮೊಡಂಕಾಪು ಚರ್ಚ್ , ಚರ್ಚ್ ಸ್ಕೂಲ್ ಸಹಿತ ಮೂರು ವಿದ್ಯಾಕೇಂದ್ರಗಳಿವೆ, ಒಂದು ದೇವಸ್ಥಾನ ಇದೆ, ಇಲ್ಲಿ ಬರುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ರಿಗೆ ಈ ಗುಂಡಿ ಉಂಟಾದ್ದರಿಂದ ಸಾಕಷ್ಟು ತೊಂದರೆಗಳು ಅಗುತ್ತಿವೆ.
ಒಬ್ಬ ಮನುಷ್ಯ ನ ಎತ್ತರಕ್ಕೆ ಈ ಗುಂಡಿಯಿದ್ದು, ರಾತ್ರಿ ಹೊತ್ತಿನಲ್ಲಿ ಅಪರೂಪವಾಗಿ ಬರುವ ದ್ಚಿಚಕ್ರ ವಾಹನ ಸವಾರರು ಮತ್ತು ಪಾದಚಾರಿ ಗಳು ಆಯ ತಪ್ಪಿ ಗುಂಡಿಯೊಳಗೆ ಬಿದ್ದರೆ ಸಾವು ನಿಶ್ಚಿತ.
ಇಂತಹ ಸಾವು ನೋವುಗಳು ಸಂಭವಿಸುವ ಮೊದಲು ಸರಿ ಮಾಡಿಕೊಡುವಂತೆ ಪುರಸಭೆಗೆ ಸ್ಥಳೀಯ ನಿವಾಸಿಗಳು ಮನವಿ ಮಾಡಿದ್ದಾರೆ. ಆದರೆ ಈ ವರೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂಬ ಆರೋಪ ಇವರದ್ದು.

ಈ ಸಮಸ್ಯೆ ಯನ್ನು ಬಗೆಹರಿಸದಿದ್ದರೆ,
ರಸ್ತೆ ಕುಸಿತ ದಿಂದಾಗಿ ಬಿಸಿರೋಡು ಕೈಕಂಬದಿಂದ ಮೊಡಂಕಾಪು ಮೂಲಕ ಪೊಳಲಿ ಕೈಕಂಬಕ್ಕೆ ತೆರಳುವ ಬಸ್ ಸಂಚಾರಕ್ಕೆ ಅಡಚಣೆಯಾಗುವ ಸಂದರ್ಭಗಳು ಕೂಡ ಬರಬಹುದು ಎಂದು ಇಲ್ಲಿನ ನಿವಾಸಿಗಳು ತಿಳಿಸುತ್ತಾರೆ.
ಪುರಸಭೆಯ ವ್ಯಾಪ್ತಿಯಲ್ಲಿ ಈ ಮಲ್ಟಿಪರ್ಪಸ್ ಕುಡಿಯುವ ನೀರಿನ ಸರಬರಾಜು ಮಾಡುವ ಯೋಜನೆ ನಿಜವಾಗಿಯೂ ಉತ್ತಮ ವಾಗಿದೆ. ಆದರೆ ಸಮರ್ಪಕವಾಗಿ ಕೆಲಸ ನಿರ್ವಹಿಸದೆ ಪದೇ ಪದೇ ಸಮಸ್ಯೆ ಗಳು ಉದ್ಬವಿಸುತ್ತಿದ್ದು ಸಾರ್ವಜನಿಕ ವಲಯದಲ್ಲಿ ಆರೋಪ ಗಳಿಗರ ಈ ಯೋಜನೆ ಗುರಿಯಾಗಿದೆ.
ಹಾಗಾಗಿ ಸಂಭಂದಿಸಿದ ಇಲಾಖಾ ಅಧಿಕಾರಿಗಳು ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳಲು ಇಲ್ಲಿನ ನಿವಾಸಿಗಳು ಮನವಿ ಮಾಡಿದ್ದಾರೆ.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...