ಬಂಟ್ವಾಳ: ಮಧ್ಯಪ್ರದೇಶದ ಉಜ್ಜೈನಿಯಲ್ಲಿರುವ ಮಹಾಕಾಳೇಶ್ವರ ಕಾರಿಡಾರ್ ಲೋಕಾರ್ಪಣೆಗೊಂಡಿದ್ದು, ಈ ಅದ್ಬುತ ಕ್ಷಣವನ್ನು ಬಿ.ಸಿ ರೋಡು ಬಿಜೆಪಿ ಕಚೇರಿಯಲ್ಲಿ ವೀಕ್ಷಿಸಲಾಯಿತು.



2017ರಲ್ಲಿ ಈ ಕಾರಿಡಾರ್ ಕಾಮಗಾರಿಯನ್ನ ಕೈಗೆತ್ತಿಕೊಳ್ಳಲಾಗಿತ್ತು. ಇದೀಗ 2ನೇ ಹಂತದ ಮಹಾಕಾಳೇಶ್ವರ ಕಾರಿಡಾರ್ ನಿರ್ಮಾಣವಾಗುತ್ತಿದೆ. ಮಹಾಕಾಳೇಶ್ವರ್ ಕಾರಿಡಾರ್ಗೆ ಒಟ್ಟು 856 ಕೋಟಿ ರೂಪಾಯಿ ವೆಚ್ಚವಾಗಲಿದೆ. ಮೊದಲ ಹಂತದಲ್ಲಿ 350 ಕೋಟಿ ರೂಪಾಯಿ ನಿರ್ಮಾಣದಲ್ಲಿ ಕಾರಿಡಾರ್ ನಿರ್ಮಾಣವಾಗಿದೆ.

ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ದೇವಪ್ಪ ಪೂಜಾರಿ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಕರ್ಕಳ ಡೊಂಬಯ ಅರಳ ಜಿಲ್ಲಾ ಉಪಾಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮ್ ದಾಸ್ ಬಂಟ್ವಾಳ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ ನೀರು ಸರಬರಾಜು ಮತ್ತು ಒಳಚರಂಡಿ ನಿಗಮದ ನಿರ್ದೇಶಕರಾದ ಶ್ರೀಮತಿ ಸುಲೋಚನಾ ಜಿ ಕೆ ಭಟ್ ಜಿಲ್ಲಾ ಕಲೆ ಮತ್ತು ಸಂಸ್ಕೃತಿ ಪ್ರಕೋಷ್ಠದ ಸಂಚಾಲಕರಾದ ಅಶೋಕ್ ಶೆಟ್ಟಿ ಸರಪಾಡಿ ಮತ್ತು ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಚೌಟ ಒಬಿಸಿ ಮೋರ್ಚಾದ ಅಧ್ಯಕ್ಷರಾದ ಆನಂದ ಶಂಭೂರು ಎಸ್ಟಿ ಮೋರ್ಚಾ ಅಧ್ಯಕ್ಷ ರಾಮ ನಾಯ್ಕ ಜಿಲ್ಲಾ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ಲೋಕೇಶ್ ಎರ್ಮೆನಾಡು ಕ್ಷೇತ್ರದ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.












