Wednesday, February 12, 2025

ಮೋದಿ ಪ್ರಮಾಣ ವಚನ ತಾಲೂಕಿನಾದ್ಯಂತ ವಿನೂತನ ಸಂಭ್ರಮಾಚರಣೆ

ಬಂಟ್ವಾಳ: ನಮೋ: ಸೆಕೆಂಡ್ ಇನ್ನಿಂಗ್ಸ್ ಸಂದರ್ಭದಲ್ಲಿ ಬಂಟ್ವಾಳ ತಾಲೂಕಿನ್ಯಾದ್ಯಂತ ವಿಶೇಷ ಕಾರ್ಯಕ್ರಮಗಳ ಮೂಲಕ ಸಂಭ್ರಮ ಆಚರಣೆ ನಡೆಯಿತು.

 

ವಿಶೇಷ ಪೂಜೆ, ಭಜನೆ, ಪುಸ್ತಕ ವಿತರಣೆ, ಚಹಾಕೂಟ, ಭೋಜನ ವ್ಯವಸ್ಥೆ, ಪ್ರಯಾಣಿಕರಿಗೆ ದಿನ ಪ್ರಯಾಣ ಉಚಿತ ಸೇವೆ ಹೀಗೆ ವಿಭಿನ್ನ , ವಿನೂತನ ರೀತಿಯಲ್ಲಿ ಸಂಭ್ರಮ ಆಚರಣೆಯಲ್ಲಿ ತೊಡಗಿಕೊಂಡರು.

ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ ಎರಡನೇ ಬಾರಿ ಪ್ರಮಾಣವಚನ ಸ್ವೀಕರಿಸಿದ ಸಂಭ್ರಮದಲ್ಲಿ ಸಂಜೆ 5 ಗಂಟೆಯಿಂದ ಬಿಸಿರೋಡಿನ ರಕ್ತೇಶ್ವರಿ ದೇವಿ ದೇವಸ್ಥಾನ ದಲ್ಲಿ ಭಜನೆ ಕಾರ್ಯಕ್ರಮ ನಡೆಯಿತು.
ಬಳಿಕ 7.30 ಕ್ಕೆ ವಿಶೇಷ ಸರ್ವ ಸೇವೆ ಪೂಜೆಯನ್ನು ಬಂಟ್ವಾಳ ಬಿಜೆಪಿ ವತಿಯಿಂದ , ಬಂಟ್ವಾಳ ಶಾಸಕ ರಾಜೇಶ್ ನಾಯಕ್ ನೇತ್ರತ್ವದಲ್ಲಿ ನಡೆಸಲಾಯಿತು. ‌

ಸಂಜೆಯ ವೇಳೆ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯ ಎದುರಲ್ಲಿ ಬಿಜೆಪಿ ಕಾರ್ಯಕರ್ತರು ಚಹ, ಪಕೋಡಾ ವಿತರಿಸಲು ಆರಂಭಿಸಿದ್ದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಕ್ಷೇತ್ರಾಧ್ಯಕ್ಷ ದೇವದಾಸ ಶೆಟ್ಟಿ, ಪಕ್ಷದ ಹಿರಿಯರಾದ ಜಿ.ಆನಂದ, ಜಿಪಂ ಸದಸ್ಯೆ ಕಮಲಾಕ್ಷಿ ಪೂಜಾರಿ, ಯುವ ಮೋರ್ಚಾ ಅಧ್ಯಕ್ಷ ವಜ್ರನಾಥ ಕಲ್ಲಡ್ಕ, ಪಕ್ಷ ಪ್ರಮುಖರಾದ ರಾಮದಾಸ ಬಂಟ್ವಾಳ, ದಿನೇಶ್ ಅಮ್ಟೂರು, ಮೋನಪ್ಪ ದೇವಸ್ಯ, ರಂಜಿತ್ ಮೈರ, ರಮಾನಾಥ ರಾಯಿ, ಸುದರ್ಶನ ಬಜ ಸಹಿತ ಪುರಸಭೆ ಸದಸ್ಯರು, ಕಾರ್ಯಕರ್ತರು, ಮೋದಿ ಅಭಿಮಾನಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ಹಲವು ಕಡೆಗಳಲ್ಲಿ ಎಲ್.ಇ.ಡಿ.ಪರದೆಯ ಮೂಲಕ ಪ್ರಮಾಣ ವಚನ ಕಾರ್ಯಕ್ರಮ ದ ನೇರ ಪ್ರಸಾರದ ವ್ಯವಸ್ಥೆ ಕಲ್ಪಿಸಲಾಗಿತ್ತು.

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...