Wednesday, January 28, 2026

ವ್ಯಕ್ತಿ ಪ್ರತಿಷ್ಠೆಗಿಂತ ದೇಶವೇ ದೊಡ್ಡದು: ಪ್ರಹ್ಲಾದ್ ಮೋದಿ

ಕಲ್ಲಡ್ಕ: ವ್ಯಕ್ತಿ ಪ್ರತಿಷ್ಠೆಗಿಂತ ದೇಶವೇ ದೊಡ್ಡದು ವ್ಯಕ್ತಿಯೊಬ್ಬ ಯಾವ ಮಟ್ಟಕ್ಕೆ ಏರಿದರೂ ಕೂಡಾ ದೇಶದ ಮುಂದೆ ಎಲ್ಲರೂ ಸಮಾನರು. ತಾನು ಇರುವ ಹುದ್ದೆಯ ಜವಾಬ್ದಾರಿ ಅರಿತು ವ್ಯವಹರಿಸಿದರೆ ಆತ ಶ್ರೇಷ್ಟನಾದನು ಎಂದು ಪ್ರಧಾನ ಮಂತ್ರಿ ಸನ್ಮಾನ್ಯ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಹೇಳಿದರು. ಅವರು ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿ ಇಲ್ಲಿನ ಶೈಕ್ಷಣಿಕ ಚಟುವಟಿಕೆಗಳನ್ನು ವೀಕ್ಷಿಸಿ ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್‍ಯಕ್ರಮ ನಡೆಸಿದರು.


ಶಿಶುಮಂದಿರದ ಚಟುವಟಿಕೆಗಳನ್ನು ವೀಕ್ಷಿಸಿದ ಅವರು ಇಲ್ಲಿ ಜೀವನಕೌಶಲ್ಯದ ಶಿಕ್ಷಣವನ್ನು, ಸಂಸ್ಕಾರ ಹಾಗೂ ಭಾರತೀಯ ನೆಲೆಗಟ್ಟಿನ ಆಧಾರದಲ್ಲಿ ನೀಡಲಾಗುತ್ತಿದೆ. ಸಂಸ್ಕೃತದ ವ್ಯವಹಾರ ಉತ್ತರ ಭಾಗಕ್ಕಿಂತ ಹೆಚ್ಚು ಬಳಕೆಯಲ್ಲಿದೆ ಎಂದರು. ದಕ್ಷಿಣ ಭಾರತ ಜನರ ಬಗ್ಗೆ ನನಗಿದ್ದ ಭಾವನೆ ನನಗೀಗ ಬದಲಾಗಿದೆ. ಇಲ್ಲಿನ ಜನ ಪ್ರೇಮಪೂರ್ಣ, ಸೌಹಾರ್ದಯುತ, ಭಾವನಾ ಜೀವಿಗಳಾಗಿರುವುದು ನನ್ನಅರಿವಿಗೆ ಬಂದಿದೆ. ನರೇಂದ್ರ ಮೋದಿಯವರದ್ದು ಸಮಾಜ ಸಮರ್ಪಕ ಬದುಕು, ದೇಶದ ಬಗೆಗಿನ ಅವರ ಕಾಳಜಿ ದೊಡ್ಡದು. ಬಾಲ್ಯದಿಂದಲೂ ಪ್ರತಿಯೊಂದುಕಾಲದಲ್ಲೂ ಶಿಶ್ತುಬದ್ಧ ಜೀವನ ನಡೆಸಿದರು. ನಮಗ್ಯಾರಿಗೂಅವರ ಹುದ್ದೆಯ ನಡುವೆ ನಾವೂ ಗುರುತಿಸಿಕೊಳ್ಳುವಂತಾಗಬೇಕು ಎಂದು ಅನಿಸಲೇ ಇಲ್ಲ. ಆದರೆ ಸಮಾಜ ನಮ್ಮನ್ನು ವಿಶೇಷ ಆದರದಿಂದ ಕಾಣುತ್ತಿರುವುದರ ಬಗ್ಗೆ ಸಂತೋಷವಿದೆ. ಆದರೆ ಎಲ್ಲೂ ನಮ್ಮ ಕುಟುಂಬವು ಅವರ ಜವಾಬ್ದಾರಿ ನಿರ್ವಹಣೆಗೆ ತೊಡಕಾಗದಂತೆ ಎಚ್ಚರವಹಿಸಿದೆ. ಎಂದು ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತರಿಸಿದರು.
ಅವರೊಂದಿಗೆ ಕುಟುಂಬದ ಜ್ಯೋತಿಷ್ಯರಾದ ಶಿವಗಿರಿ ಮಹಾರಾಜ್, ತೆಲಂಗಾಣ ಸಂಸ್ಕೃತ ಶಿಶುಮಂದಿರದ ಪ್ರವೀಣ್‌ ಕೊರೊಲ್‌ಪೇ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಪ್ರಚಾರ ಪ್ರಮುಖ್ ಶ್ರೀ ಸುನಿಲ್ ಕುಲಕರ್ಣಿ, ಉದ್ಯಮಿ ದೀಪಕ್‌ರಾವ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್, ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಸಹ ಸಂಚಾಲಕ ರಮೇಶ್‌ಎನ್ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಕೃಷ್ಣಪ್ರಸಾದ್‌ ಕಾರ್‍ಯಕ್ರಮವನ್ನು ನಿರ್ವಹಿಸಿ, ಸ್ವಾಗತಿಸಿ, ಧನ್ಯವಾದಗೈದರು.

More from the blog

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...

ಸಜೀಪ : ಜ.28, 29,30ರಂದು ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್

ಬಂಟ್ವಾಳ : ಜಲಾಲಿಯ್ಯಾ ಜುಮಾ ಮಸ್ಜಿದ್, ಚಟ್ಟೆಕ್ಕಲ್, ಸಜಿಪ ಇದರ ಆಶ್ರಯದಲ್ಲಿ ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್ ಬುರ್ದಾ ಮಜ್ಲಿಸ್ ಜಿಸ್ತಿಯಾ ಖುತ್‌ಬಿಯತ್ ಜ.28, 29,30 ರಂದು ಜಲಾಲಿಯ್ಯ ಜುಮಾ ಮಸೀದಿ...

ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ – ಒಡಿಯೂರುಶ್ರೀ

ವಿಟ್ಲ: ಸದೃಢ ದೇಶ ನಿರ್ಮಾಣದಲ್ಲಿ ಸೈನಿಕರ ಪರಿಶ್ರಮ, ತ್ಯಾಗ ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ. ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಒಡಿಯೂರು ರಾಜಾಂಗಣದಲ್ಲಿ...