Monday, February 2, 2026

*ಮೊಗರ್ನಾಡ್ : ಕಥೋಲಿಕ್ ಸಭಾದಿಂದ 63 ಕುಟುಂಬಗಳಿಗೆ ಆಹಾರದ ಕಿಟ್*

ಬಂಟ್ವಾಳ : ಕಥೊಲಿಕ್ ಸಭಾ ಮೊಗರ್ನಾಡ್ ಘಟಕದ ವತಿಯಿಂದ ಮೊಗರ್ನಾಡ್ ಚರ್ಚ್ ವ್ಯಾಪ್ತಿಗೆ ಒಳಪಟ್ಟ ಸುಮಾರು 63 ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ಅನ್ನು ಭಾನುವಾರ ವಿತರಿಸಲಾಯಿತು.

ಕಿಟ್ ಗಳನ್ನು ವಿತರಿಸಿದ ಮೊಗರ್ನಾಡ್ ಚರ್ಚ್ ನ ಪ್ರಧಾನ ಧರ್ಮ ಗುರುಗಳಾದ ಅತೀ ವಂದನೀಯ ಡಾ|| ಮಾರ್ಕ್ ಕ್ಯಾಸ್ತೆಲಿನೊ ಅವರು ಮಾತನಾಡಿ,ಲಾಕ್ ಡೌನ್ ನಿಂದ ಸಂಕಷ್ಟ ಎದುರಿಸುತ್ತಿರುವ ಜನರಿಗೆ ಅಗತ್ಯ ವಸ್ತುಗಳ ವಿತರಿಸುವ ಮೂಲಕ ಕಥೋಲಿಕ ಸಭಾದ ಉತ್ತಮ ಕಾರ್ಯ ನಡೆಸಿದೆ, ಎನ್ನುತ್ತಾ ಘಟಕದ ಅಧ್ಯಕ್ಷರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಕಥೊಲಿಕ್ ಸಭೆಯ ಘಟಕದ ಅಧ್ಯಕ್ಷರಾದ ಸ್ಟ್ಯಾನಿ ಪಿಂಟೊ, ಉಪಾಧ್ಯಕ್ಷರಾದ ಎಲಿಯಾಸ್ ಡಿಸೋಜ, ಕಥೊಲಿಕ್ ಸಭಾ ಮೊಗರ್ನಾಡ್ ವಲಯದ ಮಾಜಿ ಅಧ್ಯಕ್ಷರಾದ ಆಂಟೊನಿ ಡಿಸೋಜ, ಅಜಯ್ ಪಾಯ್ಸ್, ಶ್ರೀಮತಿ ಪೆಟ್ರಿಶಿಯಾ ಲೂಯಿಸ್, ಆಲ್ಫೊನ್ಸ್ ಪಸನ್ಹಾ ಉಪಸ್ಥಿತರಿದ್ದು, ಆಹಾರ ಸಾಮಾಗ್ರಿಗಳ ಕಿಟ್ ಗೆ ನೆರವುನೀಡಿದವರನ್ನು ಸ್ಮರಿಸಿದರು.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...