Monday, February 10, 2025

ಕಥೋಲಿಕ್ ಸಭಾ ಮೊಗರ್‍ನಾಡ್ ಘಟಕದ ರಜತೋತ್ಸವ ಸಮಾರೋಪ ಸಿಎಸ್‌ಎಂ ರಜತ ಸಂಭ್ರಮ ಸ್ಮರಣಾರ್ಥ ರಂಗಮಂಟಪ ಕೊಡುಗೆ-ಉದ್ಘಾಟನೆ

ಬಂಟ್ವಾಳ, ಎ.೨೩: ಬಂಟ್ವಾಳ ತಾಲೂಕು ಕಲ್ಲಡ್ಕ ಅಲ್ಲಿನ ಮೊಗರ್‍ನಾಡ್ ದೇವಮಾತೆ ಇಗರ್ಜಿ (ಮದರ್ ಆಫ್ ಗಾಡ್ ಚರ್ಚ್ ಮೊಗರ್‍ನಾಡ್)ಯ ಆವರಣದಲ್ಲಿ ಕಳೆದ ಶನಿವಾರ ಸಂಜೆ ಕಥೋಲಿಕ್ ಸಭಾ ಮಂಗಳೂರು ಪ್ರದೇಶ (ನೋ.) ಇದರ ಮೊಗರ್‍ನಾಡ್ ಘಟಕವು ರಜತೋತ್ಸವ ಸಮಾರೋಪ ಸಂಭ್ರಮಿಸಿತು.

ಈ ಶುಭಾವಸರದಲ್ಲಿ ಕಥೋಲಿಕ್ ಸಭಾ ಮೊಗರ್‍ನಾಡ್ ಘಟಕದ ಸಿಎಸ್‌ಎಂ ರಜತ ಸಂಭ್ರಮ ಸ್ಮರಣಾರ್ಥ ಕೊಡುಗೆಯಾಗಿಸಿದ್ದ ರಂಗಮಂಟಪವನ್ನು ದೇವಮಾತೆ ಇಗರ್ಜಿಯ ಪ್ರಧಾನ ಧರ್ಮಗುರು ಹಾಗೂ ಕಸಮಮೊ ನಿರ್ದೇಶಕ ರೆ| ಫಾ| ಡಾ| ಮಾರ್ಕ್ ಕಾಸ್ತೆಲಿನೊ ಆಶೀರ್ವಚನಗೈದು ಉದ್ಘಾಟಿಸಿದರು.

ನಂತರ ಫಾ| ಮಾರ್ಕ್ ಕಾಸ್ತೆಲಿನೊ ಅಧ್ಯಕ್ಷತೆಯಲ್ಲಿ ನಡೆಸಲ್ಪಟ್ಟ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಥೋಲಿಕ್ ಸಭಾ ಮಂಗಳೂರು ಕೇಂದ್ರಿಯ ಅಧ್ಯಕ್ಷ ರೋಲ್ಫಿ ಡಿಕೋಸ್ತ, ಅತಿಥಿ ಅಭ್ಯಾಗತರಾಗಿ ದೇವಮಾತೆ ಇಗರ್ಜಿಯ ಸಹಾಯಕ ಧರ್ಮಗುರು ರೆ| ಫಾ ದೀಪಕ್ ಡೆಸಾ, ದೇವಮಾತಾ ಕಾನ್ವೆಂಟ್‌ನ ಮುಖ್ಯಸ್ಥೆ ಭಗಿಸಿ ಸಿ| ಲೂಸಿ ಗ್ರೆಟ್ಟಾ, ಕಥೋಲಿಕ್ ಸಭಾ ಬಂಟ್ವಾಳ ಪ್ರಾದೇಶಿಕ ಸಮಿತಿ ಅಧ್ಯಕ್ಷ ಸ್ಟಾನಿ ಲೋಬೊ, ಕಥೋಲಿಕ್ ಸಭಾ ಮೊಗರ್‍ನಾಡ್ ಸಮಿತಿ ಅಧ್ಯಕ್ಷ ಆಂಟನಿ ಡಿಸೋಜಾ, ಎಂಸಿಸಿ ಬ್ಯಾಂಕ್‌ನ ಕಾರ್ಯಾಧ್ಯಕ್ಷ ಅನಿಲ್ ಲೋಬೊ ಪೆರ್ಮಾಯ್, ಬಿಸಿಸಿ ಬ್ಯಾಂಕ್‌ನ ಕಾರ್ಯಾಧ್ಯಕ್ಷ ಹೆರಾಲ್ಡ್ ಡಿಸೋಜಾ, ದೇವಮಾತೆ ಇಗರ್ಜಿಯ ಪಾಲನಾ ಮಂಡಳಿ ಉಪಾಧ್ಯಕ್ಷೆ ಜಾನೆಟ್ ವಾಸ್, ಕಾರ್ಯದರ್ಶಿ ಎಡ್ವಿನ್ ಪಸನ್ನ ವೇದಿಕೆಯಲ್ಲಿ ಆಸೀನರಾಗಿದ್ದು ಕಥೋಲಿಕ್ ಸಭಾ ಮಂಗಳೂರು ಪ್ರದೇಶದ ಮೊಗರ್‍ನಾಡ್ ಘಟಕದ ಮಾಜಿ ಅಧ್ಯಕ್ಷ ಸ್ಟೀವನ್ ಡಿಸೊಜಾ (ದೇರಡ್ಕ) ಮೊಗಾರ್‍ನಾಡ್ ಇವರನ್ನು ಹಾಗೂ ಮತ್ತಿತರ ಸಾಧಕರನ್ನು ಸನ್ಮಾನಿಸಿ ಗೌರವಿಸಿದರು. ಅತಿಥಿವರ್ಯರು ಸಂದರ್ಭೋಚಿತವಾಗಿ ಮಾತನಾಡಿ ಶುಭಾರೈಸಿದರು.

ಕಸಮಮೊ ಅಧ್ಯಕ್ಷ ಅಜಯ್ ಪಾಯ್ಸ್ ಸ್ವಾಗತಿಸಿದರು. ನೋಯೆಲ್ ಲೋಬೊ ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರೂಪಿಸಿದರು. ಕಸಮಮೊ ಕಾರ್ಯದರ್ಶಿ ಸ್ಟಾನಿ ಪಿಂಟೊ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ಬೈಲೂರು ಪ್ರಸನ್ನ ಶೆಟ್ಟಿ ರಚಿಸಿ ನಿರ್ದೇಶಿಸಿದ ‘ಬುದ್ದಿ ಚಪಟ್’ ತುಳು ಹಾಸ್ಯಮಯ ಕನ್ನಡ ನಾಟಕವನ್ನು ಬೈಲೂರು ಕಲಾವಿದರು ಪ್ರದರ್ಶಿಸಿದರು.

More from the blog

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...