Wednesday, July 9, 2025

ಮೂಡಂಬೈಲು: ಪೋಷಣ್ ಅಭಿಯಾನ

ವಿಟ್ಲ: ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವಿಟ್ಲ ಇದರ ಆಶ್ರಯದಲ್ಲಿ ಪೋಷಣ್ ಅಭಿಯಾನ- ೨೦೧೯’ ಕಾರ್ಯಕ್ರಮವು ಪುಣಚ ಗ್ರಾಮದ ಮೂಡಂಬೈಲು ಸರವು ಅಂಗನವಾಡಿ ಕೇಂದ್ರದಲ್ಲಿ ಜರಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪುಣಚ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರತಿಭಾ ಶ್ರೀಧರ್ ಶೆಟ್ಟಿಯವರು ನೆರವೇರಿಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾದ ಸುಧಾ ಜೋಷಿ ಮಾತನಾಡಿ, ಅಂಗನವಾಡಿ ಕೇಂದ್ರದಲ್ಲಿ ಬೆಳೆಸಲಾದ ಕೃಷಿ, ಹಣ್ಣು ಹಂಪಲುಗಳ, ಅಂಗನವಾಡಿ ಕೇಂದ್ರದ ಪರಿಸರದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಪೌಷ್ಟಿಕ ತರಕಾರಿ, ಸೊಪ್ಪು, ಹಣ್ಣುಗಳು ಮಾನವನ ಆರೋಗ್ಯಕ್ಕೆ ತುಂಬಾ ಪ್ರಾಮುಖ್ಯ ಎಂದು ಹೇಳಿದರು.
ಸಮಾರಂಭದಲ್ಲಿ ತಾಲೂಕು ಪಂಚಾಯಿತಿ ಸದಸ್ಯರಾದ ಕವಿತಾ ಎಸ್. ನಾಯ್ಕ, ಪಂಚಾಯತ್ ಸದಸ್ಯರುಗಳಾದ ಸಂಜೀವ ಮಡಿವಾಳ, ಮೋಹಿನಿ ಯಂ ವಿವಿಧ ವಲಯಗಳ ವಲಯ ಮೇಲ್ವೀಚಾರಕಿಯರು, ಅಂಗನವಾಡಿ ಕೇಂದ್ರಗಳ ಶಿಕ್ಷಕಿಯರು, ಬಾಲವಿಕಾಸ ಸಮಿತಿ ಅಧ್ಯಕ್ಷರಾದ ನಿರೂಪ, ಸಮಿತಿ ಸದಸ್ಯರು, ಸ್ತ್ರಿ ಶಕ್ತಿ ಗುಂಪಿನ ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.
ಮಕ್ಕಳ ಪೋಷಕರಾದ ವೈಶಾಲಿ ಮತ್ತು ಮನೆಯವರು ಅಂಗನವಾಡಿ ಕೇಂದ್ರಕ್ಕೆ ಮಿಕ್ಸಿ ಕೊಡುಗೆಯಾಗಿ ನೀಡಿದರು.
ಅಶ್ವಿನಿ. ಎ ಸ್ವಾಗತಿಸಿದರು. ಸರವು ಅಂಗನವಾಡಿ ಕೇಂದ್ರದ ಶಿಕ್ಷಕಿ ಹೇಮಮಾಲಿನಿ ವಂದಿಸಿದರು. ವಲಯ ಮೇಲ್ವೀಚಾರಕಿ ದೀಪಿಕಾ ಕಾರ್ಯಕ್ರಮ ನಿರೂಪಿಸಿದರು.

More from the blog

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...