ಮಂಗಳೂರು: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ ಪ್ರಕರಣ ವರದಿಯಾಗಿದೆ.


ನಗರದ ಕಾಲೇಜೊಂದರ ಇಬ್ಬರು ವಿದ್ಯಾರ್ಥಿಗಳು, ನಾಲ್ವರು ವಿದ್ಯಾರ್ಥಿನಿಯರು ಪಣಂಬೂರು ಬೀಚ್ ಗೆ ತೆರಳಿದ್ದರು. ಈ ಬಗ್ಗೆ ಮಾಹಿತಿ ಪಡೆದ ಯುವಕರ ತಂಡವೊಂದು ಬೈಕ್ ಅನ್ನು ಬೆನ್ನತ್ತಿಬಂದಿದೆ. ಬಿಜೈ ಕಾಪಿಕಾಡ್ ಬಳಿ ವಿದ್ಯಾರ್ಥಿಯೊಬ್ಬನ ಬೈಕನ್ನು ತಡೆದು ನಿಲ್ಲಿಸಿ ಹಲ್ಲೆ ನಡೆಸಲಾಗಿದೆ. ಗಾಯಗೊಂಡ ವಿದ್ಯಾರ್ಥಿ ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.












