Saturday, July 5, 2025

ತಾಂಬೂಲ ಕಲಾವಿದರು ಪುಂಜಾಲಕಟ್ಟೆ, ಕುಡ್ಲ ಅಂಗಲಾಪು ತುಳು ನಾಟಕಕ್ಕೆ ಮುಹೂರ್ತ

ಬಂಟ್ವಾಳ: ತಾಂಬೂಲ ಕಲಾವಿದರು ಪುಂಜಾಲಕಟ್ಟೆ, ಕುಡ್ಲ ನಾಟಕ ತಂಡದ 5ನೇ ಕಲಾಕೃತಿ ಅಂಗಲಾಪು ತುಳು ನಾಟಕದ ಮುಹೂರ್ತ ಕಾರ್ಯಕ್ರಮ ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಮಂಗಳವಾರ ಜರಗಿತು.

ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪ್ರಾರ್ಥನೆ ನಡೆಸಿ ನಾಟಕದ ಮುಹೂರ್ತ ನೆರವೇರಿಸಲಾಯಿತು. ಬಳಿಕ ಜಿ.ಪಂ. ನಿಕಟಪೂರ್ವ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ಕೊರೊನಾ ಮಹಾಮಾರಿಯ ಸಂಕಷ್ಟದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಸ್ಥಗಿತಗೊಂಡಿದ್ದು, ಕಲಾವಿದರ ಪರಿಸ್ಥಿತಿ ಶೋಚನೀಯವಾಗಿದೆ. ಈ ನಿಟ್ಟಿನಲ್ಲಿ ನಾಟಕ ಪ್ರದರ್ಶನಗಳಿಗೆ ಹೆಚ್ಚು ಅವಕಾಶವಾಗಲಿ ಎಂದು ಹೇಳಿದರು.

ಕಜೆಕಾರು ವ್ಯವಸಾಯಿಕ ಸಹಕಾರಿ ಸಂಘದ ಉಪಾಧ್ಯಕ್ಷ ರೋಹಿನಾಥ್ ಕಂರ್ಬಡ್ಕ, ಮಿಥುನ್ ಪ್ರಭು, ಹಿರಿಯ ರಂಗಭೂಮಿ ಕಲಾವಿದ ಡಿ.ಎಸ್.ಬೋಳೂರ್, ನಾಟಕ ಕರ್ತೃ, ನಿರ್ದೇಶಕ ರಂಗಚಾಣಕ್ಯ ರಾಘವೇಂದ್ರ ಕಾರಂತ, ಸಂಗೀತ ನಿರ್ದೇಶಕ ತಂಗವೇಲು ಕೊಯಿಲ, ಪ್ರಸಾಧನ ಕಲಾವಿದ ಪ್ರಭಾಕರ ಶೆಟ್ಟಿ, ಸಂಚಾಲಕ ಮೇಧಾವಿ, ಕಲಾವಿದರಾದ ರತ್ನದೇವ್ ಪುಂಜಾಲಕಟ್ಟೆ, ಜಯರಾಜ್ ಅತ್ತಾಜೆ, ಯಶೋಧರ ನೆಲ್ಲಿಗುಡ್ಡೆ, ನಿತೇಶ್ ರಾಯಿ, ರಚನ್ ಆಲಾಡಿ,ಚೇತನ್ ಕೋಡ್ಲಕ್ಕೆ, ಕುಶಾಲಪ್ಪ ಗೌಡ, ರಫೀಕ್ ನೆಲ್ಲಿಗುಡ್ಡೆ, ಅಶೋಕ್, ಶೋನಿತ್‌ರಾಜ್, ಕಾವ್ಯಶ್ರೀ ನಾಕುನಾಡು, ಸುರಕ್ಷಾ ನೆಲ್ಲಿಗುಡ್ಡೆ, ವಾಣಿ ಉಪಸ್ಥಿತರಿದ್ದರು.

More from the blog

Bantwal Rain Damage: ಅನೇಕ ಮನೆಗಳಿಗೆ ಹಾನಿ

ಬಂಟ್ವಾಳ: ಜುಲೈ 3 ರಂದು ರಾತ್ರಿ ಸುರಿದ ಮಳೆಗೆ ತಾಲೂಕಿನ ಅನೇಕ ಕಡೆಗಳಲ್ಲಿ ಹಾನಿ ಸಂಭವಿಸಿದ್ದು, ಲಕ್ಷಾಂತರ ರೂ‌ ನಷ್ಟ ಸಂಭವಿಸಿದೆ. ನೆಟ್ಲ ಮುನ್ನೂರು ಗ್ರಾ.ಪಂ.ವ್ಯಾಪ್ತಿಯ ಏಮಾಜೆ ಭಜನಾ ಮಂದಿರ ಬಳಿಯ ದೇವಪ್ಪ...

Rural station: ಮೇಯಲು ಬಿಟ್ಟ ಕರುಗಳ ಕಳವು, ಸಿ.ಸಿ.ಟಿ.ವಿಯಲ್ಲಿ ದೃಶ್ಯ ಸೆರೆ

ಬಂಟ್ವಾಳ: ಮೇಯಲು ಹೋಗಿದ್ದ ಕರುಗಳು ನಾಪತ್ತೆ, ಕರುಗಳನ್ನು ಕಾರಿನಲ್ಲಿ ತುಂಬಿಸಿಕೊಂಡು ಕದ್ದುಕೊಂಡುವ ಹೋಗುವ ದೃಶ್ಯ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿರುವುದು,ಮಾಲೀಕರಿಗೆ ದೊರಕಿದ್ದು, ಇದೀಗ ಕರುಗಳನ್ನು ಪತ್ತೆ ಮಾಡಿಕೊಡಿ ಎಂದು ಬಂಟ್ವಾಳ ಗ್ರಾಮಾಂತರ ಪೋಲೀಸರಿಗೆ ದೂರು ನೀಡಿದ...

B. C. ROAD : ಜು.19ರಿಂದ 27ರವರೆಗೆ ಭಾರತ ದರ್ಶನ ಯಕ್ಷಗಾನ ತಾಳಮದ್ದಳೆ ನವಾಹ..

ಬಂಟ್ವಾಳ : ಬಿ.ಸಿ.ರೋಡಿನ ತುಳು ಶಿವಳ್ಳಿ ಸಭಾಭವನದಲ್ಲಿ ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಮುಡಿಪು ಅವರಿಂದ ತುಳು ಶಿವಳ್ಳಿ ಸೇವಾ ಟ್ರಸ್ಟ್ ಬಂಟ್ವಾಳ ತಾಲೂಕು ಸಹಭಾಗಿತ್ವದಲ್ಲಿ ಭಾರತ ದರ್ಶನ ಎಂಬ ಯಕ್ಷಗಾನ ತಾಳಮದ್ದಳೆ...

ಬ್ರೋಕರ್ ಗಳ ಮಾತಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ: ಬೇಬಿ ಕುಂದರ್….

ಬಂಟ್ವಾಳ : ಬ್ರೋಕರ್ ಗಳ ಮಾತಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ಜನರ ಸಮಸ್ಯೆ ಪರಿಹಾರ ಮಾಡುತ್ತೇನೆ, ಭ್ರಷ್ಟಾಚಾರ ರಹಿತ ಕೆಲಸಕ್ಕೆ ಒತ್ತು ನೀಡುವುದಾಗಿ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ‌ಕುಂದರ್ ತಿಳಿಸಿದ್ದಾರೆ. ನಗರ ಯೋಜನಾ ಪ್ರಾಧಿಕಾರದ...