Thursday, February 13, 2025

ಮುಕ್ಕ ಚಚ್೯ನಲ್ಲಿ ಪರಿಸರ ದಿನಾಚರಣೆ

ಮುಂಬಯಿ: ಕಥೊಲಿಕ್ ಸಭಾ ಮಂಗಳೂರು ಪ್ರದೇಶ, ಸುರತ್ಕಲ್ ವಲಯ ಮತ್ತು ಘಟಕಗಳ ವತಿಯಿಂದ ಪರಿಸರ ಜಾಗೃತಿ ಅಭಿಯಾನ-2019 ಪ್ರಯುಕ್ತ ಅರಣ್ಯ ಇಲಾಖೆಯ ಸಹಭಾಗಿತ್ವದೊಂದಿಗೆ ಪರಿಸರ ದಿನಾಚರಣೆ ಮುಕ್ಕ ಚಚ್೯ ವಠಾರದಲ್ಲಿ ನಡೆಯಿತು.
ಮಂಗಳೂರು ಧರ್ಮಪ್ರಾಂತ್ಯ ಶ್ರೇಷ್ಠ ಗುರು ಮ್ಯಾಕ್ಸಿಂ ಎಲ್. ನೊರೊನ್ಹಾ ಅಶೀರ್ವಚನಗೈದರು.
ಮುಖ್ಯ ಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿ’ಸೋಜಾ ಗೀಡ ನೆಡುವ ಮೂಲಕ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮಂಗಳೂರು ಉತ್ತರ ಕ್ಷೇತ್ರ ಶಾಸಕ ಡಾ.ವೈ ಭರತ್ ಶೆಟ್ಟಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದರು.
ಕಿನ್ನಿಗೋಳಿ ವಲಯ ಅರಣ್ಯಾಧಿಕಾರಿ ಕೆ.ಸಿ ಮ್ಯಾಥ್ಯು ಪರಿಸರ ಸಂರಕ್ಷಣೆ ಮತ್ತು ಮಳೆ ನೀರು ಇಂಗಿಸುವಿಕೆ ಬಗ್ಗೆ ಮಾಹಿತಿ ನೀಡಿದರು.
ಕಥೋಲಿಕ್ ಸಭಾದ ಅಧ್ಯಾತ್ಮಿಕ ನಿರ್ದೇಶಕ ಮ್ಯಾಥ್ಯು ವಾಸ್, ಸುರತ್ಕಲ್ ವಲಯದ ಪಾವ್ಲ್ ಪಿಂಟೊ, ಅಧ್ಯಾತ್ಮಿಕ ನಿರ್ದೇಶಕ ಸಿರಿಲ್ ಪಿಂಟೊ, ಮಂಗಳೂರು ವಲಯ ಅರಣ್ಯಾಧಿಕಾರಿ ಪಿ.ಶ್ರೀಧರ್, ಮುಕ್ಕ ಚಚ್೯ ಸಮಿತಿಯ ಉಪಾಧ್ಯಕ್ಷ ರೋಶನ್ ಡಿಸೋಜ, ಕಾರ್ಯದರ್ಶಿ ಶೈಲಾ ಡಿಸೋಜ, ಕೇಂದ್ರೀಯ ಸಮಿತಿ ಅಧ್ಯಕ್ಷ ಪಾವ್ಲ್ ರೊಲ್ಫಿ ಡಿಕೊಸ್ತಾ, , ಮುಕ್ಕ ಘಟಕ ಅಧ್ಯಕ್ಷ ಸಂತೋಷ್ ಸಿಕ್ವೇರಾ, ಪರಿಸರ ಸಂರಕ್ಷಣಾ ಸಮಿತಿ ಸಂಚಾಲಕ ಹೆನ್ರಿ ವಾಲ್ಡರ್ ಉಪಸ್ಥಿತರಿದರು.
ಕಥೋಲಿಕ್ ಸಭಾ ಸುರತ್ಕಲ್ ವಲಯಾಧ್ಯಕ್ಷ ರಸ್ಸೆಲ್ ರೊಚ್ ಸ್ವಾಗತಿಸಿದರು. ಕೇಂದ್ರೀಯ ಕಾರ್ಯದರ್ಶಿ ನವೀನ್ ಬ್ರ್ಯಾಗ್ಸ್ ವಂದಿಸಿದರು. ಮುಕ್ಕ ಘಟಕ ಕಾರ್ಯದರ್ಶಿ ಫ್ಲೇವಿ ರೊಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...