Saturday, January 31, 2026

’ಸದೃಢವಾದ ದೇಹಾರೋಗ್ಯ ಸುಖ ನೆಮ್ಮದಿಗೆ ಮೂಲ’: ಅಶೋಕ್ ಕುಮಾರ್

ವಿಟ್ಲ: ಯಾರು ದೈಹಿಕವಾಗಿ ಸಮರ್ಥರಾಗಿರುತ್ತಾರೋ ಅವರು ಮಾನಸಿಕವಾಗಿ ನೆಮ್ಮದಿಯನ್ನು ಹೊಂದಿರುತ್ತಾರೆ. ಆರೋಗ್ಯಕರ ಜೀವನಕ್ಕೆ ಪಠ್ಯೇತರ ಚಟುವಟಿಕೆಗಳು ಪೂರಕವಾಗುತ್ತದೆ. ತಾಳ್ಮೆಯ, ಪರಿಣತ ತರಬೇತುದಾರರಿಂದ ವಿದ್ಯಾರ್ಥಿಯ ಯಶಸ್ಸು ಸಾಧ್ಯ ಎಂದು ಸಾಣೂರು ಪ್ರಕೃತಿ ಸಮೂಹ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಅಶೋಕ್ ಕುಮಾರ್ ಅವರು ಹೇಳಿದರು.
ಅವರು ವಿಠಲ ಪದವಿಪೂರ್ವ ಕಾಲೇಜಿನಲ್ಲಿ ನೂತನವಾಗಿ ಆರಂಭವಾದ ಹಾಗೂ ತಾವೇ ಕೊಡುಗೆಯಾಗಿ ನೀಡಿದ ಮಲ್ಟಿ ಜಿಮ್ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿ ಐ.ಎಸ್.ಒ ನ ಕನ್ಸಲ್ಟೆಂಟ್ ಮನೋಹರ ಪ್ರಭು, ಸಂಸ್ಥೆಯ ಸಂಚಾಲಕ ಎಲ್.ಎನ್ ಕೂಡೂರು, ಕೋಶಾಧಿಕಾರಿ ನಿತ್ಯಾನಂದ ನಾಯಕ್, ಸದಸ್ಯರಾದ ಬಾಬು ಕೆ.ವಿ, ಪದ್ಮಯ್ಯ ಗೌಡ, ಪ್ರಿನ್ಸಿಪಾಲ್ ಆದರ್ಶ ಚೊಕ್ಕಾಡಿ, ಆಡಳಿತಾಧಿಕಾರಿ ಪ್ರಶಾಂತ್ ಚೊಕ್ಕಾಡಿ, ಮೂಡುಬಿದಿರೆಯ ಜಿಮ್ ತರಬೇತುದಾರ ವಿಜಯ್, ವಿಟ್ಲ ಸುಪ್ರಜಿತ್ ಐಟಿಐನ ಕಾರ್‍ಯದರ್ಶಿ ಶ್ರೀಪ್ರಕಾಶ್ ಕುಕ್ಕಿಲ, ನಿವೃತ್ತ ಪ್ರಿನ್ಸಿಪಾಲ್ ರಘುರಾಮ್ ಶಾಸ್ತ್ರಿ ಉಪಸ್ಥಿತರಿದ್ದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...