Friday, June 27, 2025

ಕಷ್ಟಗಳ ಮಧ್ಯೆಯೇ ಕುಲವೃತ್ತಿಯ ಸಾಧಿಸುವ ಛಲ ಬೆಳೆಯಲಿ ಶಿವಾ’ಸ್ ಮುಂಬಯಿ ಪ್ರಸಿದ್ಧ ಕೇಶ ವಿನ್ಯಾಸಕಾರ ಡಾ| ಶಿವರಾಮ ಭಂಡಾರಿ ಅಭಿಮತ

ಮುಂಬಯಿ: ಪ್ರತಿಯೊಬ್ಬರಲ್ಲೂ ಅಡಗಿರುವ ಕೌಶಲ್ಯವು ಶ್ರಮದ ಬೆಂಬಲ ಪಡೆದಾಗ ಮಾತ್ರ ವಿನೂತನ ಹಾದಿಯಲ್ಲಿ ಮುನ್ನಡೆಯಲು ಹಾಗೂ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಹೇರ್ ಸ್ಟೈಲೋ ಮೂಲಕ ಅಂತರಾಷ್ಟ್ರೀಯ ಪ್ರಸಿದ್ಧಿ ಗಿಟ್ಟಿಸಿ ಕೊಂಡಿರುವ ಮುಂಬಯಿನ ಖ್ಯಾತ ಕೇಶ ವಿನ್ಯಾಸಕಾರ, ಶಿವಾ’ಸ್ ಹೇರ್ ಡಿಝೈನರ್‍ಸ್ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಡಾ| ಶಿವರಾಮ ಕೆ.ಭಂಡಾರಿ ಹೇಳಿದರು.

ಉಜಿರೆ ಅಲ್ಲಿನ ಎಸ್‌ಡಿಎಂ ಸ್ನಾತಕೋತ್ತರ ವಿಭಾಗದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ (ಮಾಸ್ ಕಮ್ಯೂನಿಕೇಶನ್ ಎಂಡ್ ಜರ್ನಲಿಸಂ) ವಿಭಾಗದಲ್ಲಿ ಕಳೆದ ಗುರುವಾರ ಆಯೋಜಿಸಿದ್ದ ವಿಶೇಷ ಸಂವಾದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಿವರಾಮ ಭಂಡಾರಿ, ಬಾಳಸಾಹೇಬ್ ಠಾಕ್ರೆ, ಅಮಿತಾಬ್ ಬಚ್ಚನ್ ಸೇರಿದಂತೆ ಬಾಲಿವುಡ್‌ನ ಖ್ಯಾತ ಸಿನೆಮಾ ತಾರೆಯರ ಕೇಶವಿನ್ಯಾಸಕಾರರಾಗಿ ಗುರುತಿಸಿ ಕೊಂಡಿರುವ ಭಂಡಾರಿ, ತಮ್ಮ ವೃತ್ತಿಪರ ಯಾಣದ ವಿವಿಧ ವಿವರಗಳನ್ನು ಈ ಸಂದರ್ಭದಲ್ಲಿ ಪ್ರಸ್ತಾಪಿಸಿದರು. ದಕ್ಷಿಣ ಕನ್ನಡದ ಹಳ್ಳಿಯ ಹಿನ್ನೆಲೆಯೊಂದಿಗೆ ಮುಂಬೈ ಜಗತ್ತನ್ನು ಪ್ರವೇಶಿಸಿ ಬದುಕನ್ನು ಕಟ್ಟಿಕೊಂಡ ಬಗೆಯನ್ನು ವಿವರಿಸುತ್ತಾ, ಕುಲಕಸಬು ಎನ್ನುವುದು ಭಾರತೀಯರಿಗೆ ಪಾವಿತ್ರ್ಯ ಹಾಗೂ ವೈಶಿಷ್ಟ್ಯವಾಗಿದ್ದು ಇಂತಹ ಕುಲವೃತ್ತಿಯ ಸಾಧನೆ ಪ್ರತಿಷ್ಠೆ ಮತ್ತು ನೆಮ್ಮದಿಗೆ ಪೂರಕವಾಗಿದೆ. ಅತ್ಯಂತ ಕಡಿಮೆ ಸಂಬಳದೊಂದಿಗೆ ಶುರುವಾದ ಕೇಶವಿನ್ಯಾಸ ದ ವೃತ್ತಿಪರಯಾನ 250ಕ್ಕಿಂತಲೂ ಹೆಚ್ಚಿನ ಸಿಬ್ಬಂದಿವರ್ಗ ಹೊಂದಿ ಬೃಹತ್ ಸಂಸ್ಥೆಯನ್ನು ಸ್ಥಾಪಿಸುವುದರೊಂದಿಗೆ ಯಶಸ್ಸಿನ ಉತ್ತುಂಗ ತಲುಪಿದ್ದನ್ನು ನೆನಪಿಸಿ ಕೊಂಡರು.

 

ಕಷ್ಟಗಳ ಮಧ್ಯೆಯೇ ಸಾಧಿಸುವ ಛಲ ಬಿಟ್ಟುಕೊಡದ ಕಾರಣಕ್ಕಾಗಿಯೇ ಬಾಲಿವುಡ್‌ನಲ್ಲಿ ವಿಭಿನ್ನ ಕೇಶವಿನ್ಯಾಸಕಾರ ಎಂಬ ಮೆಚ್ಚುಗೆಗೆ ಪಾತ್ರವಾಗಲು ಸಾಧ್ಯವಾಯಿತು. ಪ್ರತಿಯೊಬ್ಬರೂ ಕಷ್ಟಗಳ ನಡುವೆಯೇ ಬದುಕನ್ನು ಕಟ್ಟಿಕೊಳ್ಳಬೇಕು. ಕಷ್ಟಗಳು ಪ್ರತಿಭೆಯ ಮೇಲೆ ಸವಾರಿ ಮಾಡುವ ಅವಕಾಸ ಕೊಡಬಾರದು. ಪ್ರತಿಭೆಯನ್ನು ಸಕಾಲಿಕವಾಗಿ ಪೂರಕವಾಗಿಸಿಕೊಂಡು ಬೆಳೆದು ನಿಲ್ಲುವ ಉತ್ಸಾಹ ಮತ್ತು ಶ್ರಮಿಸುವ ಶ್ರದ್ಧೆಯೊಂದಿಗೆ ಮುನ್ನಡೆದರೆ ಯಶಸ್ಸು ಸಾಧ್ಯವಾಗುತ್ತದೆ ಎಂದರು.

ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ಇದರ ಗೌರವ ಪ್ರಧಾನ ಕಾರ್ಯದರ್ಶಿ, ಪತ್ರಕರ್ತ ರೋನ್ಸ್ ಬಂಟ್ವಾಳ್ ವಿದ್ಯಾಥಿಗಳನ್ನುದ್ದೇಶಿಸಿ ಮಾತನಾಡಿ, ಪರಿಸರ ಕಾಳಜಿ ಸಾಮುದಾಯಿಕವಾಗಿ ವ್ಯಕ್ತವಾಗಬೇಕಾದ ಅಗತ್ಯತೆಯನ್ನು ಪ್ರತಿಪಾದಿಸಿದರು. ಮಹಾನಗರಗಳು ಸೇರಿದತೆ ಗ್ರಾಮೀಣ ಪ್ರದೇಶಗಳಲ್ಲೂ ಸದ್ಯ ಪ್ರಾಣಿ, ಪಕ್ಷಿ ಸೇರಿದಂತೆ ಜೀವಜಗತ್ತಿನ ಬಗ್ಗೆ ನಿರ್ಲಕ್ಷ್ಯ ಧೋರಣೆ ಮುಂದುವರೆಯುತ್ತಿದೆ. ಆ ಮೂಲಕ ಜೀವಪರ ಕಾಳಜಿ ಕಣ್ಮರೆಯಾಗುತ್ತಿದೆ. ಪರಿಸರ ಮತ್ತು ಜೀವಜಗತ್ತಿನ ಕುರಿತು ಕಾಳಜಿ ಮೂಡಿಸುವ ನಿಟ್ಟಿನಲ್ಲಿ ಪಾಮಾಣಿಕ ಪ್ರಯತ್ನ ಅತ್ಯವಶ್ಯಕ. ವಿದ್ಯಾಥಿಗಳು ಅಧ್ಯಯನನಿರತರಾದ ಸಂದರ್ಭದಲ್ಲಿ ಸಮಾಜಕ್ಕೆ ಉಪಯುಕ್ತ ಆಗಬಲ್ಲ ಬರಹಗಳನ್ನು ಬರೆಯುವುದರ ಕಡೆಗೆ ವಿಷೇಶ ಆಸಕ್ತಿ ತೋರಬೇಕು ಎಂದು ಸಲಹೆ ನೀಡಿದರು.

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಗೀತಾ ಎ.ಜೆ ಬಿಳಿನೆಲೆ, ಡಾ| ಎನ್.ಕೆ ಪ್ರಬಾಕರ್, ಪತ್ರಕರ್ತ ಆರೀಫ್ ಕಲಕಟ್ಟಾ ಉಪಸ್ಥಿತರಿದ್ದು ಪ್ರೊ| ಎಂ.ಪಿ ಶ್ರೀನಾಥ್ ಅರಸಿನಮಕ್ಕಿ ಸ್ವಾಗತಿಸಿ ಪ್ರಸ್ತಾವನೆಗೈದರು. ಪ್ರಾಧ್ಯಾಪಕ ಡಾ| ಹಂಪೇಶ್ ಕೆ.ಎಸ್ ವಂದಿಸಿರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...