Sunday, January 25, 2026

ತುಳಸೀ ವೇಣುಗೋಪಾಲ್ ವಿಧಿವಶ

ಮುಂಬಯಿ: ಮುಂಬಯಿ ಮಹಾನಗರದಲ್ಲಿನ ಹೆಸರಾಂತ ಲೇಖಕಿ, ಕವಯತ್ರಿ, ಕನ್ನಡ ಲೇಖಕಿಯರ ಬಳಗ ಮುಂಬಯಿ ‘ಸೃಜನ’ ಸಂಸ್ಥೆ ಮತ್ತು ಸ್ಪಾ ರೋ ಸಂಸ್ಥೆಗಳ ಸಕ್ರೀಯ ಸದಸ್ಯೆ, ಉದಯವಾಣಿ ಮುಂಬಯಿ ಇದರ ನಿವೃತ್ತ ಬ್ಯೂರೋ ಚೀಫ್ ಸ್ವರ್ಗೀಯ ಕೆ.ಟಿ ವೇಣುಗೋಪಾಲ್ ಧರ್ಮಪತ್ನಿ ತುಳಸೀ ವೇಣುಗೋಪಾಲ್ (65.) ಮಂಗಳೂರು ದೇರಳಕಟ್ಟೆ ಅಲ್ಲಿನ ಖಾಸಾಗಿ ಆಸ್ಪತ್ರೆಯಲ್ಲಿ ಅಲ್ಪ ಕಾಲದ ಅಸ್ವಸ್ಥತೆಯಿಂದ ಇಂದಿಲ್ಲಿ ಸೋಮವಾರ (ಎ.08) ನಿಧನರಾದರು.

ಮಂಗಳೂರು ಬೋಳಾರ ಮೂಲತಃ ತುಳಸೀ ವೇಣುಗೋಪಾಲ್ ಅವರು ವಿಕಾಸ್ ವೇಣುಗೋಪಾಲ್ (ಸುಪುತ್ರ), ರಿಚಾ ವಿಕಾಸ್ (ಸೊಸೆ) ಹಾಗೂ ಕುಟುಂಬಸ್ಥರು ಮತ್ತು ಅಪಾರ ಸಂಖ್ಯೆಯ ಮಿತ್ರವರ್ಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ಸಂಜೆ ಮಂಗಳೂರುನ ರುಧ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಸುಪುತ್ರ ವಿಕಾಸ್ ತಿಳಿಸಿದ್ದಾರೆ.

ತುಳಸೀ ನಿಧನಕ್ಕೆ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ, ಸೃಜನಾ ಬಳಗದ ಮಾರ್ಗದರ್ಶಿ ಡಾ| ಸುನೀತಾ ಎಂ.ಶೆಟ್ಟಿ, ಸಂಚಾಲಕಿ ದಾಕ್ಷಾಯಣಿ ಯಡಹಳ್ಳಿ, ಮಿತ್ರಾ ವೆಂಕಟ್ರಾಜ್, ಡಾ| ಗಿರಿಜಾ ಶಾಸ್ತ್ರಿ, ಅಹಲ್ಯಾ ಬಲ್ಲಾಳ, ಡಾ| ವಾಣಿ ಉಚ್ಚಿಲ್ಕರ್, ಮೀನಾ ಕಾಳಾವರ್ ಶ್ಯಾಮಲಾ ಮಾಧವ, ಡಾ| ಸುಮಾ ದ್ವಾರಕನಾಥ್, ಶ್ಯಾಮಲಾ ಮಾಧವ್, ಡಾ| ಜಿ.ಪಿ ಕುಸುಮಾ, ಸಾ. ದಯಾ, ಮೋಹನ್ ಮಾರ್ನಾಡ್, ಡಾ| ಭರತ್ ಕುಮಾರ್ ಪೊಲಿಪು, ಓಂದಾಸ್ ಕಣ್ಣಂಗಾರ್ ಮತ್ತಿತರರು ಸಂತಾಪ ವ್ಯಕ್ತ ಪಡಿಸಿದ್ದಾರೆ.

More from the blog

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...