Monday, January 26, 2026

ತೀಯಾ ಸಮಾಜ, ಪಶ್ಚಿಮ ವಲಯ ದಿಂದ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ, ಸಂದಿಗ್ಧ ಪರಿಸ್ಥಿತಿಯಲ್ಲೂ ಸ್ಥಳೀಯ ಸಮಿತಿಯ ಕಾರ್ಯ ಸ್ಲಾಘನೀಯ – ರೂಪೇಶ್ ರಾವ್

ಮುಂಬಯಿ : ಕೊರೋನಾ ಸಂದರ್ಭದಲ್ಲಿ ಸರಕಾರದ ನಿಯಮಾವಳಿಯನ್ನು ಪಾಲಿಸಿ ತೀಯಾ ಸಮಾಜ, ಮುಂಬಯಿಯ ಪಶ್ಚಿಮ ವಲಯ ಸ್ಥಳೀಯ ಸಮಿತಿಯು ಇಂದು ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯನ್ನು ನೆರವೇರಿಸಿದ್ದು, ಈ ಸಂದಿಗ್ಧ ಪರಿಸ್ಥಿತಿಯಲ್ಲೂ ಸ್ಥಳೀಯ ಸಮಿತಿಯು ಧಾರ್ಮಿಕ ಕಾರ್ಯವನ್ನು ನಡೆಸಿ ಇಂದಿನ ಯುವಜನಾಂಗದಲ್ಲಿ ಧಾರ್ಮಿಕ ಪ್ರಜ್ನೆಯನ್ನು ಮೂಡಿಸುವಂತೆ ಮಾಡುತ್ತಿದ್ದು ನಿಜಕ್ಕೂ ಅಭಿನಂದನೀಯ ಎಂದು ತೀಯಾ ಸಮಾಜ ಮುಂಬಯಿಯ ಉಪಾಧ್ಯಕ್ಷ, ಉದ್ಯಮಿ ರೂಪೇಶ್ ವೈ ರಾವ್ ಅಭಿಪ್ರಾಯ ಪಟ್ಟರುವರು.

ಜ. 17 ರಂದು ಜೋಗೇಶ್ವರಿ ಪಶ್ಚಿಮದ ಬಾಂದ್ರೇಕರ್ ವಾಡಿಯ ಶ್ರೀ ಸಿದ್ದಿವಿನಾಯಕ ಮಂದಿರದ ಸಭಾಗೃಹದಲ್ಲಿ ತೀಯಾ ಸಮಾಜ, ಪಶ್ಚಿಮ ವಲಯದ ವತಿಯಿಂದ ಜರಗಿದ 19 ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯಲ್ಲಿ ಬಾಗವಹಿಸಿ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ ರೂಪೇಶ್ ವೈ ರಾವ್ ನಮ್ಮ ಸಮಾಜದ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಇಂತಹ ಧಾರ್ಮಿಕ ಕಾರ್ಯಗಳು ಪೂರಕವಾಗುದರಲ್ಲಿ ಸಂದೇಹವಿಲ್ಲ ಎಂದರು.

ತೀಯಾ ಸಮಾಜ ಮುಂಬಯಿಯ ಪಶ್ಚಿಮ ವಲಯದ ಕಾರ್ಯಾಧ್ಯಕ್ಷ ಸುಧಾಕರ ಉಚ್ಚಿಲ್ ಇವರ ಯಜಮಾನಿಕೆಯಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಮಾಜದ ಮಾಜಿ ಅಧ್ಯಕ್ಷ ಚಂದ್ರಶೇಖರ ಬೆಳ್ಚಡ, ಮಾಜಿ ಕೋಶಾಧಿಕಾರಿ ರಮೇಶ್ ಉಳ್ಳಾಲ್, ಪಶ್ಚಿಮ ವಲಯದ ಮಾಜಿ ಕಾರ್ಯಾಧ್ಯಕ್ಷ ಐಲ್ ಬಾಬು, ಸುಂದರ್ ಬಿ. ಐಲ್, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷರುಗಳಾದ ದಿವ್ಯ ಆರ್. ಕೊಟ್ಯಾನ್, ಚಂದ್ರಾ ಸುವರ್ಣ, ತೀಯಾ ಸಮಾಜದ ಜೊತೆ ಕೋಶಧಿಕಾರಿ ವಿಶ್ವಥ್ ಬದ್ದೂರು, ಸಮಾಜದ ಸಾಂಸ್ಕೃತಿಕ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ, ಚಿತ್ರ ನಟಿ ಚಂದ್ರಾ ವಸಂತ್, ಕಾರ್ಯಕಾರಿ ಸಮಿತಿಯ ಸದಸ್ಯರಾದ ವಾಸುದೇವ ಪಾಲನ್, ಶೈಲೇಶ್ ಬಂಗೇರ, ಮಹಿಳಾ ವಿಭಾಗದ ಕಾರ್ಯದರ್ಶಿ ಶಶಿಪ್ರಭಾ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.

ಪೂಜಾ ವಿಧಿಯನ್ನು ನರಹರಿ ತಂತ್ರಿ ಯವರು ನೆರವೇರಿಸಿದ್ದು ಪೂಜೆಯಲ್ಲಿ ರವಿಚಂದ್ರ ಸುವರ್ಣ ಮತ್ತು ದಿವ್ಯಾ ಸುವರ್ಣ ದಂಪತಿ ಭಾಗವಹಿಸಿದ್ದರು.

ಪಶ್ಚಿಮ ವಲಯ ಪ್ರಾದೇಶಿಕ ಸಮಿತಿಯ ಉಪ ಕಾರ್ಯಾಧ್ಯಕ್ಷರಾದ ಬಾಬು ಕೋಟ್ಯಾನ್, ಕಾರ್ಯದರ್ಶಿ ಪದ್ಮನಾಭ ಸುವರ್ಣ, ಕೋಶಾಧಿಕಾರಿ ರಾಮಚಂದ್ರ ಎನ್ ಕೋಟ್ಯಾನ್ ಮತ್ತು ಕಾರ್ಯಕಾರಿ ಸಮಿತಿ ಹಾಗೂ ಉಪಸಮಿತಿಗಳ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದು ಪೂಜಾ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕೊನೆಗೆ ಪ್ರಸಾದ ವಿತರಣೆ ನಂತರ ಲಘು ಉಪಹಾರದ ವ್ಯವಸ್ತೆ ಮಾಡಲಾಗಿತ್ತು.

More from the blog

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...

ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ : ತಹಶೀಲ್ದಾರ್ ಜಿ. ಮಂಜುನಾಥ್

ಬಂಟ್ವಾಳ : ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಎಲ್ಲರನ್ನು ಒಳಗೊಂಡ ಸಮೃದ್ಧ ಭಾರತವನ್ನು ಸಂವಿಧಾನದ ಶಕ್ತಿಯಜೊತೆ ನಿರ್ಮಿಸೋಣ ಎಂದು ತಾಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಜಿ ಮಂಜುನಾಥ್ ಹೇಳಿದರು. ಬಂಟ್ವಾಳ ತಾಲೂಕು ರಾಷ್ಟ್ರೀಯ...

ಸುಭದ್ರ ಜಾತ್ಯತೀತ ಹಿಂದು ಸಮಾಜ ನಿರ್ಮಾಣವಾಗಬೇಕು – ವಜ್ರದೇಹಿ ಶ್ರೀ

ವಿಟ್ಲ: ಹಿಂದು ಸಮಾಜ ಪ್ರಸಕ್ತ ಪರಿಸ್ಥಿತಿಯಲ್ಲೂ ಎಚ್ಚೆತ್ತುಕೊಳ್ಳದಿದ್ದರೆ ಹಿಂದುಗಳು ಗಂಡಾಂತರ ಪರಿಸ್ಥಿತಿಯನ್ನು ಎದುರಿಸಬೇಕಾಗಬಹುದು. ಜಾತಿ ಸಮುದಾಯಗಳು ಒಟ್ಟಾಗಿ ಸುಭದ್ರ ಜಾತ್ಯತೀತ ಹಿಂದು ಸಮಾಜ ನಿರ್ಮಾಣವಾಗಬೇಕು. ಹೀಗಾದಾಗ ಮಾತ್ರ ರಾಜಕೀಯ ಷಡ್ಯಂತ್ರಗಳನ್ನು ಮೆಟ್ಟಿ ಮುನ್ನಡೆಯ...