Wednesday, February 12, 2025

ಮುಂಬೈ ರೈಲ್ವೇ ಪ್ರಯಾಣಿಕರ ಸಮಸ್ಯೆಗೆ ಸ್ಪಂದಿಸಿದ ಸಂಸದ ನಳಿನ್ 

ಬಂಟ್ವಾಳ: ಮಂಗಳೂರು-ನವ ದೆಹಲಿ ದುರಂತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಮುಂಬಯಿಗೆ ಪ್ರಯಾಣಿಸುತ್ತಿದ್ದ ಹಿರಿಯ ನಾಗರಿಕರಾದ ಮಹಿಳೆಯೊಬ್ಬರಿಗೆ ಎದುರಾದ ಸಮಸ್ಯೆಗೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತರು ಫೇಸ್ಬುಕ್ ಗೆ ಬರೆದ ಪತ್ರಕ್ಕೆ ತಕ್ಷಣ ಸ್ಪಂದಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು, ರೈಲ್ವೇ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಪರಿಹಾರ ಕಲ್ಪಿಸಿಕೊಟ್ಟಿದ್ದಾರೆ.

ನಿನ್ನೆ ಮುಂಜಾನೆ ಕಂಕನಾಡಿ ಜಂಕ್ಷನ್ ನಿಂದ ಹೊರಟ ದುರಂತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಮಹಿಳೆಯೊಬ್ಬರು ತಮ್ಮ ಮಗಳೊಂದಿಗೆ ಪ್ರಯಾಣಿಸುತ್ತಿದ್ದರು. ಅವರು ಖಾದಿಸಿರುವ ಸೀಟಿನ ಮೇಲೆ ಬೆಳಗ್ಗಿನ ಉಪಹಾರ ಮತ್ತು ಮಧ್ಯಾಹ್ನದ ಊಟದ ಪೊಟ್ಟಣಗಳನ್ನು ಇರಿಸಿದ್ದರು. ಕೆಳಗಿನ ಸೀಟಿನ ಮೇಲಿನ ಹಾಸಿಗೆ ಸೀಟು ಸ್ವಲ್ಪ ಮಟ್ಟಿಗೆ ಹಾನಿಗೊಂಡಿದ್ದರಿಂದ ಅದನ್ನು ಬಳಸುವಂತೆ ಇರಲಿಲ್ಲ.

ಸಮಸ್ಯೆಯ ಬಗ್ಗೆ ಆಹಾರ ವಿತರಕ ವಿಭಾಗದ ಸಿಬ್ಬಂದಿಗಳಲ್ಲಿ, ರೈಲ್ವೇ ಸಿಬ್ಬಂದಿಗಳಲ್ಲಿ ದೂರಿಕೊಂಡಿದ್ದರೂ ಯಾವುದೇ ಪರಿಹಾರ ದೊರೆತಿರಲಿಲ್ಲ. ಘಟನೆಯನ್ನು ಗಮನಿಸುತ್ತಿದ್ದ ಸಹ ಪ್ರಯಾಣಿಕರಾದ ಸಾಮಾಜಿಕ ಕಾರ್ಯಕರ್ತ, ಪತ್ರಕರ್ತ ಹೊನ್ನಯ್ಯ ಕಾಟಿಪಳ್ಳ ಅವರು, ಸಮಸ್ಯೆಯನ್ನು ಸವಿಸ್ತಾರವಾಗಿ ವಿವರಿಸಿದ ಪತ್ರವೊಂದನ್ನು ಫೇಸ್ಬುಕ್ ನ ತಮ್ಮ ಖಾತೆಗೆ ಅಪ್ಲೋಡ್ ಮಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ವೈರಲಾದ ಈ ಪತ್ರ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಗಮನ ಸೆಳೆಯಿತು. ಸಮಸ್ಯೆಯ ಬಗ್ಗೆ ತಕ್ಷಣ ಮಾಹಿತಿ ಪಡೆದ ಸಂಸದರು, ರೈಲ್ವೇ ಅಧಿಕಾರಿಗಳೊಂದಿಗೆ ಚರ್ಚಿಸಿ, ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಹಿಳಾ ಪ್ರಯಾಣಿಕರಿದ್ದ ಬೋಗಿಗೆ ಧಾವಿಸಿದ ಅಧಿಕಾರಿಗಳು ಸೀಟಿನಲ್ಲಿ ಇರಿಸಲಾದ ಆಹಾರ ಪೊಟ್ಟಣಗಳನ್ನು ಸ್ಥಳಾಂತರಿಸಿ, ಮಹಿಳಾ ಪ್ರಯಾಣಿಕರಿಗೆ ಸೀಟಿನ ವ್ಯವಸ್ಥೆ ಕಲ್ಪಿಸಿದರು. ಹಾನಿಗೊಂಡಿದ್ದ ಮೇಲಿನ ಸೀಟನ್ನು ದುರಸ್ತಿ ಮಾಡಲಾಯಿತು. ಸಂಸದರ ಸಕಾಲಿಕ ಕ್ರಮವನ್ನು ಪ್ರಯಾಣಿಕರು ಶ್ಲಾಘಿಸಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...