Friday, June 27, 2025

ಮುಂಬೈ ರೈಲ್ವೇ ಪ್ರಯಾಣಿಕರ ಸಮಸ್ಯೆಗೆ ಸ್ಪಂದಿಸಿದ ಸಂಸದ ನಳಿನ್ 

ಬಂಟ್ವಾಳ: ಮಂಗಳೂರು-ನವ ದೆಹಲಿ ದುರಂತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಮುಂಬಯಿಗೆ ಪ್ರಯಾಣಿಸುತ್ತಿದ್ದ ಹಿರಿಯ ನಾಗರಿಕರಾದ ಮಹಿಳೆಯೊಬ್ಬರಿಗೆ ಎದುರಾದ ಸಮಸ್ಯೆಗೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತರು ಫೇಸ್ಬುಕ್ ಗೆ ಬರೆದ ಪತ್ರಕ್ಕೆ ತಕ್ಷಣ ಸ್ಪಂದಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು, ರೈಲ್ವೇ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಪರಿಹಾರ ಕಲ್ಪಿಸಿಕೊಟ್ಟಿದ್ದಾರೆ.

ನಿನ್ನೆ ಮುಂಜಾನೆ ಕಂಕನಾಡಿ ಜಂಕ್ಷನ್ ನಿಂದ ಹೊರಟ ದುರಂತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಮಹಿಳೆಯೊಬ್ಬರು ತಮ್ಮ ಮಗಳೊಂದಿಗೆ ಪ್ರಯಾಣಿಸುತ್ತಿದ್ದರು. ಅವರು ಖಾದಿಸಿರುವ ಸೀಟಿನ ಮೇಲೆ ಬೆಳಗ್ಗಿನ ಉಪಹಾರ ಮತ್ತು ಮಧ್ಯಾಹ್ನದ ಊಟದ ಪೊಟ್ಟಣಗಳನ್ನು ಇರಿಸಿದ್ದರು. ಕೆಳಗಿನ ಸೀಟಿನ ಮೇಲಿನ ಹಾಸಿಗೆ ಸೀಟು ಸ್ವಲ್ಪ ಮಟ್ಟಿಗೆ ಹಾನಿಗೊಂಡಿದ್ದರಿಂದ ಅದನ್ನು ಬಳಸುವಂತೆ ಇರಲಿಲ್ಲ.

ಸಮಸ್ಯೆಯ ಬಗ್ಗೆ ಆಹಾರ ವಿತರಕ ವಿಭಾಗದ ಸಿಬ್ಬಂದಿಗಳಲ್ಲಿ, ರೈಲ್ವೇ ಸಿಬ್ಬಂದಿಗಳಲ್ಲಿ ದೂರಿಕೊಂಡಿದ್ದರೂ ಯಾವುದೇ ಪರಿಹಾರ ದೊರೆತಿರಲಿಲ್ಲ. ಘಟನೆಯನ್ನು ಗಮನಿಸುತ್ತಿದ್ದ ಸಹ ಪ್ರಯಾಣಿಕರಾದ ಸಾಮಾಜಿಕ ಕಾರ್ಯಕರ್ತ, ಪತ್ರಕರ್ತ ಹೊನ್ನಯ್ಯ ಕಾಟಿಪಳ್ಳ ಅವರು, ಸಮಸ್ಯೆಯನ್ನು ಸವಿಸ್ತಾರವಾಗಿ ವಿವರಿಸಿದ ಪತ್ರವೊಂದನ್ನು ಫೇಸ್ಬುಕ್ ನ ತಮ್ಮ ಖಾತೆಗೆ ಅಪ್ಲೋಡ್ ಮಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ವೈರಲಾದ ಈ ಪತ್ರ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಗಮನ ಸೆಳೆಯಿತು. ಸಮಸ್ಯೆಯ ಬಗ್ಗೆ ತಕ್ಷಣ ಮಾಹಿತಿ ಪಡೆದ ಸಂಸದರು, ರೈಲ್ವೇ ಅಧಿಕಾರಿಗಳೊಂದಿಗೆ ಚರ್ಚಿಸಿ, ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಹಿಳಾ ಪ್ರಯಾಣಿಕರಿದ್ದ ಬೋಗಿಗೆ ಧಾವಿಸಿದ ಅಧಿಕಾರಿಗಳು ಸೀಟಿನಲ್ಲಿ ಇರಿಸಲಾದ ಆಹಾರ ಪೊಟ್ಟಣಗಳನ್ನು ಸ್ಥಳಾಂತರಿಸಿ, ಮಹಿಳಾ ಪ್ರಯಾಣಿಕರಿಗೆ ಸೀಟಿನ ವ್ಯವಸ್ಥೆ ಕಲ್ಪಿಸಿದರು. ಹಾನಿಗೊಂಡಿದ್ದ ಮೇಲಿನ ಸೀಟನ್ನು ದುರಸ್ತಿ ಮಾಡಲಾಯಿತು. ಸಂಸದರ ಸಕಾಲಿಕ ಕ್ರಮವನ್ನು ಪ್ರಯಾಣಿಕರು ಶ್ಲಾಘಿಸಿದ್ದಾರೆ.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...