Friday, January 30, 2026

ಮುಂಬೈ ರೈಲ್ವೇ ಪ್ರಯಾಣಿಕರ ಸಮಸ್ಯೆಗೆ ಸ್ಪಂದಿಸಿದ ಸಂಸದ ನಳಿನ್ 

ಬಂಟ್ವಾಳ: ಮಂಗಳೂರು-ನವ ದೆಹಲಿ ದುರಂತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಮುಂಬಯಿಗೆ ಪ್ರಯಾಣಿಸುತ್ತಿದ್ದ ಹಿರಿಯ ನಾಗರಿಕರಾದ ಮಹಿಳೆಯೊಬ್ಬರಿಗೆ ಎದುರಾದ ಸಮಸ್ಯೆಗೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತರು ಫೇಸ್ಬುಕ್ ಗೆ ಬರೆದ ಪತ್ರಕ್ಕೆ ತಕ್ಷಣ ಸ್ಪಂದಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು, ರೈಲ್ವೇ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಪರಿಹಾರ ಕಲ್ಪಿಸಿಕೊಟ್ಟಿದ್ದಾರೆ.

ನಿನ್ನೆ ಮುಂಜಾನೆ ಕಂಕನಾಡಿ ಜಂಕ್ಷನ್ ನಿಂದ ಹೊರಟ ದುರಂತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಮಹಿಳೆಯೊಬ್ಬರು ತಮ್ಮ ಮಗಳೊಂದಿಗೆ ಪ್ರಯಾಣಿಸುತ್ತಿದ್ದರು. ಅವರು ಖಾದಿಸಿರುವ ಸೀಟಿನ ಮೇಲೆ ಬೆಳಗ್ಗಿನ ಉಪಹಾರ ಮತ್ತು ಮಧ್ಯಾಹ್ನದ ಊಟದ ಪೊಟ್ಟಣಗಳನ್ನು ಇರಿಸಿದ್ದರು. ಕೆಳಗಿನ ಸೀಟಿನ ಮೇಲಿನ ಹಾಸಿಗೆ ಸೀಟು ಸ್ವಲ್ಪ ಮಟ್ಟಿಗೆ ಹಾನಿಗೊಂಡಿದ್ದರಿಂದ ಅದನ್ನು ಬಳಸುವಂತೆ ಇರಲಿಲ್ಲ.

ಸಮಸ್ಯೆಯ ಬಗ್ಗೆ ಆಹಾರ ವಿತರಕ ವಿಭಾಗದ ಸಿಬ್ಬಂದಿಗಳಲ್ಲಿ, ರೈಲ್ವೇ ಸಿಬ್ಬಂದಿಗಳಲ್ಲಿ ದೂರಿಕೊಂಡಿದ್ದರೂ ಯಾವುದೇ ಪರಿಹಾರ ದೊರೆತಿರಲಿಲ್ಲ. ಘಟನೆಯನ್ನು ಗಮನಿಸುತ್ತಿದ್ದ ಸಹ ಪ್ರಯಾಣಿಕರಾದ ಸಾಮಾಜಿಕ ಕಾರ್ಯಕರ್ತ, ಪತ್ರಕರ್ತ ಹೊನ್ನಯ್ಯ ಕಾಟಿಪಳ್ಳ ಅವರು, ಸಮಸ್ಯೆಯನ್ನು ಸವಿಸ್ತಾರವಾಗಿ ವಿವರಿಸಿದ ಪತ್ರವೊಂದನ್ನು ಫೇಸ್ಬುಕ್ ನ ತಮ್ಮ ಖಾತೆಗೆ ಅಪ್ಲೋಡ್ ಮಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ವೈರಲಾದ ಈ ಪತ್ರ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಗಮನ ಸೆಳೆಯಿತು. ಸಮಸ್ಯೆಯ ಬಗ್ಗೆ ತಕ್ಷಣ ಮಾಹಿತಿ ಪಡೆದ ಸಂಸದರು, ರೈಲ್ವೇ ಅಧಿಕಾರಿಗಳೊಂದಿಗೆ ಚರ್ಚಿಸಿ, ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಹಿಳಾ ಪ್ರಯಾಣಿಕರಿದ್ದ ಬೋಗಿಗೆ ಧಾವಿಸಿದ ಅಧಿಕಾರಿಗಳು ಸೀಟಿನಲ್ಲಿ ಇರಿಸಲಾದ ಆಹಾರ ಪೊಟ್ಟಣಗಳನ್ನು ಸ್ಥಳಾಂತರಿಸಿ, ಮಹಿಳಾ ಪ್ರಯಾಣಿಕರಿಗೆ ಸೀಟಿನ ವ್ಯವಸ್ಥೆ ಕಲ್ಪಿಸಿದರು. ಹಾನಿಗೊಂಡಿದ್ದ ಮೇಲಿನ ಸೀಟನ್ನು ದುರಸ್ತಿ ಮಾಡಲಾಯಿತು. ಸಂಸದರ ಸಕಾಲಿಕ ಕ್ರಮವನ್ನು ಪ್ರಯಾಣಿಕರು ಶ್ಲಾಘಿಸಿದ್ದಾರೆ.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...