Sunday, January 25, 2026

9 ವರ್ಷ ಪ್ರಾಯದ ತಮ್ಮನನ್ನೇ ಕೊಂದ 15 ವರ್ಷದ ಅಕ್ಕ: ಕಾರಣ ಏನು ಗೊತ್ತಾ?

ರಾಯ್‌ಬರೇಲಿ: ಉತ್ತರ ಪ್ರದೇಶದ ರಾಯ್‌ಬರೇಲಿ ಜಿಲ್ಲೆಯ ಮನೆಯೊಂದರಲ್ಲಿ ನಾಪತ್ತೆಯಾದ 9 ವರ್ಷ ಪ್ರಾಯದ ಬಾಲಕನ ನಾಪತ್ತೆ ಪ್ರಕರಣವನ್ನು ಭೇದಿಸಿದ ಪೊಲೀಸರಿಗೆ ಅಚ್ಚರಿ ಕಾದಿತ್ತು. ಬಾಲಕನನ್ನು ಆತನ ಸಹೋದರಿಯೇ ಕೊಲೆ ಮಾಡಿ ಸ್ಟೋರ್ ರೂಂನಲ್ಲಿ ಇಟ್ಟಿದ್ದಳು. ಇಷ್ಟಕ್ಕೂ ಈ ಕೊಲೆಗೆ ಬಾಯ್‌ಫ್ರೆಂಡ್ ಜೊತೆ ಮಾತನಾಡಬೇಡ ಎಂಬುದೇ ಕಾರಣವಾಗಿತ್ತು.

15 ವರ್ಷ ಪ್ರಾಯದ ಸಹೋದರಿ ತನ್ನ ಬಾಯಿಫ್ರೆಂಡ್ ಜೊತೆ ಮೊಬೈಲ್ ಫೊನ್‌ನಲ್ಲಿ ನಿರಂತರ ಮಾತನಾಡುತ್ತಿದ್ದಳು. ಇದಕ್ಕೆ ತಮ್ಮ ಅಡ್ಡಿಪಡಿಸಿದ್ದ. ಇದರ ಕೋಪದಿಂದ ಸಹೋದರಿ ಇಯರ್ ಫೊನ್ ಕೇಬಲ್‌ನಿಂದ ಬಾಲಕನ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಳು. ಬಳಿಕ ಮೃತದೇಹವನ್ನು ಮನೆಯ ಸ್ಟೋರ್ ರೂಂನಲ್ಲಿ ಅಡಗಿಸಿ ಇಟ್ಟಿದ್ದಳು.

ಘಟನೆ ನಡೆದಾಗ ಪಾಲಕರು ಮನೆಯಲ್ಲಿ ಇರಲಿಲ್ಲ. ಮಗ ಕಾಣೆಯಾದ ಹಿನ್ನೆಲೆಯಲ್ಲಿ ಪಾಲಕರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರಿಗೂ ಬಾಲಕನ ಬಗ್ಗೆ ಮಾಹಿತಿ ದೊರೆತಿರಲಿಲ್ಲ. ಆದರೆ ಮನೆಯ ಸ್ಟೋರ್ ರೂಂನಲ್ಲಿ ಕೆಟ್ಟ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಪಾಲಕರು ಪರಿಶೀಲನೆ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

ಈ ಘಟನೆ ಗುರುವಾರ ನಡೆದಿದ್ದು ಸೋಮವಾರ ಬೆಳಕಿಗೆ ಬಂದಿದೆ. ಬಾಲಕ ಸಾವಿನ ಬಗ್ಗೆ ಮನೆಯವರ ಮೇಲೆ ಶಂಕೆ ವ್ಯಕ್ತಪಡಿಸಿದ ಪೊಲೀಸರು ಮನೆಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದಾಗ ಸಹೋದರಿ ತಾನು ಕೊಲೆ ಮಾಡಿರುವ ಬಗ್ಗೆ ಬಾಯಿಬಿಟ್ಟಿದ್ದಾಳೆ. ಸಹೋದರಿಯನ್ನು ಬಂಧಿಸಿರುವ ಪೊಲೀಸರು ಬಾಲಾಪರಾಧ ಕೇಂದ್ರಕ್ಕೆ ಕಳುಹಿಸಿದ್ದಾರೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...