Tuesday, February 11, 2025

ನಾಗಮಂಡಲ: ವಿಜ್ಙಾಪನಾಪತ್ರ ಬಿಡುಗಡೆ

ಬಂಟ್ವಾಳ: ಪುದು ಗ್ರಾಮದ ನಾಣ್ಯ ಶ್ರೀ ನಾಗ  ರಕ್ತೇಶ್ವರಿ ಕ್ಷೇತ್ರದಲ್ಲಿ ಮುಂದಿನ ಜನವರಿಯಲ್ಲಿ ನಡೆಯಲಿರುವ ನಾಗ ಮಂಡಲೋತ್ಸವದ ವಿಜ್ಙಾಪನಾ ಪತ್ರದ ಬಿಡುಗಡೆಯ ಸರಳ ಕಾರ್ಯಕ್ರಮ  ಶ್ರೀ ಕ್ಷೇತ್ರದಲ್ಲಿ ನಡೆಯಿತು.  ಸ್ಥಳೀಯ  ಪ್ರಮುಖರಾದ ದೇವಸ್ಯ ಪ್ರಕಾಶ್ ಚಂದ್ರ ರೈ ವಿಜ್ಙಾಪನಾ ಪತ್ರ ಬಿಡುಗಡೆಗೊಳಿಸಿ, ದೇವರ ಅಭಯದಂತೆ  ಲೋಕ ಕಲ್ಯಾಣಾರ್ಥವಾಗಿ ನಡೆಯುವಂತ ಈ ನಾಗಮಂಡಲೋತ್ಸವದ ಯಶಸ್ವಿಯಲ್ಲಿ ಊರಿನ ನಾಗರಿಕ ಬಂಧುಗಳು  ಸಹಕರಿಸುವಂತೆ ವಿನಂತಿಸಿದರು.

ಈ  ಸಂದರ್ಭ  ಪೊಳಲಿ ಸುಬ್ರಮಣ್ಯ ತಂತ್ರಿ ,  ಸುಜೀರ್ ಗುತ್ತು ಐತಪ್ಪ ಆಳ್ವ , ಸುಜೀರ್ ಗುತ್ತು ಚಂದ್ರಶೇಖರ್ ಗಾಂಭೀರ , ಕಂಪ ಸದಾನಂದ ಆಳ್ವ , ಶಶಿರಾಜ್ ಶೆಟ್ಟಿ ಕೊಳಂಬೆ , ಪೂವಪ್ಪ ಬಂಗೇರ ನಾಣ್ಯ , ಪದ್ಮನಾಭ ಶೆಟ್ಟಿ ಪುಂಚಮೆ , ರಾಮಚಂದ್ರ ಮಾರಿಪಳ್ಳ , ನಾಗಪ್ಪ ಶೆಟ್ಟಿ ಮೇರಮಜಲು , ಗಂಗಾಧರ ಕೋಟ್ಯಾನ್ ಅಬ್ಬೆಟ್ಟು , ಚಂದ್ರಶೇಖರ ತೇಜಾ , ಶಂಕರ ಸುವರ್ಣ , ದೇವದಾಸ್ ಭಂಡಾರ ಮನೆ ಕುಂಭ್ಡೇಲು , ಮತ್ತಿತರರಿದ್ದರು , ತಾರಾನಾಥ ಕೊಟ್ಟಾರಿ ಯವರು ಸ್ವಾಗತಿಸಿದರು , ಮನೋಜ್ ಆಚಾರ್ಯ ನಾಣ್ಯ  ವಂದಿಸಿದರು.   ಪದ್ಮನಾಭ ಮಾಸ್ಟರ್ ರವರು ಕಾರ್ಯಕ್ರಮ ನಿರೂಪಿಸಿದರು.

More from the blog

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...

ಸಿಲಿಂಡರ್ ಸ್ಫೋಟ : ಓರ್ವನಿಗೆ ಗಾಯ

ಬಂಟ್ವಾಳ: ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಮನೆಯೊಂದರ ಅಡುಗೆ ಅನಿಲದ ಸಿಲಿಂಡರ್ ನಲ್ಲಿ ಸೋರಿಕೆಯುಂಟಾಗಿ ಬೆಂಕಿ ಕಾಣಿಸಿಕೊಂಡು, ಮನೆಯ ಸೊತ್ತುಗಳು ಸುಟ್ಟು ಭಸ್ಮವಾಗಿ, ಓರ್ವ ಗಾಯಗೊಂಡ ಘಟನೆ ನಡೆದಿದೆ. ಸುಭಾಷ್ ನಗರ ನಿವಾಸಿ...