Wednesday, February 4, 2026

ನಾಗಮಂಡಲ: ವಿಜ್ಙಾಪನಾಪತ್ರ ಬಿಡುಗಡೆ

ಬಂಟ್ವಾಳ: ಪುದು ಗ್ರಾಮದ ನಾಣ್ಯ ಶ್ರೀ ನಾಗ  ರಕ್ತೇಶ್ವರಿ ಕ್ಷೇತ್ರದಲ್ಲಿ ಮುಂದಿನ ಜನವರಿಯಲ್ಲಿ ನಡೆಯಲಿರುವ ನಾಗ ಮಂಡಲೋತ್ಸವದ ವಿಜ್ಙಾಪನಾ ಪತ್ರದ ಬಿಡುಗಡೆಯ ಸರಳ ಕಾರ್ಯಕ್ರಮ  ಶ್ರೀ ಕ್ಷೇತ್ರದಲ್ಲಿ ನಡೆಯಿತು.  ಸ್ಥಳೀಯ  ಪ್ರಮುಖರಾದ ದೇವಸ್ಯ ಪ್ರಕಾಶ್ ಚಂದ್ರ ರೈ ವಿಜ್ಙಾಪನಾ ಪತ್ರ ಬಿಡುಗಡೆಗೊಳಿಸಿ, ದೇವರ ಅಭಯದಂತೆ  ಲೋಕ ಕಲ್ಯಾಣಾರ್ಥವಾಗಿ ನಡೆಯುವಂತ ಈ ನಾಗಮಂಡಲೋತ್ಸವದ ಯಶಸ್ವಿಯಲ್ಲಿ ಊರಿನ ನಾಗರಿಕ ಬಂಧುಗಳು  ಸಹಕರಿಸುವಂತೆ ವಿನಂತಿಸಿದರು.

ಈ  ಸಂದರ್ಭ  ಪೊಳಲಿ ಸುಬ್ರಮಣ್ಯ ತಂತ್ರಿ ,  ಸುಜೀರ್ ಗುತ್ತು ಐತಪ್ಪ ಆಳ್ವ , ಸುಜೀರ್ ಗುತ್ತು ಚಂದ್ರಶೇಖರ್ ಗಾಂಭೀರ , ಕಂಪ ಸದಾನಂದ ಆಳ್ವ , ಶಶಿರಾಜ್ ಶೆಟ್ಟಿ ಕೊಳಂಬೆ , ಪೂವಪ್ಪ ಬಂಗೇರ ನಾಣ್ಯ , ಪದ್ಮನಾಭ ಶೆಟ್ಟಿ ಪುಂಚಮೆ , ರಾಮಚಂದ್ರ ಮಾರಿಪಳ್ಳ , ನಾಗಪ್ಪ ಶೆಟ್ಟಿ ಮೇರಮಜಲು , ಗಂಗಾಧರ ಕೋಟ್ಯಾನ್ ಅಬ್ಬೆಟ್ಟು , ಚಂದ್ರಶೇಖರ ತೇಜಾ , ಶಂಕರ ಸುವರ್ಣ , ದೇವದಾಸ್ ಭಂಡಾರ ಮನೆ ಕುಂಭ್ಡೇಲು , ಮತ್ತಿತರರಿದ್ದರು , ತಾರಾನಾಥ ಕೊಟ್ಟಾರಿ ಯವರು ಸ್ವಾಗತಿಸಿದರು , ಮನೋಜ್ ಆಚಾರ್ಯ ನಾಣ್ಯ  ವಂದಿಸಿದರು.   ಪದ್ಮನಾಭ ಮಾಸ್ಟರ್ ರವರು ಕಾರ್ಯಕ್ರಮ ನಿರೂಪಿಸಿದರು.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...