Wednesday, February 12, 2025

ನಾಗಮಂಡಲೋತ್ಸವ: ಕಾರ್ಯಾಲಯದ ಉದ್ಘಾಟನೆ‌

ಬಂಟ್ವಾಳ: ತಾಲೂಕಿನ ಪುದು ಗ್ರಾಮದ ನಾಣ್ಯ ಶ್ರೀ ನಾಗ ರಕ್ತೇಶ್ವರಿ ಕ್ಷೇತ್ರದಲ್ಲಿ ಮುಂದಿನ ಜನವರಿಯಲ್ಲಿ ನಡೆಯಲಿರುವ ಅಷ್ಟ ಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ರಾ.ಹೆ.75 ರ ಕಡೆಗೋಳಿಯಲ್ಲಿ ಕಾರ್ಯಾಲಯವನ್ನು ತೆರೆಯಲಾಯಿತು.  ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ರಾದ ಜಗನ್ನಾಥ್ ಚೌಟರವರು ನೆರವೇರಿಸಿ,  ನಾಗಮಂಡಲೋತ್ಸವಕ್ಕೆ  ಈಗಾಗಲೇ ದಿನ ನಿಗದಿ ಯಾಗಿದ್ದು ಸಂಚಲನ ಸಮಿತಿ ರಚನೆಯಾಗಿದೆ . ಸಾರ್ವಜನಿಕರಿಗೆ ಅನುಕೂಲ ವಾಗುವಂತೆ  ಕಾರ್ಯಾಲಯವನ್ನು ತೆರೆಯಲಾಗಿದ್ದು , ನಾಗಮಂಡಲದ ಯಶಸ್ಸಿಗೆ ಸಹಕರಿಸುವಂತೆ  ಮನವಿ ಮಾಡಿದರು.   ಈ ಸಂದರ್ಭದಲ್ಲಿ   ಸ್ಥಳೀಯ  ಗಣ್ಯರಾದ ದೇವಸ್ಯ ಪ್ರಕಾಶ್ಚಂದ್ರ ರೈ , ಸದಾನಂದ ಆಳ್ವ ಕಂಪ , ಭಾಸ್ಕರ ಚೌಟ ಕುಂಭ್ಡೇಲು , ಚಂದ್ರಶೇಖರ ಗಾಂಭೀರ ಸುಜೀರ್ ಗುತ್ತು , ಐತಪ್ಪ ಆಳ್ವ ಸುಜೀರ್ ಗುತ್ತು , ಪೂವಪ್ಪ ಕುಲಾಲ್ ನಾಣ್ಯ , ಚಂದ್ರಹಾಸ್ ಶೆಟ್ಟಿ ರಂಗೋಲಿ , ಕೊಡಮಣ್ಣು ಕಾಂತಪ್ಪ ಶೆಟ್ಟಿ , ವಿಠ್ಠಲ್ ಸಾಲ್ಯಾನ್ ಕುಂಭ್ಡೇಲು, ಪ್ರಕಾಶ್ ಕಿದೆ ಬೆಟ್ಟು , ಗಂಗಾಧರ ಕೋಟ್ಯಾನ್ , ರಾಮಚಂದ್ರ ಮಾರಿಪಳ್ಳ , ನಾಗಪ್ಪ ಶೆಟ್ಟಿ  ಮೇರಮಜಲು. ತಾರಾನಾಥ್ ಕೊಟ್ಟಾರಿ , ಮನೋಜ್ ಆಚಾರ್ಯ   ಕಟ್ಟಡದ ಮಾಲಕ  ಮೋಹನ್  ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...