Wednesday, February 12, 2025

ಇರಾ: ನೀರು ಮತ್ತು ನೈರ್ಮಲ್ಯ ಜಾಥಾ, ವಿಶೇಷ ಗ್ರಾಮ ಸಭೆ

ಇರಾ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು ದ.ಕ.ಜಿಲ್ಲಾ ಪಂ.ಮಂಗಳೂರು, ತಾಲೂಕು ಪಂ.ಬಂಟ್ವಾಳ, ಇರಾ ಗ್ರಾಮ ಪಂ, ದ.ಕ.ಜಿಲ್ಲಾ.ಪಂ ಉನ್ನತೀಕರಿಸಿದ ಶಾಲೆ ತಾಳಿತ್ತಬೆಟ್ಟು ಇರಾ ಹಾಗೂ ಸಮುದಾಯ ಸೇವಾ ಸಂಸ್ಥೆಯ ಸಹಯೋಗದೊಂದಿಗೆ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಕಾರ್ಯಕ್ರಮದಡಿ ನೀರು ಮತ್ತು ನೈರ್ಮಲ್ಯ ಕುರುತ ವಿಶೇಷ ಗ್ರಾಮ ಸಭೆಯು ಇಂದು ಇರಾ ಮಳಯಾಲಿ ಬಿಲ್ಲವ ಸಭಾ ಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿದ ಇರಾ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆಯವರು ಜೀವ ಸಂಕುಲದ ಅವಿಭಾಜ್ಯ ಅಂಗವಾಗಿರುವ ನೀರನ್ನು ಸದ್ಬಳಕೆ ಮಾಡುವುದರೊಂದಿಗೆ ಮುಂದಿನ ಜನಾಂಗಕ್ಕಾಗಿ ಸಂರಕ್ಷಿಸುವ ಜಾಗೃತಿ ಪ್ರತಿಯೋರ್ವರಿಂದಲೂ ನಡೆಯಬೇಕಾಗಿದೆ ಎಂದರು.


ನೀರು ಮತ್ತು ನೈರ್ಮಲ್ಯ ಸಂಪನ್ಮೂಲ ಅಧಿಕಾರಿ ತೇಜಸ್ ಮತ್ತು ಕೃಷ್ಣ ಪ್ರೋಡಕ್ಷ್ಸನ್ ಬೆಂಗಳೂರಿನ ದಿವಾಕರ ಬಾಳೆಪುಣಿ ಯವರು ನೀರು ಮತ್ತು ನೈರ್ಮಲ್ಯದ ಬಗ್ಗೆ ಮಾಹಿತಿ ನೀಡಿದರು. ಗ್ರಾ.ಪಂ.ನ ಉಪಾದ್ಯಕ್ಷರಾದ ಚಂದ್ರಾವತಿ ಎ. ಕರ್ಕೇರಾ, ಗ್ರಾ.ಪಂ. ಸದಸ್ಯರಾದ ಮೋಯಿದು ಕುಂಞ, ಗೋಪಾಲ ಅಶ್ವಥ ಡಿ., ದೇವದಾಸ ಅಡಪ,ಪಾರ್ವತಿ ನಾಯಕ್ ಮತ್ತು ಪಂ.ಅಭಿವೃಧ್ದಿ ಅಧಿಕಾರಿ ನಳಿನಿ ಎ.ಕೆ.ಕಾರ್ಯಕ್ರಮದಲ್ಲಿ ಪಾಲ್ಗೋಂಡಿದ್ದರು. ಶಾಲಾ ಮಕ್ಕಳಿಗಾಗಿ ನೀರು ಮತ್ತು ನೈರ್ಮಲ್ಯದ ಬಗ್ಗೆ ಭಾಷಣ ಹಾಗೂ ಪ್ರಬಂಧ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸ್ವಚತಾ ಜಾಥಾದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಶಾಲಾ ಮುಖ್ಯೋಪಾಧ್ಯಾಯಿನಿ ಸುಜಾತ ಟಿ.ಯಸ್ ಸ್ವಾಗತಿಸಿ ಶಿಕ್ಷಕರಾದ ಜಾನ್ ಫೆರ್ನಾಂಡಿಸ್ ಧನ್ಯವಾದ ಸಲ್ಲಿಸಿ ಶಂಕರ್‍ ಕಾರ್ಯಕ್ರಮ ನಿರೂಪಿಸಿದರು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...