Wednesday, January 28, 2026

ಬಂಟ್ವಾಳದಲ್ಲಿ ನಕಲಿ ಮತದಾನಕ್ಕೆ ಯತ್ನಿಸಿ ಮೂವರು ಪೋಲೀಸರ ಅತಿಥಿಯಾಗಿದ್ದಾರೆ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು ಮೂರು ನಕಲಿ ಮತದಾನದ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಮಧ್ಯಾಹ್ನ ದ ವೇಳೆ ಕೈಕಂಬ ಸಮೀಪದ ಪರ್ಲೀಯಾ ಸರಕಾರಿ ಶಾಲೆಯಲ್ಲಿ ನಕಲಿ ಮತದಾನ ಮಾಡಲು ಯತ್ನಿಸುವ ವೇಳೆ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.
ಇವರಿಬ್ಬರೂ ಕೂಡ ಬೇರೊಬ್ಬರ ಹೆಸರನ್ನು ಬಳಕೆ ಮಾಡಿ ಮತದಾನಕ್ಕೆ ಯತ್ನಿಸಿದ್ದರು ಎಂದು ಅಧಿಕಾರಿಗಳು ಪೋಲೀಸರಿಗೆ ತಿಳಿಸಿದ್ದಾರೆ.
ಸಂಜೆ ವೇಳೆ ಗೆ ಕಲ್ಲಡ್ಕ ದ ಗ್ರಾ.ಪಂ.ಕಟ್ಟಡದಲ್ಲಿನ ಮತಗಟ್ಟೆಯ ನೆಟ್ಲ ಬೂತ್ ನಲ್ಲಿ ಇದೇ ರೀತಿ ನಕಲಿ ಮತದಾನ ಮಾಡಲು ಯತ್ನಿಸಿ ಅತ ಕೂಡ ಚುನಾವಣೆ ಕರ್ತವ್ಯ ಅಧಿಕಾರಿಗಳ ಮೂಲಕ ಪೋಲೀಸರ ಅತಿಥಿಯಾಗಿ ದ್ದಾನೆ.
ಬಂಟ್ವಾಳ ನಗರ ಠಾಣಾ ಎಸ್‌.ಐ.ಚಂದ್ರಶೇಖರ್ ಅವರು ಮೂವರನ್ನು ನಗರ ಠಾಣೆ ಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸುತ್ತಿದ್ದಾರೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...