Friday, June 27, 2025

ರಾಜ್ಯದ ಚುಕ್ಕಾಣಿ ಹಿಡಿದ ದ.ಕ.ಜಿಲ್ಲೆಯ ಸಂಸದ ನಳಿನ್ : ಅಭಿನಂದನೆ ಸಲ್ಲಿಸಿದ ಶಾಸಕ‌ ರಾಜೇಶ್ ನಾಯ್ಕ್

ಬಂಟ್ವಾಳ: ಬಿಜೆಪಿಯ ರಾಜ್ಯದ ಚುಕ್ಕಾಣಿ ಹಿಡಿದ ದ.ಕ.ಸಂಸದ ನಳಿನ್ ಕುಮಾರ್ ಕಟೀಲು.
ಬಿಜೆಪಿ ರಾಜ್ಯಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಅವರು ಆಯ್ಕೆಯಾಗಿದ್ದಾರೆ ಎಂದು ಪಕ್ಷ ಘೋಷಣೆ ಮಾಡಿದೆ.


ಮುಂದಿನ ಮೂರು ವರ್ಷಗಳ ಅವಧಿಗೆ ರಾಜ್ಯಧ್ಯಕ್ಷರಾಗಿ ನಳಿನ್ ಅವರ ನೇಮಕವಾಗಿದ್ದು ಜಿಲ್ಲೆಯ ಜನತೆಗೆ ಖುಷಿಯ ವಿಚಾರ.
ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಯಾಗಿ ಉಡುಪಿ ಮೂಲದ ಸಂತೋಷ್ ಜಿ.ಯವರು ನೇಮಕವಾದ ಬೆನ್ನಲ್ಲೇ ರಾಜ್ಯದ ಪ್ರಮುಖ ಹುದ್ದೆ ಯಾದ ರಾಜ್ಯಧ್ಯಕ್ಷ ಹುದ್ದೆ ಜಿಲ್ಲೆಗೆ ದೊರಕಿರುವುದು ಜಿಲ್ಲೆಯ ಜನತೆಗೆ ಸಂತೋಷ ದಾಯಕವಾದ ವಿಚಾರ.
ಸತತವಾಗಿ ಮೂರು ಬಾರಿ ಸಂಸದರಾಗಿ ಜಿಲ್ಲೆಯ ಅಭಿವೃದ್ಧಿ ಯ ರೂವಾರಿಯಾಗಿ ಪಕ್ಷದ ಸಂಘಟನೆ ಪ್ರಮುಖವಾದ ಪಾತ್ರವಹಿಸಿ ಹೈಕಮಾಂಡ್ ನ ಬಳಗದಲ್ಲಿ ಗುರುತಿಸಿ ಕೊಂಡಿದ್ದ ನಳಿನ್ ಅವರು ರಾಜ್ಯಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಇವರ ಅವಧಿಯಲ್ಲಿ ಪಕ್ಷ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಲಯುತವಾಗಿ ಸಂಘಟಿತ ವಾಗಲಿ ಎಂದು ಜಿಲ್ಲೆಯ ಜನರ ಪರವಾಗಿ ಬಂಟ್ವಾಳ ಶಾಸಕ‌ ರಾಜೇಶ್ ನಾಯ್ಕ್ ರಾಜ್ಯಧ್ಯಕ್ಷರಾಗಿ ಆಯ್ಕೆಯಾದ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಸುಳ್ಯ ತಾಲೂಕಿನ ಪೆರುವಾಜೆಯ ಮುಕ್ಕೂರು ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪುತ್ತೂರಿನ ಸೈಂಟ್‌ ಫಿಲೋಮಿನಾ ಹೈಸ್ಕೂಲ್‌ ನಲ್ಲಿ ಪ್ರೌಢ ಶಿಕ್ಷಣ ಪಡೆದ ನಳಿನ್‌ ಆ ಕಾಲದಲ್ಲಿಯೇ ರಾಷ್ಟ್ರೀಯ ಸ್ವಯಂಸೇವಕ ಸಂಘದತ್ತ ಆಕರ್ಷಿತರಾಗಿ ತಮ್ಮ 18ನೇ ವಯಸ್ಸಿನಲ್ಲೇ ಸಂಘದ ಪೂರ್ಣಾವಧಿ ಕಾರ್ಯಕರ್ತರಾಗಿದ್ದರು. ಹೀಗೆ 12 ವರ್ಷಗಳ ಕಾಲ ಆರ್‌.ಎಸ್‌.ಎಸ್‌. ಪ್ರಚಾರಕರಾಗಿ ಕಾರ್ಯನಿರ್ವಹಿಸಿದ್ದರು.
2004ರಲ್ಲಿ ಜಿಲ್ಲಾ ಬಿಜೆಪಿಯ ಸಂಘಟನ ಕಾರ್ಯದರ್ಶಿಯಾಗಿ ಆಯ್ಕೆಯಾದ ನಳಿನ್ ಕುಮಾರ್ ಅವರು 2009ರ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮೊದಲ ಬಾರಿಗೆ ಸಂಸತ್ತು ಪ್ರವೇಶಿಸಿದ್ದರು. 2014ರಲ್ಲಿ ಪುನರಾಯ್ಕೆಯಾದರು. ಮತ್ತೆ 2019ರಲ್ಲಿ ಮೂರನೇ ಬಾರಿಗೆ ಸತತವಾಗಿ ಹ್ಯಾಟ್ರಿಕ್ ಹೊಡೆದಿದ್ದಾರೆ

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...