Friday, July 11, 2025

ಮೂರನೇ ವರ್ಷಕ್ಕೆ ಹೆಜ್ಜೆ ಇಡುತ್ತಿದೆ ನಮ್ಮಬಂಟ್ವಾಳ ಡಾಟ್ ಕಾಮ್

ಆತ್ಮೀಯ ಓದುಗರೇ..
ದೀಪಾವಳಿಯ ಶುಭಾಶಯಗಳು… ಹೊಸ ಕನಸು, ಸಮಾಜಮುಖಿ ಆಶಯಗಳೊಂದಿಗೆ ಎರಡು ವರ್ಷದ ಹಿಂದೆ ದೀಪಾವಳಿಯ ಬೆಳಕಿನಲ್ಲಿಯೇ ಆರಂಭಗೊಂಡ “ನಮ್ಮ ಬಂಟ್ವಾಳ ಡಾಟ್ ಕಾಮ್” ಈ ದೀಪಾವಳಿಯ ಹೊಸ್ತಿಲಿನಲ್ಲಿ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ ಮೂರನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ.
ಒಬ್ಬರು, ಇಬ್ಬರು, ಹತ್ತು, ನೂರು ಎಂದು ಬೆಳೆಯುತ್ತಾ ಹೋದ ನಮ್ಮ ಬಂಟ್ವಾಳ ವೆಬ್ ನ್ಯೂಸ್ ಓದುಗರ ಸಂಖ್ಯೆ ಈಗ 13 ಲಕ್ಷವನ್ನೂ ದಾಟಿ ಬೆಳೆಯುತ್ತಿರುವುದು ಅಭಿಮಾನದ ಸಂಗತಿ.

ಬಂಟ್ವಾಳ ತಾಲೂಕು ಸಹಿತ, ಜಿಲ್ಲೆಯಾದ್ಯಂತ ನಡೆಯುವ ವಿವಿಧ ಕ್ಷಣ ಕ್ಷಣ ದ ಸುದ್ದಿಯನ್ನು ಓದುಗರಿಗೆ ಕ್ಷಿಪ್ರವಾಗಿ ತಲುಪಿಸುವ ಮೂಲಕ ನಮ್ಮ ಬಂಟ್ವಾಳ ತನ್ನ ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳುತ್ತಿದೆ.
ಅನೇಕ ಪ್ರತಿಭೆಗಳ ಅನ್ವೇಷಣೆ ಹಾಗೂ ಸಮಾಜ ಸೇವಕರನ್ನು ಗುರುತಿಸಿ ಪರಿಚಯಿಸುವ ಕಾರ್ಯವನ್ನೂ ನಮ್ಮ ಬಂಟ್ವಾಳ ಮಾಡಿದೆ, ಜೊತೆಗೆ ಸಾಮಾಜಿಕ ಸಮಸ್ಯೆಗಳನ್ನು ಆಡಳಿತ ವ್ಯವಸ್ಥೆಯ ಮುಂದಿಟ್ಟು ಪರಿಹಾರ ಕಂಡುಕೊಳ್ಳುವ ಕಾಳಜಿಯ ಸುದ್ದಿ ಮಾತ್ರವಲ್ಲದೆ, ಬಂಟ್ವಾಳ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ “ನಮ್ಮ ಬಂಟ್ವಾಳ ಡಾಟ್ ಕಾಮ್” ಮುನ್ನಡೆಯುತ್ತಿದೆ.
ಎರಡು ವರ್ಷದ ಪಯಣದಲ್ಲಿ “ನಮ್ಮ ಬಂಟ್ವಾಳ ಡಾಟ್ ಕಾಮ್” ನ ಯಶಸ್ಸಿನಲ್ಲಿ ಹಲವರ ಶ್ರಮವಿದೆ, ನಮ್ಮ ಬಂಟ್ವಾಳದ ಎಲ್ಲಾ ಓದುಗರಿಗೆ, ಜಾಹೀರಾತುದಾರರಿಗೆ, ವಿವಿಧ ಮಾಧ್ಯಮಗಳ ಸ್ನೇಹಿತರಿಗೆ, ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಹಾಗೂ ಪ್ರತ್ಯಕ್ಷ ಹಾಗೂ ಪರೋಕ್ಷ ಸಹಕಾರ ನೀಡಿದ ಸರ್ವರನ್ನೂ ಈ ಸಂದರ್ಭದಲ್ಲಿ ಮನಪೂರ್ವಕವಾಗಿ ಸ್ಮರಿಸುತ್ತಾ, ಕೃತಜ್ಞತೆ ಸಲ್ಲಿಸುತ್ತಿದ್ದೇವೆ.
ನಿಮ್ಮ ಸಲಹೆ-ಸಹಕಾರ ಮುಂದೆಯೂ ನಮ್ಮ ಜೊತೆಗಿರಲಿ..

-ಪ್ರಶಾಂತ್ ಪೂಂಜಾಲಕಟ್ಟೆ

More from the blog

ರಾಷ್ಟ್ರ, ಧರ್ಮಕಾರ್ಯದಲ್ಲಿ ನಮ್ಮನ್ನು ನಾವು ಸಮರ್ಪಿಸಿಕೊಳ್ಳುವುದೇ ನಿಜವಾದ ಗುರುದಕ್ಷಿಣೆ – ಮಂಜುಳಾ ಗೌಡ

ಬಂಟ್ವಾಳ : ಪ್ರಸ್ತುತ ಹಿಂದೂ ಧರ್ಮದ ಮೇಲಿನ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಹಿಂದೂಗಳ ಸಂಘಟನೆ ಆವಶ್ಯಕತೆಯಿದೆ. ಆದರೆ ‘ಸಾಧನೆ ಮತ್ತು ಧರ್ಮ' ಇದು ಸಂಘಟನೆಯ ಅಡಿಪಾಯವಾಗಿದ್ದರೆ ಮಾತ್ರ ರಾಷ್ಟ್ರ-ಧರ್ಮ ಕಾರ್ಯದ ಕಟ್ಟಡ ಭದ್ರವಾಗಿರಲು ಸಾಧ್ಯ....

ಬಂಟ್ವಾಳ ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ಉಮೇಶ್ ಗೌಡ ಮಾಡತ್ತೇಲು ಆಯ್ಕೆ

ಬಂಟ್ವಾಳ : ತುಳುನಾಡಿನ ಅಸ್ಮಿತೆಯ ಚಳುವಳಿಯಾಗಿ ಗುರುತಿಸಲ್ಪಟ್ಟ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ನಿರ್ಣಾಯಕ ಸಮಯದಲ್ಲಿ, ಬಂಟ್ವಾಳ ತಾಲೂಕು ಘಟಕದ ಸಂಚಾಲಕರಾಗಿ ಸಮಾಜ ಶಾಸ್ತ್ರದಲ್ಲಿ...

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ..

ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ...

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಭೆ.. 

ಬಂಟ್ವಾಳ : ಜೀವನದಲ್ಲಿ ತಾಯಿಯ ಪಾತ್ರ ಬಹಳ ದೊಡ್ಡದು. ಮಗುವಿನ ನೋವು ನಲಿವಿನಲ್ಲಿ ಮಾತ್ರವಲ್ಲದೆ ಸಂಸ್ಕಾರಯುತ ಶಿಕ್ಷಣ ಹೊಂದುವಲ್ಲೂ ತಾಯಿ ಮಗುವಿನ ಪ್ರತಿ ಹಂತದಲ್ಲೂ ಜೊತೆಯಾಗಿರಬೇಕು, ಸಂಸ್ಕಾರಯುತ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುವಲ್ಲಿ ತಾಯಿಯೇ...