Thursday, February 13, 2025

ಎ.1ರಿಂದ ನಂದನ ಹಿತ್ತಿಲು ಶ್ರೀ ವೈದ್ಯನಾಥ ಅರಸು ಜುಮಾದಿ ಬಂಟ ದೈವಸ್ಥಾನದ ಕಾಲವಾಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಬಂಟ್ವಾಳ ಪೇಟೆಯ ನಂದನ ಹಿತ್ತಿಲು ಶ್ರೀ ವೈದ್ಯನಾಥ ಅರಸು ಜುಮಾದಿ ಬಂಟ ದೈವಸ್ಥಾನದ ಕಾಲವಾಧಿ ನೇಮೋತ್ಸವ ಎ.1 ರಿಂದ ಆರಂಭಗೊಂಡು ಎ. 3ರವರೆಗೆ ನಡೆಯಲಿದೆ.

ಇದರ ಪೂರ್ವಭಾವಿಯಾಗಿ ಮಾ. 24ರಂದು ಭಾನುವಾರ ಬೆಳಿಗ್ಗೆ ಗಂಟೆ 9ಕ್ಕೆ ಕೋಳಿಗುಂಟ ನಡೆಯಲಿರುವುದು. ಹಾಗೂ ಮಾ. 31ರಂದು ಭಾನುವಾರ ಬೆಳಿಗ್ಗೆ ಗಂಟೆ 8.30ಕ್ಕೆ ನೂತನ ಧ್ವಜಸ್ತಂಭಕ್ಕೆ ಕಲಶಾಭಿಷೇಕ ನಡೆಯಲಿದೆ.

ಎ. 1ರಂದು ಸೋಮವಾರ ಬೆಳಿಗ್ಗೆ ಗಂಟೆ 10ಕ್ಕೆ ಗಣಹೋಮ, ನಾಗತಂಬಿಲ, ನವಕ ಕಲಶಾಭಿಷೇಕ, ಮಧ್ಯಾಹ್ನ ಗಂಟೆ 1ಕ್ಕೆ ಅನ್ನಸಂತರ್ಪಣೆ ನಡೆಯಲಿರುವುದು. ರಾತ್ರಿ ಗಂಟೆ 10ಕ್ಕೆ ಶ್ರೀ ಅರಸು ದೈವದ ನೇಮೋತ್ಸವ, ಎ.2ರಂದು ಮಂಗಳವಾರ ರಾತ್ರಿ ಗಂಟೆ 9ಕ್ಕೆ ಶ್ರೀ ಜುಮಾದಿ ಬಂಟ ದೈವಗಳ ನೇಮೋತ್ಸವ, ಎ. 3ರಂದು ಬುಧವಾರ ರಾತ್ರಿ ಗಂಟೆ 10ಕ್ಕೆ ಶ್ರೀ ವೈದ್ಯನಾಥ ದೈವದ ನೇಮೋತ್ಸವ ಹಾಗೂ ಕಂಚಿಲ ಸೇವೆ ನಡೆಯಲಿದೆ ಎಂದು ದೈವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...