ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಪ್ರವಾಸಿ ತಾಣವಾದ ನಂದಿ ಗಿರಿಧಾಮಕ್ಕೆ ಮೇ 10 ರಂದು ಸಾರ್ವಜನಿಕ ಪ್ರವೇಶಕ್ಕೆ ನಿಷೇಧವನ್ನು ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎನ್.ಎಂ.ನಾಗರಾಜ್ ಅವರು ಆದೇಶವನ್ನು ಹೊರಡಿಸಿದ್ದಾರೆ.


ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ಮತದಾನ ಪ್ರಕ್ರಿಯೆಯಲ್ಲಿ ಮತದಾರರೆಲ್ಲರೂ ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕೆಂಬ ಚುನಾವಣಾ ಆಯೋಗದ ನಿರ್ದೇಶನ ಮತ್ತು ಸಾರ್ವಜನಿಕರ ಹಿತದೃಷ್ಠಿಯಿಂದ ದಂಡ ಸಂಹಿತೆ ಪ್ರಕ್ರಿಯೆ ಸಂಹಿತೆ (ಸಿ.ಆರ್.ಪಿ.ಸಿ) 1973 ಕಲಂ 144 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಚಿಕ್ಕಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಪ್ರವಾಸಿ ತಾಣವಾದ ನಂದಿ ಗಿರಿಧಾಮಕ್ಕೆ ಮೇ 10 ರಂದು ಬೆಳಿಗ್ಗೆ 5:00 ಗಂಟೆಯಿಂದ ರಾತ್ರಿ 08:00 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧವನ್ನು ವಿಧಿಸಿ ಆದೇಶವನ್ನು ಹೊರಡಿಸಿದ್ದಾರೆ.












