Thursday, January 29, 2026

ಮಂತ್ರಾಲಯಕ್ಕೆ ಹೋಗುವುದಾಗಿ ಚೀಟಿ ಬರೆದಿಟ್ಟ ವ್ಯಕ್ತಿ ನಾಪತ್ತೆ

ಬಂಟ್ವಾಳ: ಮಂತ್ರಾಲಯ ಕ್ಕೆ ಹೋಗುವುದಾಗಿ ಚೀಟಿ ಬರೆದಿಟ್ಟು ಮನೆಯಿಂದ ಹೋದವರು ಮರಳಿ ಬಾರದೆ ವ್ಯಕ್ತಿಯೊಬ್ಬರು ಕಾಣೆಯಾಗಿದ್ದಾರೆ .

ಕುರಿಯಾಳ ನಿವಾಸಿ ವಿಠಲ ಬಂಗೇರ (62) ನಾಪತ್ತೆಯಾದವರು.

ಅವರು ಫೆ.22 ರಂದು ಮಧ್ಯಾಹ್ನ ತನ್ನ ಪತ್ನಿಯ ಬಳಿ ಬಿಸಿರೋಡಿಗೆ ಆರ್.ಟಿ.ಸಿ. ತರುವುದಕ್ಕೆ ಹೋಗಿ ಬರುವುದಾಗಿ ತಿಳಿಸಿ ತೆರಳಿದ್ದರು.

ಆದರೆ ಸಂಜೆ ವರೆಗೂ ಮರಳಿ ಬಾರದೆ ಇರುವುದನ್ನು ಕಂಡು ಪತ್ನಿ ಅವರ ಅಂಗಡಿಗೆ ತೆರಳಿ ಡ್ರಾವರ್ ನೋಡಿದಾಗ ಚೀಟಿಯೊಂದು ಪತ್ತೆಯಾಗಿದ್ದು, ನಾನು ಮಂತ್ರಾಲಯ ಕ್ಕೆ ಹೋಗುತ್ತಿದ್ದೇನೆ, ಬರುತ್ತೇನೆಯೇ , ಬರುವುದಿಲ್ಲವೋ ಗೊತ್ತಿಲ್ಲ, ಮಂದಿರದಲ್ಲಿ ಮಗುವಿನ 19 ಸಾವಿರ ಹಣಕೊಡಿ, ಅಂಗಡಿ ವ್ಯಾಪಾರ ಬೇಡ ಎಂದು ಬರೆದಿದ್ದಾರೆ.

ಈ ಕುರಿತು ಅವರನ್ನು ಕರೆದುಕೊಂಡು ಹೋದ ರಿಕ್ಷಾ ಚಾಲಕ ದಿವಾಕರನನ್ನು ವಿಚಾರಿಸಿ ದಾಗ ತಾನು ಬಿಸಿರೋಡು ತಾಲೂಕು ಕಚೇರಿವರೆಗೆ ಬಿಟ್ಟು ಬಂದಿದ್ದು ತನ್ನನ್ನು ಹಿಂದೆ ಕಳುಹಿಸಿದ್ದರು ಎಂದು ತಿಳಿಸಿದ್ದರು. ಬಳಿಕ ಮಂಗಳೂರು , ಸಂಬಂಧಿಕರ ಮನೆಯಲ್ಲಿ ಹುಡುಕಾಡಿದರೂ ವಿಠಲ ಅವರು ಪತ್ತೆಯಾಗಿಲ್ಲ ಎಂದು ಅವರ ಪುತ್ರಿ ಸ್ವಾತಿ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಲ್ಲಿ ದೂರು ದಾಖಲಾಗಿದೆ.

More from the blog

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...

ಕೊಳ್ನಾಡು: ಕಾಲುಜಾರಿ ಬಾವಿಗೆ ಬಿದ್ದು ಕೃಷಿಕ ಸಾವು

ವಿಟ್ಲ: ದಾರಿ ಬದಿಯ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಕೃಷಿಕ ಕೊಳ್ನಾಡು ಗ್ರಾಮದ ಸಾಲೆತ್ತೂರು ಕೋಡಿ ನಿವಾಸಿ ಕೃಷ್ಣಪ್ಪ ಪೂಜಾರಿ(70) ಮೃತ ಪಟ್ಟಿದ್ದಾರೆ. ಮಂಗಳವಾರ ಸಂಜೆ ಎಂದಿನಂತೆ ಸಾಲೆತ್ತೂರು ಪೇಟೆಗೆ ಹೋಗಿ ಹಿಂತಿರುಗಿ ಬರುವಾಗ...

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...