Tuesday, February 11, 2025

ನರಹರಿ ಪರ್ವತದಲ್ಲಿ ಪ್ರಕೃತಿ ಸೌಂದರ್ಯದಿಂದ ಮೂಕ ವಿಸ್ಮಯರಾದ ಐ.ಜಿ.ಪಿ.

ಬಂಟ್ವಾಳ: ಅತೀ ಪುರಾತನವೂ ಪ್ರಸಿದ್ಧವೂ ಆಕರ್ಷಣೀಯವು ಆದ ಶಿವಕ್ಷೇತ್ರ ಪಾಣೆಮಂಗಳೂರು ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನಕ್ಕೆ ಮಂಗಳೂರು ಪಶ್ಚಿಮ ವಲಯ ಐ.ಜಿ.ಪಿ. ಜೆ. ಅರುಣ್ ಚಕ್ರವರ್ತಿ ಅವರು ಭೇಟಿ ನೀಡಿ ಇಲ್ಲಿಯ ಅದ್ಭುತ ಪ್ರಕೃತಿಯ ಸೌಂದರ್ಯವನ್ನು ವೀಕ್ಷಿಸಿ ಅನಿರ್ವಚನೀಯ ಆನಂದವನ್ನು ಅನುಭವಿಸಿದರು.
ಪರ್ವತದ ತುದಿಯಲ್ಲಿ ಸದಾಶಿವನ ಸಾನಿಧ್ಯದಲ್ಲಿ ಸದಾ ನೀರು ಇರುವ ಶಂಖ, ಚಕ್ರ, ಗದಾ ಮತ್ತು ಪದ್ಮದ ಆಕಾರದ ಪ್ರಾಕೃತಿಕ ತೀರ್ಥ ಕೂಪಗಳನ್ನು ನೋಡಿ ಮೂಕವಿಸ್ಮಯರಾದರು. ನಿತ್ಯ ಹರಿಧ್ವರ್ಣದ ಸಸ್ಯ ಶಾಮಾಲೆಯ ಸೆರಗಿನಲ್ಲಿರುವ ಇಲ್ಲಿಯ ಪ್ರಶಾಂತತೆಯಿಂದ ಭಾವುಕರಾದರು.
ಆಡಳಿತ ಮೋಕ್ತೆಸರ ಡಾ. ಪ್ರಶಾಂತ ಮಾರ್ಲರು ನರಹರಿ ಪರ್ವತ ಸದಾಶಿವ ದೇವಸ್ಥಾನ ಸುಮಾರು 8 ಕೋಟಿ ವೆಚ್ಚ ದಲ್ಲಿ ಪುನರ್ ನಿರ್ಮಾಣ ಕಾರ್ಯದ ಬಗ್ಗೆ ಮಾಹಿತಿ ನೀಡಿದರು.


ಜೀರ್ಣೊದ್ಧಾರ ಸಮಿತಿ ಅಧ್ಯಕ್ಷ ಡಾ. ಆತ್ಮರಂಜನ್ ರೈ ಅವರು ಐ.ಜಿ.ಪಿ ಅವರನ್ನು ಸ್ವಾಗತಿಸಿ, ಗೌರವಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಪರಮೇಶ್ವರ ಮಯ್ಯ ಅವರು ಶಿವನಿಗೆ ವಿಶೇಷ ಪೂಜೆ ಮಾಡಿ, ಪ್ರಸಾದವನ್ನು ಐ.ಜಿ.ಪಿ ಅವರಿಗೆ ನೀಡಿದರು. ತಾವು ಕುಟುಂಬ ಸಮೇತರಾಗಿ ಮತ್ತೊಮ್ಮೆ ನರಹರಿ ಪರ್ವತಕ್ಕೆ ಆಗಮಿಸುವುದಾಗಿ ಐ.ಜಿ.ಪಿ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮೋಕ್ತೆಸರುಗಳಾದ ಸುಂದರ ಬಂಗೇರ, ಪ್ರತಿಭಾ.ಎ.ರೈ, ಮಾಧವ ಶೆಣೈ, ಎಂ.ಎನ್.ಕುಮಾರ್, ಜೀರ್ಣೊದ್ಧಾರ ಸಂಘಟನಾ ಕಾರ್ಯದರ್ಶಿ ಶಂಕರ ಆಚಾರ್ಯ, ಮ್ಯಾನೇಜರ್ ಆನಂದ್, ಶಿವನಂದಾ ಬೊಂಡಾಲ್, ದಿನೇಶ್, ಮೋಹನ್ ಮುಂತಾದವರು ಉಪಸ್ಥಿತರಿದ್ದರು.

More from the blog

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...

ಸಿಲಿಂಡರ್ ಸ್ಫೋಟ : ಓರ್ವನಿಗೆ ಗಾಯ

ಬಂಟ್ವಾಳ: ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಮನೆಯೊಂದರ ಅಡುಗೆ ಅನಿಲದ ಸಿಲಿಂಡರ್ ನಲ್ಲಿ ಸೋರಿಕೆಯುಂಟಾಗಿ ಬೆಂಕಿ ಕಾಣಿಸಿಕೊಂಡು, ಮನೆಯ ಸೊತ್ತುಗಳು ಸುಟ್ಟು ಭಸ್ಮವಾಗಿ, ಓರ್ವ ಗಾಯಗೊಂಡ ಘಟನೆ ನಡೆದಿದೆ. ಸುಭಾಷ್ ನಗರ ನಿವಾಸಿ...

ಬ್ಲಡ್ ಕ್ಯಾನ್ಸರ್ ಗೆ ಪೋಲಿಸ್ ಸಿಬ್ಬಂದಿ ಬಲಿ

ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೋಲೀಸ್ ಸಿಬ್ಬಂದಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ. ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್ ( 26) ಮೃತಪಟ್ಟ ಪೋಲೀಸ್ ಸಿಬ್ಬಂದಿಯಾಗಿದ್ದಾನೆ. ಅವಿವಾಹಿತನಾಗಿದ್ದ ಅಭಿಷೇಕ್...