Tuesday, February 18, 2025

ನರಿಕೊಂಬು ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

ನರಿಕೊಂಬು ಗ್ರಾಮ ಪಂಚಾಯತಿನ ನರಿಕೊಂಬು ಹಾಗೂ ಶಂಬೂರು ಗ್ರಾಮದ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ದ ಕ ಜಿಪಂ ಹಿ ಪ್ರಾ ಶಾಲೆ ನರಿಕೊಂಬು ಇಲ್ಲಿ ಗ್ರಾ ಪಂ ಅಧ್ಯಕ್ಷರಾದ ಸಂತೋಷ ಕುಮಾರ್ ರವರ ಅಧ್ಯಕ್ಷ ತೆಯಲ್ಲಿ ನಡಯತು.

ಗ್ರಾಮ ಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಜಿ ಕೆ ನಾಯಕ್ ಭಾಗವಹಿಸಿದ್ದರು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಫನತ್ಯಾಜ್ಯ ಫಟಕ ನಿರ್ಮಾಣ ವಾಗದ ಬಗ್ಗೆ ಹಾಗು ಫನತ್ಯಾಜ್ಯ ವಿಲೇವಾರಿ ಸೂಕ್ತ ರೀತಿಯಲ್ಲಿ ಆಗದಿರುವ ಬಗ್ಗೆ ಗ್ರಾಮಸ್ಥರು ಮಾಹಿತಿ ನೀಡುವಂತೆ ಗ್ರಾಮಸ್ಥರು ಪ್ರಶ್ನಿಸಿದರು.

ಇದರ ಬಗ್ಗೆ ಪಂಚಾಯತ್ ಅಧ್ಯಕ್ಷರು ಉತ್ತರಿಸುತ್ತಾ ಈಗಾಗಲೇ ಸ್ದಳ ಗುರುತಿಸಿ ಫನತ್ಯಾಜ್ಯ ವಿಲೇವಾರಿಗಾಗಿ ಜಾಗ ಕಾಯ್ದಿರಿಸಲಾಗಿದೆ ಆದರೆ ಅಲ್ಲಿನ ಕೆಲವು ನಾಗರಿಕರ ವಿರೋಧ ಇರುವುದರಿಂದ ಕಾಮಗಾರಿ ಮಾಡಲು ಸಾಧ್ಯ ವಾಗುತ್ತಿಲ್ಲ ಎಂದು ತಿಳಿಸಿ ಮುಂದಿನ ದಿನಗಳಲ್ಲಿ ಫಟಕ ನಿರ್ಮಾಣ ಮಾಡಿ ನಿಮ್ಮ ಸಮಸ್ಯೆಯನ್ನು ಬಗೆಹರಿಸುವ ಬರವಸೆಯನ್ನು ನೀಡಿದರು

ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು ಪಂಚಾಯತ್ ಉಪಾಧ್ಯಕ್ಷೆ ಮೋಹಿನಿ ,ಗ್ರಾ ಪಂ ಸದಸ್ಯರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗರಿಕರು, ಅರೋಗ್ಯ ಸುರಕ್ಷಾಣಾಧಿಕಾರಿಗಳು ,ಗ್ರಾಮ ಸಮುದಾಯ ಅರೋಗ್ಯ ಅಧಿಕಾರಿ,ಆಶಾ ಕಾರ್ಯಕರ್ತರು, ಅಂಗನವಾಡಿ ಶಿಕ್ಷಕಿಯರು,ಸ್ನೇಹ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಗ್ರಾ ಪಂ ಸಿಬ್ಬಂದಿ ಗಳು ಹಾಜರಿದ್ದರು .ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಹರೀಶ್ ಕೆ ಎ ಸ್ವಾಗತಿಸಿ ವಂದಿಸಿದರು.

More from the blog

ಜಕ್ರಿಬೆಟ್ಟು ಕಿಂಡಿ ಅಣೆಕಟ್ಟಿನ 7 ಗೇಟ್ ತೆರವು,ಶಾಸಕ ರಾಜೇಶ್ ನಾಯ್ಕ್ ಸೂಚನೆ: ಅಡಿಕೆ ತೋಟದ ನೀರು ಇಳಿಕೆ

ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಾಣಗೊಂಡ ಕಿಂಡಿ ಅಣೆಕಟ್ಟುವಿನಲ್ಲಿ ನೀರು ಸಂಗ್ರಹಣೆಗಾಗಿ ಗೇಟ್ ಅಳವಡಿಸಿದ ಪರಿಣಾಮವಾಗಿ, ಸ್ಥಳೀಯ ಕೃಷಿಕರ ತೋಟಗಳಿಗೆ ನೀರು ನುಗ್ಗಿದ ಘಟನೆಗೆ ಸಂಬಂಧಿಸಿದಂತೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು...

ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ ನ ನೂತನ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ಇದರ 2025ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಯಶವಂತ್ ಸಾಲಿಯಾನ್ ಪತ್ತುಕೊಡಂಗೆ, ಆಯ್ಕೆಯಾದರು. ಉಳಿದಂತೆ ಉಪಾಧ್ಯಕ್ಷರುಗಳಾಗಿ...

ಮಕ್ಕಳ ಕಲಾ ಲೋಕದ ಅಧ್ಯಕ್ಷರಾಗಿ ರಮೇಶ ಎಂ ಬಾಯಾರು ಪುನರಾಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಬಂಟ್ವಾಳ ತಾಲೂಕು ಮಕ್ಕಳ ಕಲಾ ಲೋಕದ 2025-26ನೇ ಸಾಲಿನ ಅಧ್ಯಕ್ಷರಾಗಿ ಬರಹಗಾರ ರಮೇಶ ಎಂ. ಬಾಯಾರು ಪುನರಾಯ್ಕೆಯಾಗಿರುತ್ತಾರೆ. ಉಪಾಧ್ಯಕ್ಷರಾಗಿ ನಿವೃತ್ತ ಮುಖ್ಯೋಪಾಧ್ಯಾಯ ಎಂ.ಕೆ ನಾಯ್ಕ್‌ ಅಡ್ಯನಡ್ಕ,...

ಬಲ್ಲು ಕೊರಗ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯ ಹಾಗೂ ಜೇನು‌ಕುರುಬರ ಸಮಗ್ರ ಅಭಿವೃದ್ಧಿಗೆ ಪ್ರಧಾನಮಂತ್ರಿ ಜನ್ ಮನ್ ಯೋಜನೆಯ ಮೂಲಕ 20 ಕೋಟಿ ರೂ ಮಂಜೂರಾಗಿದೆ, ಸಮಾಜದ ಎಲ್ಲಾ ವರ್ಗದವರನ್ನು ಮುಖ್ಯವಾಹಿನಿಗೆ ತರುವುದು...