Thursday, February 13, 2025

ಬೆಂಕಿ ತಗುಲಿದ ಮಹಿಳೆ ಆಸ್ಪತ್ರೆ ಯಲ್ಲಿ ಸಾವು

ಬಂಟ್ವಾಳ: ಆಕಸ್ಮಿಕವಾಗಿ ಬೆಂಕಿ ತಗುಲಿ ಗಾಯಗೊಂಡು ಆಸ್ಪತ್ರೆ ಗೆ ದಾಖಲಾಗಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆ ಯಲ್ಲಿ ಮೃತಪಟ್ಟಿದ್ದಾರೆ.
ನರಿಕೊಂಬು ಗ್ರಾಮದ ಕಲ್ಲಗ ದರ್ಖಾಸು ನಿವಾಸಿ ದಿ.ವೆಂಕಪ್ಪ ಪೂಜಾರಿ ಅವರ ಪತ್ನಿ ಸುಂದರಿ (62) ಮೃತಪಟ್ಟವರು.
ಮೇ.24 ರಂದು ಅಪರಾಹ್ನ ಮೂರು ಗಂಟೆಯ ವೇಳೆ ಅವರ ಮನೆಯ ಹೊರಭಾಗದಲ್ಲಿ ರುವ ಅಡುಗೆ ಶೆಡ್ಡಿನಲ್ಲಿರುವ ಕಟ್ಟಿಗೆ ಒಲೆಯಲ್ಲಿ ಅಡುಗೆ ಮಾಡಿಕೊಂಡಿರುವಾಗ ಒಲೆಯ ಬೆಂಕಿ ಆಕಸ್ಮಿಕವಾಗಿ ತಾಗಿ ಗಂಬೀರ ಗಾಯಗೊಂಡು ಆಸ್ಪತ್ರೆ ಗೆ ದಾಖಲು ಮಾಡಲಾಗಿತ್ತು.
ಇವರ ಸೊಂಟದ ಭಾಗಕ್ಕೆ ಮತ್ತು ಕೈಗಳಿಗೆ ಬೆಂಕಿ ತಗುಲಿ ಗಂಭೀರ ಸ್ವರೂಪದ ಗಾಯಗಾಳಾಗಿತ್ತು.
ಇವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆ ಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರು ವೆನ್ ಲಾಕ್ ಆಸ್ಪತ್ರೆ ಗೆ ದಾಖಲಿಸಲಾಗಿತ್ತು.
ಆದರೆ ಗಂಭೀರ ವಾದ ಗಾಯಗಳಿಗೆ ಚಿಕಿತ್ಸೆ ಫಲಕಾರಿಯಾಗದೆ ಸುಂದರಿ ಅವರು ಮೇ.29 ರಂದು ಆಸ್ಪತ್ರೆ ಯಲ್ಲಿ ಮೃತಪಟ್ಟಿದ್ದಾರೆ.
ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...