ಬಂಟ್ವಾಳ: ಆಕಸ್ಮಿಕವಾಗಿ ಬೆಂಕಿ ತಗುಲಿ ಗಾಯಗೊಂಡು ಆಸ್ಪತ್ರೆ ಗೆ ದಾಖಲಾಗಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆ ಯಲ್ಲಿ ಮೃತಪಟ್ಟಿದ್ದಾರೆ.
ನರಿಕೊಂಬು ಗ್ರಾಮದ ಕಲ್ಲಗ ದರ್ಖಾಸು ನಿವಾಸಿ ದಿ.ವೆಂಕಪ್ಪ ಪೂಜಾರಿ ಅವರ ಪತ್ನಿ ಸುಂದರಿ (62) ಮೃತಪಟ್ಟವರು.
ಮೇ.24 ರಂದು ಅಪರಾಹ್ನ ಮೂರು ಗಂಟೆಯ ವೇಳೆ ಅವರ ಮನೆಯ ಹೊರಭಾಗದಲ್ಲಿ ರುವ ಅಡುಗೆ ಶೆಡ್ಡಿನಲ್ಲಿರುವ ಕಟ್ಟಿಗೆ ಒಲೆಯಲ್ಲಿ ಅಡುಗೆ ಮಾಡಿಕೊಂಡಿರುವಾಗ ಒಲೆಯ ಬೆಂಕಿ ಆಕಸ್ಮಿಕವಾಗಿ ತಾಗಿ ಗಂಬೀರ ಗಾಯಗೊಂಡು ಆಸ್ಪತ್ರೆ ಗೆ ದಾಖಲು ಮಾಡಲಾಗಿತ್ತು.
ಇವರ ಸೊಂಟದ ಭಾಗಕ್ಕೆ ಮತ್ತು ಕೈಗಳಿಗೆ ಬೆಂಕಿ ತಗುಲಿ ಗಂಭೀರ ಸ್ವರೂಪದ ಗಾಯಗಾಳಾಗಿತ್ತು.
ಇವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆ ಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರು ವೆನ್ ಲಾಕ್ ಆಸ್ಪತ್ರೆ ಗೆ ದಾಖಲಿಸಲಾಗಿತ್ತು.
ಆದರೆ ಗಂಭೀರ ವಾದ ಗಾಯಗಳಿಗೆ ಚಿಕಿತ್ಸೆ ಫಲಕಾರಿಯಾಗದೆ ಸುಂದರಿ ಅವರು ಮೇ.29 ರಂದು ಆಸ್ಪತ್ರೆ ಯಲ್ಲಿ ಮೃತಪಟ್ಟಿದ್ದಾರೆ.
ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
