Thursday, February 13, 2025

’ಅರ್ಥ ಆಪುಜಿ’ ನಾಟಕ ಮುಹೂರ್ತ

ವಿಟ್ಲ: ಕೇಪು ಮೈರ ಶ್ರೀ ದುರ್ಗಾ ಮಿತ್ರ ವೃಂದದ ಅಂಗ ಸಂಸ್ಥೆಯಾದ ಶ್ರೀ ದುರ್ಗಾ ಕಲಾ ತಂಡದ ಪುಗರ್ತೆ ಕಲಾವಿದರು ಮೈರ ಕೇಪು ಈ ತಂಡದ 9 ನೇ ಕಲಾಕಾಣಿಕೆ ನಿತಿನ್ ಹೊಸಂಗಡಿ ರಚಿಸಿ ರಾಜಶೇಖರ್ ಶೆಟ್ಟಿ ಕುಡ್ತಮುಗೇರ್ ನಿರ್ದೇಶನ ಮಾಡಲಿರುವ ನಾಟಕ ಅರ್ಥ ಆಪುಜಿ (ಏರ್…?ಎಂಚ…..?) ನಾಟಕದ ಮುಹೂರ್ತ ಕೇಪು ಶ್ರೀ ಸುಬ್ರಾಯ ದೇವರ ಸನ್ನಿಧಿಯಲ್ಲಿ ನಡೆಯಿತು. ಶ್ರೀ ಕ್ಷೇತ್ರ ಕುಕ್ಕಾಜೆಯ ಧರ್ಮದರ್ಶಿ ಶ್ರೀ ಕೃಷ್ಣ ಗುರೂಜಿ ಶುಭ ಹಾರೈಸಿದರು. ಲಕ್ಷ್ಮಣ್ ಭಟ್ ಪೌರೋಹಿತ್ಯದಲ್ಲಿ ಪೂಜೆ ನಡೆಯಿತು.
ಶ್ರೀ ದುರ್ಗಾ ಮಿತ್ರ ವೃಂದ ಅಧ್ಯಕ್ಷರಾದ ಅಶೋಕ್ ಎ. ಇರಾಮೂಲೆ, ಗೌರವಾಧ್ಯಕ್ಷರಾದ ಜಗಜ್ಜೀವನ್ ರಾಮ್ ಶೆಟ್ಟಿ, ಪ್ರಧಾನ ಕಾರ್‍ಯದರ್ಶಿ ಶೀನ ನಾಯ್ಕ ಕಲ್ಲಾಪು, ಕೋಶಾಧಿಕಾರಿ ಪುರುಷೋತ್ತಮ ಮೈರ(ಪುತ್ತೂರು), ಶಿಸ್ತು ಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಬೇಂಗ್ರೋಡಿ, ನಾಟಕ ತಂಡದ ಅಧ್ಯಕ್ಷ ಪದ್ಮನಾಭ ಕಲ್ಲಂಗಳ,ಸಂಚಾಲಕರಾದ ರಾಜೇಶ್ ಪುಚ್ಚೆಗುತ್ತು, ವ್ಯವಸ್ಥಾಪಕರಾದ ಶ್ರೇಯಸ್ ಪಾಟಾಳಿ ಕೇಪು, ನಾಟಕ ತಂಡದ ಕಲಾವಿದರು ಕಲಾಭಿಮಾನಿಗಳು ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...