Wednesday, July 9, 2025

ನಯನಾಡು: ಶ್ರೀ ಧ.ಮಂ. ಸಂಚಾರಿ ಆಸ್ಪತ್ರೆ ಉದ್ಘಾಟನೆ

ಬಂಟ್ವಾಳ: ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆಯ ಮಾರ್ಗದರ್ಶನದಲ್ಲಿ ಮತ್ತು ಶ್ರೀ ಧರ್ಮಸ್ಥಳ ಮೆಡಿಕಲ್ ಟ್ರಸ್ಟ್ ಇದರ ಸಹಯೋಗದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ವಗ್ಗ ವಲಯದ ಪಿಲಾತಬೆಟ್ಟು ಕಾರ್ಯಕ್ಷೇತ್ರದ ಒಕ್ಕೂಟಗಳ ಮತ್ತು ನಯನಾಡು ನಯನಾಡು ಶಶಾಂಕ್ ಕ್ಯಾಶ್ಯೂ ಇಂಡಸ್ಟ್ರೀಸ್, ಶ್ರೀರಾಮ ಯುವಕ ಮಂಡಲದ ಸಹಕಾರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಂಚಾರಿ ಆಸ್ಪತ್ರೆಯ ಉಚಿತ ಚಿಕಿತ್ಸಾ ಶಿಬಿರಕ್ಕೆ ಪಿಲಾತಬೆಟ್ಟು ಗ್ರಾಮದ ನಯನಾಡು ಶಶಾಂಕ್ ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ ಮಂಗಳವಾರ ಚಾಲನೆ ನೀಡಲಾಯಿತು.
ಶಶಾಂಕ್ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕ ಹರೀಂದ್ರ ಪೈ ಅವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ದೂರದರ್ಶಿತ್ವದಿಂದ ನಡೆಸುತ್ತಿರುವ ಸಂಚಾರಿ ಆಸ್ಪತ್ರೆಯಿಂದ ಗ್ರಾಮೀಣ ಪ್ರದೇಶದ ಜನತೆಯ ಆರೋಗ್ಯ ಕಾಳಜಿಗೆ ಸಹಕಾರಿಯಾಗಿದ್ದು, ವರದಾನವಾಗಿದೆ. ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಗ್ರಾಮಗಳ ಅಭಿವೃದ್ಧಿಯಾಗಿದೆ. ಸಂಪೂರ್ಣ ಸುರಕ್ಷಾ ಯೋಜನೆ ಮೂಲಕ ವಿಮಾ ಸೌಲಭ್ಯಗಳ ಜಾಗೃತಿ ಮೂಡುವಂತಾಗಿದೆ ಎಂದು ಹೇಳಿದರು.
ಸಂಗಬೆಟ್ಟು ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಮಾತನಾಡಿ, ಸರಕಾರಗಳಿಂದ ಸಾಧ್ಯವಾಗದ ಜನೋಪಯೋಗಿ ಕಾರ್ಯಕ್ರಮಗಳು ಡಾ| ಡಿ. ವೀರೇಂದ್ರ ಹೆಗ್ಗಡೆ ಅವರಿಂದ ಸಾಧ್ಯವಾಗಿದೆ. ಇಂತಹ ಕಾರ್ಯಕ್ರಮಗಳು ಹಳ್ಳಿಗಳಿಗೆ ತಲುಪುವ ಮೂಲಕ ದೇಶದಾದ್ಯಂತ ಪ್ರಶಂಸೆಗೆ ಪಾತ್ರವಾಗಿದೆ ಎಂದರು. ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕುಮಂಗಿಲ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮಸ್ಥರು ಸಂಚಾರಿ ಆಸ್ಪತ್ರೆಯ ಸದುಪಯೋಗ ಪಡೆಯಬೇಕು ಎಂದು ಹೇಳಿದರು.
ತಾ.ಪಂ.ಸದಸ್ಯ ರಮೇಶ್ ಪೂಜಾರಿ ಕುಡ್ಮೇರು, ತುಳುನಾಡ ರಕ್ಷಣಾ ವೇದಿಕೆ ಬಂಟ್ವಾಳ ಅಧ್ಯಕ್ಷ ರಮೇಶ್ ಶೆಟ್ಟಿ ಮಜಲೋಡಿ ಶುಭ ಹಾರೈಸಿದರು.
ಸಂಚಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನಾರಾಯಣ್ ಪ್ರಭು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಚಾರಿ ಆಸ್ಪತ್ರೆಯಲ್ಲಿ ದೊರಕುವ ಚಿಕಿತ್ಸಾ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ವಗ್ಗ ವಲಯ ಮೇಲ್ವಿಚಾರಕ ಜಯಕುಮಾರ್ ಅವರು ಶಿಬಿರದ ವಿವರ ನೀಡಿದರು.
ಒಕ್ಕೂಟಗಳ ಅಧ್ಯಕ್ಷ ರಾದ ರಮೇಶ್ ಪೂಜಾರಿ, ಸುಮಿತ್ರಾ, ನಯನಾಡು ಮತ್ತು ಪಿಲಾತಬೆಟ್ಟು ಒಕ್ಕೂಟಗಳ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಪಿಲಾತಬೆಟ್ಟು ಸೇವಾ ಪ್ರತಿನಿಧಿ ಅಮೃತಾ ಎಸ್. ಸ್ವಾಗತಿಸಿದರು. ಶ್ರೀ ರಾಮ ಯುವಕ ಮಂಡಲದ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಮುಂದಿನ ಎರಡು ತಿಂಗಳು ಶಿಬಿರ ನಡೆಯಲಿದೆ.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...