Sunday, January 25, 2026

ಸರ್ವೀಸ್ ರಸ್ತೆಯಲ್ಲಿ ಕ್ರತಕ ನೆರೆ

ಬಂಟ್ವಾಳ: ಬಿಸಿರೋಡ್ ಸರ್ವೀಸ್ ರಸ್ತೆಯಲ್ಲಿ ಕುಡಿಯುವ ನೀರಿ ಪೈಪ್ ಹೊಡೆದು ಹೋದ ಪರಿಣಾಮ ಕ್ರತಕ ನೆರೆ ಉಂಟಾಗಿ ಸಂಚಾರ ಅಸ್ತವ್ಯಸ್ತವಾಗಿ ಸಾರ್ವಜನಿಕ ರು ಪುರಸಭೆಗೆ ಹಿಡಿಶಾಪ ಹಾಕಿದ್ದಾರೆ.

ಸರ್ವೀಸ್ ರಸ್ತೆಯಲ್ಲಿ ಕಳೆದ ವಾರ ಕುಡಿಯವ ನೀರಿನ ಪೈಪ್ ಲೈನ್ ಕೆಲಸ ವನ್ನು ಪುರಸಭೆ ಯವರು ಕೈಗೊಂಡಿದ್ದರು.


ಅ ಬಳಿಕ ಕಳಪೆ ಕಾಮಗಾರಿಯ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದ ವೇಳೆ ಕುಡಿಯುವ ನೀರಿನ ಪೈಪ್ ಹೊಡೆದುಹೋಗಿ ಸರ್ವೀಸ್ ರಸ್ತೆಯಲ್ಲಿ ನೀರು ತುಂಬಿತ್ತು.
ಒಂದು ಕಡೆಯಿಂದ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಹಲವು ಕಡೆಗಳಲ್ಲಿ ಕುಡಿಯುವ ನೀರಿಗೆ ತೊಂದರೆ.
ಇನ್ನೊಂದು ಕಡೆಯಿಂದ ಪೋಲಾಗುತ್ತಿರುವ ನೀರು ಇದೆಲ್ಲವೂ ಅಧಿಕಾರಿಗಳ ಆಡಳಿತ ಯಂತ್ರದಲ್ಲಿನ‌ ಬಿಕ್ಕಟ್ಟುಗಳು ಎನ್ನಲಾಗುತ್ತದೆ.

ಪೈಪ್ ಲೈನ್ ಹೊಡೆದುಹೋಗಿ ನೀರು ಪೋಲಾಗುತ್ತಿದೆ, ಕೂಡಲೇ ಗೇಟ್ ವಾಲ್ ಬಂದ್ ಮಾಡುವಂತೆ ಮಾಜಿ ಪುರಸಭಾ ಸದಸ್ಯೆ ಯಶೋದ ಅವರು ಪುರಸಭೆಯ ಅಧಿಕಾಗಳಿಗೆ ಮೌಖಿಕವಾಗಿ ತಿಳಿಸಿದರು ಕೂಡಾ ಪುರಸಭೆಯ ಅಧಿಕಾರಿಗಳು ತಾಸುಗಟ್ಟಲೆ ಸ್ಥಳಕ್ಕೆ ಬರಲೇ ಇಲ್ಲ. ಮತ್ತೆ ಕೂಡಾ ನೀರು ಪೋಲಾಗುತ್ತಲೆ ಇತ್ತು.

ಸರ್ವೀಸ್ ರಸ್ತೆಯಲ್ಲಿರುವ ಅಂಗಡಿಗಳಿಗೂ ನೀರು ನುಗ್ಗಿದೆ.

More from the blog

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...