Saturday, February 8, 2025

ಹ್ರದಯಘಾತದಿಂದ ಸಾವನ್ನಪ್ಪಿದ ಕುಟುಂಬಕ್ಕೆ ಪೋಲೀಸರಿಂದ ನೆರವು

ಬಂಟ್ವಾಳ: 2002 ರಲ್ಲಿ ಹ್ರದಯಘಾತದಲ್ಲಿ ಮೃತಪಟ್ಟ ಮಂಗಳೂರು ಪೊಲೀಸ್ ನ 2000ನೇ ಇಸವಿ ಯ ಬ್ಯಾಚ್ ನ ದಿ.ಆನಂದ ರವರ ತಾಯಿ ಬೀತುರು ರವರಿಗೆ 2000ನೇ ಇಸವಿಯ ಬ್ಯಾಚ್ ಸಿಬ್ಬಂದಿಯವರು ಒಟ್ಟು ಸೇರಿ ಸಂಗ್ರಹಿಸಿದ 50,000 ರೂಪಾಯಿ ನಗದನ್ನು ಉದಯ ರೈ ರವರು ಜ.30 ರಂದು ಅವರ ಮನೆಗೆ ಹೋಗಿ  ಹಸ್ತಾಂತರಿಸುತ್ತಾರೆ .
ಬೆಳ್ತಂಗಡಿ ತಾಲೂಕಿನ ಪದ್ಮುಂಜ ನಿವಾಸಿಯಾಗಿದ್ದ ಅನಂದರವರು ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಕರ್ತವ್ಯ ಮಾಡುತ್ತಿದ್ದರು.
ವಿಧಿಯಾಟಕ್ಕೆ ಸೋತ ಅನಂದರವರು 2002 ರಲ್ಲಿ ಹಠಾತ್ತಾಗಿ ಎದೆ ನೋವು ಕಾಣಿಸಿಕೊಂಡು ಸುಬ್ರಹ್ಮಣ್ಯ ಠಾಣೆಯಲ್ಲಿ ಕರ್ತವ್ಯ ದಲ್ಲಿರುವಾಗಲೇ ಹ್ರದಯಘಾತದಿಂದ ಮರಣಹೊಂದಿದ್ದಾರೆ.
ಅವಿವಾಹಿತ ಅನಂದ ಅವರು ತೀರ ಬಡಕುಂಟುಂಬದಲ್ಲಿ ಬೆಳೆದು ಬಂದವರು. ತಂದೆಯನ್ನು ಕಳೆದುಕೊಂಡ ಇವರಿಗೆ ಇಳಿ ವಯಸ್ಸಿನ ತಾಯಿ ಮನೆಯಲ್ಲಿ ದ್ದಾರೆ.
ಇವರ ಕಷ್ಟವನ್ನು ಅರಿತ 2000 ಇಸವಿಯ ತರಬೇತಿಯ ಬ್ಯಾಚ್ ನ ಪೋಲೀಸರು ಅನಂದ ಅವರ ತಾಯಿಗೆ ನಗದು ಹಣವನ್ನು ನೀಡಿ ಔದಾರ್ಯ ಮೆರೆದಿದ್ದಾರೆ.
ಬಡ ಕುಟುಂಬ ಕ್ಕೆ ನೀಡಿದ ಸಹಾಯಕ್ಕೆ ತಂಡದ ಎಲ್ಲರಿಗೂ ಕೃತಜ್ಞತೆ ಯನ್ನು ಆನಂದರ ತಾಯಿ ಬೀತುರು ಸಲ್ಲಿಸಿದ್ದಾರೆ.
ಪೋಲೀಸರು ಸಮಾಜಮುಖಿಯಾಗಿ ಇನ್ನೋಬ್ಬರ ಕಷ್ಟದಲ್ಲಿ ಭಾಗಿಯಾಗುವುದು ಇತ್ತೀಚಿನ ದಿನಗಳಲ್ಲಿ ಕಾಣುತ್ತಿರುವುದು, ಪೋಲೀಸರ ಬಗ್ಗೆ ಗೌರವ ಹೆಚ್ಚಾಗುವಂತೆ ಮಾಡಿದೆ.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...