Saturday, January 31, 2026

ಹ್ರದಯಘಾತದಿಂದ ಸಾವನ್ನಪ್ಪಿದ ಕುಟುಂಬಕ್ಕೆ ಪೋಲೀಸರಿಂದ ನೆರವು

ಬಂಟ್ವಾಳ: 2002 ರಲ್ಲಿ ಹ್ರದಯಘಾತದಲ್ಲಿ ಮೃತಪಟ್ಟ ಮಂಗಳೂರು ಪೊಲೀಸ್ ನ 2000ನೇ ಇಸವಿ ಯ ಬ್ಯಾಚ್ ನ ದಿ.ಆನಂದ ರವರ ತಾಯಿ ಬೀತುರು ರವರಿಗೆ 2000ನೇ ಇಸವಿಯ ಬ್ಯಾಚ್ ಸಿಬ್ಬಂದಿಯವರು ಒಟ್ಟು ಸೇರಿ ಸಂಗ್ರಹಿಸಿದ 50,000 ರೂಪಾಯಿ ನಗದನ್ನು ಉದಯ ರೈ ರವರು ಜ.30 ರಂದು ಅವರ ಮನೆಗೆ ಹೋಗಿ  ಹಸ್ತಾಂತರಿಸುತ್ತಾರೆ .
ಬೆಳ್ತಂಗಡಿ ತಾಲೂಕಿನ ಪದ್ಮುಂಜ ನಿವಾಸಿಯಾಗಿದ್ದ ಅನಂದರವರು ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಕರ್ತವ್ಯ ಮಾಡುತ್ತಿದ್ದರು.
ವಿಧಿಯಾಟಕ್ಕೆ ಸೋತ ಅನಂದರವರು 2002 ರಲ್ಲಿ ಹಠಾತ್ತಾಗಿ ಎದೆ ನೋವು ಕಾಣಿಸಿಕೊಂಡು ಸುಬ್ರಹ್ಮಣ್ಯ ಠಾಣೆಯಲ್ಲಿ ಕರ್ತವ್ಯ ದಲ್ಲಿರುವಾಗಲೇ ಹ್ರದಯಘಾತದಿಂದ ಮರಣಹೊಂದಿದ್ದಾರೆ.
ಅವಿವಾಹಿತ ಅನಂದ ಅವರು ತೀರ ಬಡಕುಂಟುಂಬದಲ್ಲಿ ಬೆಳೆದು ಬಂದವರು. ತಂದೆಯನ್ನು ಕಳೆದುಕೊಂಡ ಇವರಿಗೆ ಇಳಿ ವಯಸ್ಸಿನ ತಾಯಿ ಮನೆಯಲ್ಲಿ ದ್ದಾರೆ.
ಇವರ ಕಷ್ಟವನ್ನು ಅರಿತ 2000 ಇಸವಿಯ ತರಬೇತಿಯ ಬ್ಯಾಚ್ ನ ಪೋಲೀಸರು ಅನಂದ ಅವರ ತಾಯಿಗೆ ನಗದು ಹಣವನ್ನು ನೀಡಿ ಔದಾರ್ಯ ಮೆರೆದಿದ್ದಾರೆ.
ಬಡ ಕುಟುಂಬ ಕ್ಕೆ ನೀಡಿದ ಸಹಾಯಕ್ಕೆ ತಂಡದ ಎಲ್ಲರಿಗೂ ಕೃತಜ್ಞತೆ ಯನ್ನು ಆನಂದರ ತಾಯಿ ಬೀತುರು ಸಲ್ಲಿಸಿದ್ದಾರೆ.
ಪೋಲೀಸರು ಸಮಾಜಮುಖಿಯಾಗಿ ಇನ್ನೋಬ್ಬರ ಕಷ್ಟದಲ್ಲಿ ಭಾಗಿಯಾಗುವುದು ಇತ್ತೀಚಿನ ದಿನಗಳಲ್ಲಿ ಕಾಣುತ್ತಿರುವುದು, ಪೋಲೀಸರ ಬಗ್ಗೆ ಗೌರವ ಹೆಚ್ಚಾಗುವಂತೆ ಮಾಡಿದೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...