Tuesday, February 11, 2025

ಮಳೆರಾಯನ ಭೀಕರ ಪ್ರವಾಹಕ್ಕೆ ಒಳಗಾಗಿ ಮನೆ ಮಗಳ ಮದುವೆಗೆ ಆರ್ಥಿಕ ಅಡಚಣೆ ಎದುರಿಸುತ್ತಿದ್ದ ಕೊಡಗಿನ ಕುಟುಂಬಕ್ಕೆ ತುಳುನಾಡ ಪೊರ್ಲು ಸೇವಾ ಟ್ರಸ್ಟ್® ವತಿಯಿಂದ ಧನ ಸಹಾಯ ಹಸ್ತಾಂತರ

ಬಂಟ್ವಾಳ: ಮಡಿಕೇರಿ ತಾಲೂಕಿನ ಮದೆ ಜೋಡುಪಾಲು 2ನೇ ಮೊಣ್ಣoಗಿರಿಯಲ್ಲಿ ತನ್ನ ಪತ್ನಿ ಕರ್ತ್ಯಾಯಿನಿ, 3 ಹೆಣ್ಣು ಮತ್ತು ಒಂದು ಗಂಡು ಮಕ್ಕಳ ಜೊತೆ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಸುಂದರ ತಿಯನ್ ರವರು. ಮೊದಲ ಇಬ್ಬರು ಮಕ್ಕಳು ಅವಳಿ ಜವಳಿ, ರಮ್ಯಾ ಮತ್ತು ರಮ. ನಂತರದ ಕಾವ್ಯ ಮತ್ತು ಸುಕೇಶ್. ರಮ್ಯಾರವರಿಗೆ ಕಳೆದ 2 ವರುಷಗಳ ಹಿಂದೆ ಮದುವೆಯಾಗಿದ್ದು, ಕಾವ್ಯ ಇವಾಗ 10ನೇ ತರಗತಿ ಮತ್ತು ಸುಕೇಶ್ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ. ರಮರವರಿಗೆ ಕಳೆದ ಒಂದೂವರೆ ವರುಷಗಳ ಹಿಂದೆ ಮದುವೆ ಮಾಡಲು ನಿಶ್ಚಯ ಕೂಡ ಆಗಿದ್ದು, ಮಗಳ ಮದುವೆ ಸಂಭ್ರಮಕ್ಕೆ ಕಾಯುತ್ತಿದ್ದ ಸಮಯದಲ್ಲಿ ಯಾರು ಊಹಿಸದ ಮಳೆರಾಯನ ಪ್ರವಾಹವೇ ಕೊಡಗನ್ನು ಬೆಚ್ಚಿ ಬಿಳಿಸಿತ್ತು. ಹಲವು ಕುಟುಂಬಗಳು ತಮ್ಮ ಮನೆ ಮಠಗಳನ್ನು ಕಳೆದುಕೊಂಡರು ಅದರಲ್ಲಿ ಸುಂದರ್ ರವರ ಕುಟುಂಬವು ಒಂದು. ಪ್ರವಾಹದ ಸಮಯದಲ್ಲಿ 1 ತಿಂಗಳು ಸಂಪಾಜೆಯಲ್ಲಿ ಗಂಜಿ ಕೇಂದ್ರದಲ್ಲಿ ಇದ್ದು ತದ ನಂತರ ಸುಳ್ಯ ಆರಂತೋಡುನಲ್ಲಿ ಬಾಡಿಗೆ ಮನೆಯಲ್ಲಿ ಇದ್ದು ಕಷ್ಟದಲ್ಲೇ ಜೀವನ ಸಾಗಿಸುತ್ತಿದ್ದರೆ. ಪ್ರವಾಹದ ಹಾನಿ ನಷ್ಟಕ್ಕೆ ಸರಕಾರ ಅಲ್ಪ ಮಟ್ಟಿನ ಪರಿಹಾರ ನೀಡಿದರೂ ಅದರಿಂದಲೇ ಜೀವನ ಸಾಗಿಸಲು ಕಷ್ಟ. ಅಂತೂ ಮದುವೆ ನಿಶ್ಚಿಯವಾಗಿ ಆಗಲೇ ಒಂದೂವರೆ ವರುಷ ಆಯಿತು. ದೇವರು ಇದ್ದರೆ ಅಂತ ಮಗಳ ಮದುವೆಯನ್ನು ಆರಂತೋಡು ತಿಕ್ಕಿಲ್ ಸಭಾ ಭವನದಲ್ಲಿ ಇಂದು ಮಾಡುವುದೆಂದು ನಿರ್ಧರಿಸಿದ್ದರು. ಹಿರಿಮಗಳಿಗೆ ಮದುವೆ ಮಾಡಿ ಇನ್ನೆನೂ ಸಾಲ ಮಾಡಿಯಾದರೂ ಎರಡನೆಯ ಮಗಳ ಮದುವೆ ಮಾಡಬೇಕು ಅಂತ ಸಿದ್ದತೆಯ ಚಿಂತೆಯಲ್ಲಿ ಇರುವಾಗ ಪ್ರಕೃತಿ ವಿಕೋಪಕ್ಕೆ ಕನಸು ಕನಸಾಗಿಯೇ ಉಳಿಯಿತು. ಗಾಯದ ಮೇಲೆ ಬರೆ ಎಳೆದಂತೆ ಒಂದು ಕಡೆ ಮಗಳ ಮದುವೆಯ ಚಿಂತೆ ಇನ್ನೊಂದು ಕಡೆ ಮೊದಲ ಮಗಳ ಮದುವೆಗೆ ಮಾಡಿದ ಸಾಲದ ಸಂದಿಗ್ಧ ಪರಿಸ್ಥಿತಿಯಲ್ಲಿರುವ ಸುಂದರ ತಿಯನ್ ರವರ ಕಷ್ಟಕ್ಕೆ ನೆರವಾಗುವ ನಿಟ್ಟಿನಲ್ಲಿ ಮದುವೆಯ ಶುಭ ಘಳಿಗೆಯಲ್ಲಿ ರೂ. 15,000 ಚೆಕ್ ಅನ್ನು ಮದು ಮಗಳು ರಮರವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಸೇವಾ ಕಾರ್ಯಕರ್ತರು ಉಪಸ್ಥಿತರಿದ್ದರು.

More from the blog

ಮನೆಗೆ ಬೆಂಕಿ

ಬಡಕಬೈಲ್: ಗೋಣಿ ಚೀಲ ವ್ಯಾಪಾರಿ ಮೋನಾಕ ಎಂಬವರ ಮನೆಗೆ ಆಕಸ್ಮಿಕಾ ಬೆಂಕಿ ಅನಾಹುತ. ಯಾವುದೇ ಸಾವು-ನೋವು ಸಂಭವಿಸಿಲ್ಲ. ತಡರಾತ್ರಿ ಘಟನೆ ಬೆಂಕಿ‌ ನಂದಿಸಲು ಅಗ್ನಿ ಶಾಮಕದಳ ಹರಸಾಹಸ ಶಾರ್ಟ್ ಸರ್ಕ್ಯೂಟ್ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು...

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...