Friday, July 11, 2025

ಬಂಟ್ವಾಳ ತಾಲೂಕು ಮದ್ಯ ಮಾರಾಟಗಾರರ ಸಂಘ ವತಿಯಿಂದ ಆರ್ಥಿಕ ನೆರವು

ಬಂಟ್ವಾಳ: ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ಸಿ ಏನ್ ಅಪ್ಪಚ್ಚು ಅವರ ಅಧ್ಯಕ್ಷತೆಯಲ್ಲಿ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ ನೆರೆ ಸಂತಸ್ತರಿಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 2 ಲಕ್ಷಗಳನ್ನು ಮುಖ್ಯ ಅಥಿತಿಗಳಾಗಿ ಭಾಗವಹಿಸಿದ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಮುಖಾಂತರ ಕಾರ್ಯದರ್ಶಿ ಓಂಪ್ರಸಾದ್ ಬಿ ಯವರೊಂದಿಗೆ ಹಸ್ತಾಂತರಿಸಿದರು.
ಶಾಸಕರು ಬಂಟ್ವಾಳ ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರ ಮಾನವೀಯ ಕಾಳಜಿಗೆ ಅಭಿನಂದನೆ ಸಲ್ಲಿಸಿ ಮುಂದಕ್ಕೂ ಸಮಾಜದ ಏಳಿಗೆ ಬಗ್ಗೆ ತುಡಿತ ಇರಲಿ ಎನ್ನುವ ಕಳಕಳಿಯನ್ನು ವ್ಯಕ್ತ ಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಗೌರವಾಧ್ಯಕ್ಷರಾದ ಸದಾನಂದ ಶೆಟ್ಟಿಯವರು ಅಜ್ಜಿ ಬೆಟ್ಟು ಸರಕಾರೀ ಪ್ರೌಢ ಶಾಲೆಯ ದತ್ತು ಪಡ ಕೊಂಡ ಮಕ್ಕಳಿಗೆ 50000 ಸಹಾಯ ದನ ವಿತರಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷರಾದ ಗಣೇಶ್ ಶೆಟ್ಟಿಯವರು ಲಯನ್ಸ್ ಕ್ಲಬ್ ಬಂಟ್ವಾಳ ಆಶ್ರಯದಲ್ಲಿ ನಡೆಸುತ್ತಿರುವ ವಿಶೇಷ ವಿಕಲ ಚೇತನ ಪಾಲನಾ ಕೇಂದ್ರಕ್ಕೆ 25000 . ಸಹಾಯ ದನ ವಿತರಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಉಪಾದ್ಯಕ್ಷರುಗಳಾದ ಜೋಕಿಮ್ ಲೂಯಿಸ್ ಪಿಂಟೋ
,ಪಿ ಎಂ ನಾರಾಯಣ ಮತ್ತು ಏ ವಿನೋದ್ ಪುತ್ತೂರು ಇವರು ಕುರಿಯಾಳ ಗ್ರಾಮದ ಕಾಲೇಜು ವ್ಯಾಸಂಗ ಮಾಡುತ್ತಿರುವ ವಿಶೇಷ ವಿಕಲ ಚೇತನ ವಿದ್ಯಾರ್ಥಿನಿ ಮತ್ತು ಅವಳ ವಿಶೇಷ ವಿಕಲ ಚೇತನ ತಂದೆಯ ಸಂಸಾರಕ್ಕೆ ಆಸರೆಯಾಗಿ 20000 ಸಹಾಯ ದನವನ್ನು ವಿತರಿಸಿದರು

ವೇದಿಕೆಯಲ್ಲಿ ಲಯನ್ಸ್ ಸೇವಾ ಟ್ರಸ್ಟಿನ ಅಧ್ಯಕ್ಷ ಡಾ ವಸಂತ್ ಬಾಳಿಗಾ ಸಂಘದ ಮಾನವೀಯ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು

ಸಂಘದ ಅಧ್ಯಕ್ಷ ಸಿ ಏನ್ ಅಪ್ಪಚ್ಚು ರವರು ಎಲ್ಲರನ್ನು ಸ್ವಾಗತಿಸಿ ಹಿಂದಿನಿಂದ ಸಂಘದ ವತಿಯಿಂದ ನಡೆಸಿದ್ದ ಸಮಾಜ ಮುಖಿ ಕಾರ್ಯಕ್ರಮಗಳ ಮೆಲುಕು ಹಾಕಿ ಕಳೆದ ಕೆಲವು ವರ್ಷಗಳಿಂದ ನಮ್ಮ ವ್ಯಾಪಾರದಲ್ಲಿ ಉದ್ಭವಿಸಿದ ಗಂಭೀರ ಸಮಸ್ಯೆಗಳಿಂದಾಗಿ ಸ್ಥಗಿತ ಗೊಂಡಿದ್ದರೂ ಪುನರಾರಂಭ ಗೊಂಡ ಬಗ್ಗೆ ಹರ್ಷ ವ್ಯಕ್ತ ಪಡಿಸಿದರು.
ಕೋಶಾಧಿಕಾರಿ ಸದಾನಂದ ಶೆಟ್ಟಿ ಸಹಕಾರವನ್ನಿತ್ತು , ಲೋಕನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು

ಕಾರ್ಯದರ್ಶಿ ಓಂಪ್ರಸಾದ್.ಬಿ ಧನ್ಯವಾದ ಸಮರ್ಪಣೆ ಮಾಡಿದರು.

More from the blog

ಬಂಟ್ವಾಳ ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ಉಮೇಶ್ ಗೌಡ ಮಾಡತ್ತೇಲು ಆಯ್ಕೆ

ಬಂಟ್ವಾಳ : ತುಳುನಾಡಿನ ಅಸ್ಮಿತೆಯ ಚಳುವಳಿಯಾಗಿ ಗುರುತಿಸಲ್ಪಟ್ಟ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ನಿರ್ಣಾಯಕ ಸಮಯದಲ್ಲಿ, ಬಂಟ್ವಾಳ ತಾಲೂಕು ಘಟಕದ ಸಂಚಾಲಕರಾಗಿ ಸಮಾಜ ಶಾಸ್ತ್ರದಲ್ಲಿ...

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ..

ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ...

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಭೆ.. 

ಬಂಟ್ವಾಳ : ಜೀವನದಲ್ಲಿ ತಾಯಿಯ ಪಾತ್ರ ಬಹಳ ದೊಡ್ಡದು. ಮಗುವಿನ ನೋವು ನಲಿವಿನಲ್ಲಿ ಮಾತ್ರವಲ್ಲದೆ ಸಂಸ್ಕಾರಯುತ ಶಿಕ್ಷಣ ಹೊಂದುವಲ್ಲೂ ತಾಯಿ ಮಗುವಿನ ಪ್ರತಿ ಹಂತದಲ್ಲೂ ಜೊತೆಯಾಗಿರಬೇಕು, ಸಂಸ್ಕಾರಯುತ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುವಲ್ಲಿ ತಾಯಿಯೇ...

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ: ಅಪಹರಣ ಮತ್ತು ವಂಚನೆ ಪ್ರಕರಣದ ಆರೋಪಿಯೋರ್ವ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ತಲೆಮರೆಸಿಕೊಂಡಿದ್ದಾತನನ್ನು‌ ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ‌ನಡೆದಿದೆ. ಬಂಟ್ವಾಳ...