Saturday, June 28, 2025

ಆಸರೆ ಗೆಳೆಯರ ಬಳಗದಿಂದ ಎರಡು‌ ಕುಟುಂಬಕ್ಕೆ ರೂ.44,000/- ಸಹಾಯ ಧನ ಹಸ್ತಾಂತರ

ಮಂಗಳೂರು: ಫೆ. 10. ದುಡಿದು ಮನೆ ಸಂಸಾರಕ್ಕೆ ಆಧಾರವಾಗಿದ್ದ ಹರೆಯದ ಮಗನನ್ನು ರಸ್ತೆ ಅಪಘಾತದಲ್ಲಿ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದ ಬಂಟ್ವಾಳದ ಲಕ್ಷ್ಮೀಯವರಿಗೆ ಮತ್ತು ಪತಿಯಿಂದ ಪರಿತ್ಯಕ್ತೆಯಾಗಿ ಹದಿ ಹರೆಯದ ಮಗಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪುತ್ತೂರಿನ ಕುಸುಮರವರಿಗೆ ಸ್ವಂತ ಮನೆ ಕಟ್ಟಲು ಸಹಕರಿಸುವ ನಿಟ್ಟಿನಲ್ಲಿ ಅಡ್ಮಿನ್ ಹೇಮಂತ್ ಕುಮಾರ್ ಕಿನ್ನಿಗೋಳಿಯವರ ನೇತೃತ್ವದಲ್ಲಿ ಆಸರೆ ಗೆಳೆಯರ ಬಳಗದಿಂದ ಸಹಾಯ ಧನ ಸಂಗ್ರಹಿಸುವ ಅಭಿಯಾನದಲ್ಲಿ ಸಹೃದಯಿ ದಾನಿಗಳಿಂದ ಸಂಗ್ರಹಿಸಿದ ₹ 44000/- ಗಳನ್ನು ಸಂತೃಸ್ತರಿಗೆ ₹ 22000/- ದಂತೆ ಸಮಾನವಾಗಿ ದಿನಾಂಕ 10/ 02/ 2019 ರ ಭಾನುವಾರ ಮಂಗಳೂರು ಪೋಲಿಸ್ ಲೇನ್ ನ ಶ್ರೀ ದೇವಿ ದೇವಸ್ಥಾನದಲ್ಲಿ ಹಸ್ತಾಂತರಿಸಲಾಯಿತು.

ಸಹಾಯ ಧನ ಹಸ್ತಾಂತರದ ಸಂದರ್ಭದಲ್ಲಿ ಸತ್ಯಜಿತ್ ಸುರತ್ಕಲ್ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ(ಬಿ.ಜೆ.ಪಿ) ಮತ್ತು ಆಸರೆ ಬಳಗದ ನಿರ್ವಾಹಕರಾದ ಹೇಮಂತ್ ಕುಮಾರ್ ಕಿನ್ನಿಗೋಳಿ , ಸದಸ್ಯರಾದ ರಮೇಶ್ ಕುಮಾರ್ ವಗ್ಗ, ರಂಜಿತ್ ಕುಮಾರ್ ಮೂಡಬಿದರೆ, ನಿತೇಶ್ ಕುಕ್ಯಾನ್ ಏಳಿಂಜೆ, ಕಿರಣ್ ಕುಲಾಲ್ ಮರಕಡ, ದಿನೇಶ್ ಕುಲಾಲ್ ಬೀಡು, ನರೇಶ್ ಕೆ.ಟಿ. ಬೆಳ್ತಂಗಡಿ, ಅರುಣ್ ಕುಲಾಲ್ ಮೂಳೂರು, ಉದಯ್ ಕುಲಾಲ್ ಕಳತ್ತೂರು, ಚಂದ್ರ ಪ್ರಭಾ ಮಂಗಳೂರು, ಅನಿಲ್ ಪೂಜಾರಿ ಮಂಗಳೂರು ಉಪಸ್ಥಿತರಿದ್ದರು. ಸಹಾಯ ಧನವಿತ್ತು ಸಹಕರಿಸಿದ ಸಮಸ್ತ ಸಹೃದಯಿ ದಾನಿಗಳಿಗೆ ಅನಂತಾನಂತ ಕೃತಜ್ಞತೆಗಳು.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...