Sunday, February 1, 2026

ಆಸರೆ ಗೆಳೆಯರ ಬಳಗದಿಂದ ಎರಡು‌ ಕುಟುಂಬಕ್ಕೆ ರೂ.44,000/- ಸಹಾಯ ಧನ ಹಸ್ತಾಂತರ

ಮಂಗಳೂರು: ಫೆ. 10. ದುಡಿದು ಮನೆ ಸಂಸಾರಕ್ಕೆ ಆಧಾರವಾಗಿದ್ದ ಹರೆಯದ ಮಗನನ್ನು ರಸ್ತೆ ಅಪಘಾತದಲ್ಲಿ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದ ಬಂಟ್ವಾಳದ ಲಕ್ಷ್ಮೀಯವರಿಗೆ ಮತ್ತು ಪತಿಯಿಂದ ಪರಿತ್ಯಕ್ತೆಯಾಗಿ ಹದಿ ಹರೆಯದ ಮಗಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪುತ್ತೂರಿನ ಕುಸುಮರವರಿಗೆ ಸ್ವಂತ ಮನೆ ಕಟ್ಟಲು ಸಹಕರಿಸುವ ನಿಟ್ಟಿನಲ್ಲಿ ಅಡ್ಮಿನ್ ಹೇಮಂತ್ ಕುಮಾರ್ ಕಿನ್ನಿಗೋಳಿಯವರ ನೇತೃತ್ವದಲ್ಲಿ ಆಸರೆ ಗೆಳೆಯರ ಬಳಗದಿಂದ ಸಹಾಯ ಧನ ಸಂಗ್ರಹಿಸುವ ಅಭಿಯಾನದಲ್ಲಿ ಸಹೃದಯಿ ದಾನಿಗಳಿಂದ ಸಂಗ್ರಹಿಸಿದ ₹ 44000/- ಗಳನ್ನು ಸಂತೃಸ್ತರಿಗೆ ₹ 22000/- ದಂತೆ ಸಮಾನವಾಗಿ ದಿನಾಂಕ 10/ 02/ 2019 ರ ಭಾನುವಾರ ಮಂಗಳೂರು ಪೋಲಿಸ್ ಲೇನ್ ನ ಶ್ರೀ ದೇವಿ ದೇವಸ್ಥಾನದಲ್ಲಿ ಹಸ್ತಾಂತರಿಸಲಾಯಿತು.

ಸಹಾಯ ಧನ ಹಸ್ತಾಂತರದ ಸಂದರ್ಭದಲ್ಲಿ ಸತ್ಯಜಿತ್ ಸುರತ್ಕಲ್ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ(ಬಿ.ಜೆ.ಪಿ) ಮತ್ತು ಆಸರೆ ಬಳಗದ ನಿರ್ವಾಹಕರಾದ ಹೇಮಂತ್ ಕುಮಾರ್ ಕಿನ್ನಿಗೋಳಿ , ಸದಸ್ಯರಾದ ರಮೇಶ್ ಕುಮಾರ್ ವಗ್ಗ, ರಂಜಿತ್ ಕುಮಾರ್ ಮೂಡಬಿದರೆ, ನಿತೇಶ್ ಕುಕ್ಯಾನ್ ಏಳಿಂಜೆ, ಕಿರಣ್ ಕುಲಾಲ್ ಮರಕಡ, ದಿನೇಶ್ ಕುಲಾಲ್ ಬೀಡು, ನರೇಶ್ ಕೆ.ಟಿ. ಬೆಳ್ತಂಗಡಿ, ಅರುಣ್ ಕುಲಾಲ್ ಮೂಳೂರು, ಉದಯ್ ಕುಲಾಲ್ ಕಳತ್ತೂರು, ಚಂದ್ರ ಪ್ರಭಾ ಮಂಗಳೂರು, ಅನಿಲ್ ಪೂಜಾರಿ ಮಂಗಳೂರು ಉಪಸ್ಥಿತರಿದ್ದರು. ಸಹಾಯ ಧನವಿತ್ತು ಸಹಕರಿಸಿದ ಸಮಸ್ತ ಸಹೃದಯಿ ದಾನಿಗಳಿಗೆ ಅನಂತಾನಂತ ಕೃತಜ್ಞತೆಗಳು.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...