Sunday, January 25, 2026

ನೆರೆ ಬಂದು ಹೋದ ಮೇಲೆ…..

ಬಂಟ್ವಾಳ: ನೆರೆ ಇಳಿದ ಬಳಿಕ ನೇತ್ರಾವತಿ ಶಾಂತವಾಗಿ ಹರಿಯುತ್ತಿದ್ದರೆ , ಬಂಟ್ವಾಳ ದ ಸ್ಥಿತಿ ಹೇಗಿದೆ ಗೊತ್ತಾ…ರಸ್ತೆ ಯೆಲ್ಲಾ ಕೆಸರು ಕೆಸರು, ಮನೆಯೊಳಗೆ ಕೆಸರು, ಕಸದ ರಾಶಿ, ಬಾಟಲಿ ರಾಶಿ, ಹುಲ್ಲುಕಡ್ಡಿ ಹೀಗೆ ಯಾವುದು ಇಲ್ಲ ಯಾವುದು ಇದೆ ಅನ್ನುವುದೇ ಗೊತ್ತಾಗುತ್ತಿಲ್ಲ. ಮನೆಯೊಳಗೆ ತುಂಬಿರುವ ಕೊಳಕನ್ನು ಕ್ಲೀನ್ ಮಾಡುವುದೇ ದೊಡ್ಡ ಸಾಹಸದ ಕೆಲಸ.


ನೆಂಟರ ಮನೆಯಲ್ಲಿ, ಸ್ನೇಹಿತರ ಮನೆಯಲ್ಲಿ ಎರಡು ದಿನಗಳ ಕಾಲ ಕಳೆದ ನೆರೆಸಂತ್ರಸ್ತರು ವಾಪಾಸು ಮನೆಯ ಕಡೆ ಬಂದಿದ್ದಾರೆ.
ಮನೆಯೊಳಗೆ ಅಂಗಡಿಯೊಳಗೆ ಪೇಟೆಗೆ ಕಾಲಿಡುವ ಮುನ್ನ ಹಿಂದೆ ಮುಂದೆ ನೋಡಬೇಕಿದೆ.
ಬೆಳಿಗ್ಗೆ ಯಿಂದಲೇ ಅಂಗಡಿ ಮನೆಗಳನ್ನು ಶುಚಿ ಮಾಡುವ ಕೆಲಸ ಕಂಡುಬಂದರೆ, ರಸ್ತೆಯನ್ನು ಪುರಸಭಾ ಸಿಬ್ಬಂದಿ ಗಳು ಸ್ವಚ್ಚ ಮಾಡುತ್ತಿದ್ದರು.
ಇನ್ನೂ ಕೂಡ ಕರೆಂಟು ಬಂದಿಲ್ಲ, ಮನೆಯೊಳಗೆ ಒಲೆ ಹುರಿದಿಲ್ಲ, ಸಾಮಾಗ್ರಿಗಳನ್ನು ತಂದಿಲ್ಲ. ಅದರೂ ನೆರೆ ಇಳಿದಿರುವ ಬಗ್ಗೆ ಜನರಿಗೆ ತುಸು ನೆಮ್ಮದಿ.
ಅದರೂ ನೆರೆ ಬಂದು ಹೋದ ಬಳಿಕ ಇಲ್ಲಿ ಸಾಂಕ್ರಾಮಿಕ ರೋಗ ಬರುವ ಸಾಧ್ಯತೆ ಗಳು ಹೆಚ್ಚಿವೆ, ಹಾಗಾಗಿ ಸ್ವಚ್ಛತೆಗೆ ಹೆಚ್ಚಿನ ಅಧ್ಯತೆಯ ನೆಲೆಯಲ್ಲಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಶಾಸಕ ರಾಜೇಶ್ ನಾಯ್ಕ್ ಸೂಚನೆ ನೀಡಿದ್ದಾರೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...