Wednesday, January 28, 2026

ನೇತ್ರಾವತಿ ನದಿಯಲ್ಲಿ ಒಳಹರಿವು ಇರುವುದರಿಂದ ಈ ಬಾರಿ ಮಂಗಳೂರು ಜನತೆಗೆ ಕುಡಿಯುವ ನೀರಿಗೆ ಸಮಸ್ಯೆ ಇಲ್ಲ

ಬಂಟ್ವಾಳ: ವರ್ಷ ಕಳೆದಂತೆ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತಿದ್ದು, ಹೀಗಾಗಿ ನದಿಯನ್ನೇ ಆಶ್ರಯಿಸಿರುವವರು ಬೇಸಿಗೆ ಬಂತೆಂದರೆ ಸಾಕು ಆತಂಕ ಪಡುವ ಸ್ಥಿತಿ ಇದೆ. ನದಿಯಲ್ಲಿ ನೀರು ಕಡಿಮೆಯಾದರೆ ಹೆಚ್ಚು ಆತಂಕ ಪಡುವವರೆಂದರೆ ಮಂಗಳೂರಿನ ಜನತೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನೀರಿನ ಮಟ್ಟ ಹೆಚ್ಚಿರುವುದು ಸಮಾಧಾನಕರ ವಿಚಾರ.


ಮಂಗಳೂರಿಗೆ ತುಂಬೆ ಡ್ಯಾಂನಿಂದ ನೀರು ಪೂರೈಕೆಯಾಗುತ್ತಿದ್ದು, ಪ್ರಸ್ತುತ 6 ಮೀ. ನೀರು ನಿಲ್ಲಿಸಲು ಅವಕಾಶವಿರುವ ಡ್ಯಾಂನಲ್ಲಿ ಸದ್ಯಕ್ಕೆ 4.88 ಮೀ. ನೀರು ಇದೆ. ಈ ಬಾರಿ ನದಿಯಲ್ಲಿ ನೀರಿನ ಒಳಹರಿವು ಹೆಚ್ಚಿದ್ದ ಪರಿಣಾಮ ನೀರಿನ ತೊಂದರೆ ಬಾರದು ಎಂದು ಅಽಕಾರಿಗಳ ಅಧಿಕಾರಿಗಳ ಅಭಿಪ್ರಾಯ.

ಒಂದು ವೇಳೆ ಡ್ಯಾಂನಲ್ಲಿ ನೀರು ಕಡಿಮೆಯಾದರೂ ಶಂಭೂರಿನಲ್ಲಿ ವಿದ್ಯುತ್ ಉತ್ಪಾದನೆಯ ದೃಷ್ಟಿಯಿಂದ ಅನುಷ್ಠಾನಗೊಂಡಿರುವ ಎಎಂಆರ್ ಡ್ಯಾಂನಲ್ಲಿ ಹೆಚ್ಚಿನ ನೀರು ಸಂಗ್ರಹವಿದೆ. ಕಳೆದ ವರ್ಷ ಈ ಸಮಯದಲ್ಲಿ ಒಂದು ಬಾರಿ ಶಂಭೂರಿನಿಂದ ತುಂಬೆಗೆ ನೀರು ಹರಿಸಲಾಗಿತ್ತು.
ಈ ಬಾರಿ ಎಪ್ರಿಲ್ ತಿಂಗಳು ಬಂದರೂ ಅಂತಹ ಸನ್ನಿವೇಶ ಸೃಷ್ಟಿಯಾಗದೇ ಇರುವುದರಿಂದ ಸದ್ಯಕ್ಕೆ ನೀರಿನ ತೊಂದರೆ ಇರದು. ಇದರ ಜತೆಗೆ ಸಂಜೆಯ ವೇಳೆ ಹನಿ ಮಳೆಯಾಗುತ್ತಿರುವುದರಿಂದ ಮಳೆಯ ಲಕ್ಷಣವೂ ಗೋಚರವಾಗುತ್ತಿದ್ದು, ನೀರಿನ ಆತಂಕವನ್ನು ದೂರ ಮಾಡುತ್ತಿದೆ.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...