Thursday, February 13, 2025

“ಪೊಲೀಸ್ ಹಮೀದಾಕ” ನಿಧನ

ಬಂಟ್ವಾಳ: “ಪೊಲೀಸ್ ಹಮೀದಾಕ” ಎಂದೇ ಚಿರಪರಿಚಿತರಾಗಿದ್ದ, ನಿವೃತ್ತ ಪೊಲೀಸ್ ಹೆಡ್‌ಕಾನ್‌ಸ್ಟೆಬಲ್ ಕೆ. ಅಬ್ದುಲ್ ಹಮೀದ್ (75) ಅವರು ವಯೋಸಹಜ ಅನಾರೋಗ್ಯದಿಂದ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ನೆಹರೂನಗರದಲ್ಲಿರುವ ಸ್ವಗೃಹದಲ್ಲಿ ಶುಕ್ರವಾರ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರರನ್ನು ಹಾಗೂ ಐವರು ಪುತ್ರಿಯರ ಸಹಿತ ಅಪಾಯ ಬಂಧುಬಳಗವನ್ನು ಅಗಲಿದ್ದಾರೆ. ಇವರ ಮೃತದೇಹವನ್ನು ನೆಹರೂನಗರದ ಮನೆಯಲ್ಲಿ ಇರಿಸಲಾಗಿದ್ದು, ಇವರ 2ನೆ ಪುತ್ರ ವಿದೇಶದಿಂದ ಬಂದ ಕೂಡಲೇ ಅಂತ್ಯಸಂಸ್ಕಾರ ನಡೆಸಲಾಗುವುದು. ಇಂದು (ಎ.27) ಬೆಳಿಗ್ಗೆ ದಫನ ಕಾರ್ಯ ಮಾಡಲಾಗವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಸುಮಾರು 20 ವರ್ಷಗಳ ಕಾಲ ಮಂಗಳೂರಿನ ಡಿಎಆರ್ ವಿಭಾಗದಲ್ಲಿ ಪೊಲೀಸ್ ಹೆಡ್‌ಕಾನ್‌ಸ್ಟೆಬಲ್ ಆಗಿ ಹಾಗೂ ವಾಹನ ಚಾಲಕರಾಗಿ ಸೇವೆ ಸಲ್ಲಿರುವ ಹಮೀದ್ ಅವರು, “ಪೊಲೀಸ್ ಹಮೀದಾಕ” ಎಂದೇ ಚಿರಪರಿಚಿತರಾಗಿದ್ದರು. ಪೊಲೀಸ್ ಇಲಾಖೆಯಲ್ಲಿ ನಿವೃತ್ತರಾಗಿ 15 ವರ್ಷಗಳಾಗಿವೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...