Thursday, January 29, 2026

ಬಸ್ ಮಾಲಕ ನೊರ್ಬಟ್ (ಮುನ್ನ ) ಬ್ರೈನ್ ಎಮರೇಜ್ ನಿಂದ ನಿಧನ

ಬಂಟ್ವಾಳ: ಖಾಸಗಿ‌ಬಸ್ ಮಾಲಕ, ಕಾಂಗ್ರೇಸ್ ಕಾರ್ಯಕರ್ತ, ಪರಸಭಾ ಮಾಜಿ ನಾಮನಿರ್ದೇಶನ ಸದಸ್ಯ ಮೆದುಳಿನ ಕಾಯಿಲೆಯಿಂದ ಇಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬಂಟ್ವಾಳ ತಾಲೂಕಿನ ಪುರಸಭಾ ವ್ಯಾಪ್ತಿಯ ಲೊರೆಟ್ಟೋಪದವು ಮಂಡಾಡಿ ನಿವಾಸಿ ಪಿಯೂಸ್ ರೊಡ್ರಿಗಸ್ ಅವರ ಪುತ್ರ
ನೊರ್ಬಟ್ ಡಿ.ಸೋಜ. (50) ಬ್ರೈನ್ ಎಮರೇಜ್ ನಿಂದ ಅಸುನೀಗಿದ್ದಾರೆ.
ನೊರ್ಬಟ್ ಅವರು ನಿನ್ನೆ ಬುಧವಾರ ಸಂಜೆಯ ವೇಳೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿದೆ ಎಂದು‌ ತುಂಬೆ ಆಸ್ಪತ್ರೆ ದಾಖಲು ಮಾಡಲಾಗಿತ್ತು. ‌
ಆದರೆ ಅವರಿಗೆ ರಕ್ತದ ಒತ್ತಡ ಜೊತೆ ಮೆದುಳಿನ ಸಮಸ್ಯೆ ಯಿರುವುದರಿಂದ ಹೆಚ್ಚಿನ ಚಿಕಿತ್ಸೆಯ ಉದ್ದೇಶದಿಂದ ಮಂಗಳೂರು ಯುನಿಟಿ ಆಸ್ಪತ್ರೆಗೆ ದಾಖಲು ಮಾಡಲಾಯಿತು.
ಆದರೆ ಇಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಗುರುವಾರ ಮಧ್ಯಾಹ್ನ 3.50 ಗಂಟೆಯ ವೇಳೆ ಇವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಬಂಟ್ವಾಳ ಖಾಸಗಿ ಬಸ್ ಏಜೆಂಟ್ ಮೂಲಕ ಚಿರಪರಿಚಿತ ರಾಗಿರುವ ಇವರು ಪ್ರಸ್ತುತ ನಿತ್ಯಾಧರ ಎಂಬ ಹೆಸರಿನ ಐದು ಬಸ್ ಗಳ ಮಾಲಕರಾಗಿದ್ದಾರೆ.
ಕಾಂಗ್ರೇಸ್ ಸಕ್ರೀಯ ಕಾರ್ಯಕರ್ತರಾಗಿದ್ದ ಇವರು ಕಳೆದ ಅವಧಿಯಲ್ಲಿ ಪುರಸಭೆಯ ನಾಮನಿರ್ದೇಶನ ಸದಸ್ಯ ರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಪುರಸಭಾ ಸದಸ್ಯ ಸ್ಥಾನಕ್ಕೆ ಸ್ಪರ್ಧೆ ನಡೆಸಿ ಪರಾಜಯಗೊಂಡಿದ್ದರು. ಆದರೆ ಸಾಮಾಜಿಕ, ರಾಜಕೀಯವಾಗಿ ತೊಡಗಿಸಿಕೊಂಡ ಇವರು ಬಸ್ ಮುನ್ನ ಎಂದೇ ಪರಿಚಿತರಾಗಿದ್ದರು.
ಇವರು ಪತ್ನಿ ಬಬಿತಾ ಹಾಗೂ ಒರ್ವ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಇವರ ಸಂಬಂಧಿಕರು ವಿದೇಶದಲ್ಲಿದ್ದು , ಅವರ ಬರುವಿಕೆಗಾಗಿ
ನೊರ್ಬಟ್ ಅವರ ಮೃತದೇಹ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆ ಯ ಶೀಥಲೀಕರಣದಲ್ಲಿ ಇಡಲಾಗಿದ್ದು ಶನಿವಾರ ಅಂತ್ಯಕ್ರಿಯೆ ನಡೆಯಲಿದೆ.‌
ಬಂಟ್ವಾಳ ಮಾಜಿ ಸಚಿವ ಬಿ.ರಮಾನಾಥ ರೈ, ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬೇಬಿಕುಂದರ್, ಜಿ.ಪಂ.ಸದಸ್ಯ ಪದ್ಮಶೇಖರ್ ಜೈನ್, ಮಾಜಿ ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್ ಮತ್ತಿತರರು ಆಸ್ಪತ್ರೆ ಗೆ ಬೇಟಿ ನೀಡಿ ಅಂತಿಮ ದರ್ಶನ ಪಡೆದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...